<p>ಸಿಂಧನೂರು: ಸಿಪಿಐಎಂಎಲ್ ಲಿಬರೇಶನ್ ವತಿಯಿಂದ ‘ಕೋಮುವಾದಿ ಬಿಜೆಪಿ ಸೋಲಿಸಿ, ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಿ’ ಪ್ರಚಾರ ಆಂದೋಲನ ನಡೆಸಲಾಯಿತು.</p>.<p>ರಾಜ್ಯ ಘಟಕದ ಕಾರ್ಯದರ್ಶಿ ಕ್ಲಿಫ್ಟನ್ ಡಿ.ರೊಜೊರಿಯೋ ಮಾತನಾಡಿ,‘ಜನವಿರೋಧಿ, ಜನದ್ರೋಹಿ ಹಾಗೂ ಸಂವಿಧಾನ ವಿರೋಧಿ ಬಿಜೆಪಿ ಆಡಳಿತ ವೈಫಲ್ಯದ ವಿರುದ್ಧ ಕೊಪ್ಪಳ ಲೋಕಸಭಾ ಕ್ಷೇತ್ರದಾದ್ಯಂತ ಚುನಾವಣಾ ಜನಜಾಗೃತಿ ಆಂದೋಲನ ನಡೆಯಲಿದೆ. ಜನಸಾಮಾನ್ಯರಲ್ಲಿ ಭಾವನಾತ್ಮಕ ವಿಚಾರಗಳನ್ನು ಕೆರಳಿಸಿ ಪರಸ್ಪರ ಒಡೆದಾಳುವ ಮೂಲಕ ದೇಶದ ನೆಲ, ಜಲ, ಸಂಪತ್ತನ್ನು ಕಾರ್ಪೊರೇಟ್ ಕಂಪನಿಗಳಿಗೆ ಲೂಟಿ ಹೊಡೆಯಲು ಮುಕ್ತ ಅವಕಾಶ ನೀಡಿರುವ ಕೋಮುವಾದಿ ಬಿಜೆಪಿಯನ್ನು ಸೋಲಿಸಿ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸಬೇಕು. ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯನ್ನು ಗೆಲ್ಲಿಸಬೇಕು’ ಎಂದು ಹೇಳಿದರು.</p>.<p>ಸಿಪಿಐಎಂಎಲ್ ಲಿಬರೇಶನ್ ಜಿಲ್ಲಾ ಕಾರ್ಯದರ್ಶಿ ನಾಗರಾಜ ಪೂಜಾರ್ ಮಾತನಾಡಿದರು.</p>.<p>ಮುಖಂಡರಾದ ಬಸವರಾಜ ಬೆಳಗುರ್ಕಿ, ಆರ್.ಎಚ್.ಕಲಮಂಗಿ, ಬಸವರಾಜ ಕೊಂಡೆ, ಚಾಂದ್ ಪಾಷಾ ಬೆಳ್ಳಿಗನೂರು, ಹನುಮಂತ ದೀನಸಮ್ರುದ, ಬಸವರಾಜ ಹಿರೇದಿನ್ನಿ, ರಾಮಣ್ಣ ನಾಯಕ, ಪರುಶುರಾಮ ಭಂಡಾರಿ, ಮಹಾದೇವ, ಪಂಪಾಪತಿ ಬೆಳಗುರ್ಕಿ, ಬಸವರಾಜ, ಹನುಮಂತ ಟೈಲರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿಂಧನೂರು: ಸಿಪಿಐಎಂಎಲ್ ಲಿಬರೇಶನ್ ವತಿಯಿಂದ ‘ಕೋಮುವಾದಿ ಬಿಜೆಪಿ ಸೋಲಿಸಿ, ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಿ’ ಪ್ರಚಾರ ಆಂದೋಲನ ನಡೆಸಲಾಯಿತು.</p>.<p>ರಾಜ್ಯ ಘಟಕದ ಕಾರ್ಯದರ್ಶಿ ಕ್ಲಿಫ್ಟನ್ ಡಿ.ರೊಜೊರಿಯೋ ಮಾತನಾಡಿ,‘ಜನವಿರೋಧಿ, ಜನದ್ರೋಹಿ ಹಾಗೂ ಸಂವಿಧಾನ ವಿರೋಧಿ ಬಿಜೆಪಿ ಆಡಳಿತ ವೈಫಲ್ಯದ ವಿರುದ್ಧ ಕೊಪ್ಪಳ ಲೋಕಸಭಾ ಕ್ಷೇತ್ರದಾದ್ಯಂತ ಚುನಾವಣಾ ಜನಜಾಗೃತಿ ಆಂದೋಲನ ನಡೆಯಲಿದೆ. ಜನಸಾಮಾನ್ಯರಲ್ಲಿ ಭಾವನಾತ್ಮಕ ವಿಚಾರಗಳನ್ನು ಕೆರಳಿಸಿ ಪರಸ್ಪರ ಒಡೆದಾಳುವ ಮೂಲಕ ದೇಶದ ನೆಲ, ಜಲ, ಸಂಪತ್ತನ್ನು ಕಾರ್ಪೊರೇಟ್ ಕಂಪನಿಗಳಿಗೆ ಲೂಟಿ ಹೊಡೆಯಲು ಮುಕ್ತ ಅವಕಾಶ ನೀಡಿರುವ ಕೋಮುವಾದಿ ಬಿಜೆಪಿಯನ್ನು ಸೋಲಿಸಿ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸಬೇಕು. ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯನ್ನು ಗೆಲ್ಲಿಸಬೇಕು’ ಎಂದು ಹೇಳಿದರು.</p>.<p>ಸಿಪಿಐಎಂಎಲ್ ಲಿಬರೇಶನ್ ಜಿಲ್ಲಾ ಕಾರ್ಯದರ್ಶಿ ನಾಗರಾಜ ಪೂಜಾರ್ ಮಾತನಾಡಿದರು.</p>.<p>ಮುಖಂಡರಾದ ಬಸವರಾಜ ಬೆಳಗುರ್ಕಿ, ಆರ್.ಎಚ್.ಕಲಮಂಗಿ, ಬಸವರಾಜ ಕೊಂಡೆ, ಚಾಂದ್ ಪಾಷಾ ಬೆಳ್ಳಿಗನೂರು, ಹನುಮಂತ ದೀನಸಮ್ರುದ, ಬಸವರಾಜ ಹಿರೇದಿನ್ನಿ, ರಾಮಣ್ಣ ನಾಯಕ, ಪರುಶುರಾಮ ಭಂಡಾರಿ, ಮಹಾದೇವ, ಪಂಪಾಪತಿ ಬೆಳಗುರ್ಕಿ, ಬಸವರಾಜ, ಹನುಮಂತ ಟೈಲರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>