<p><strong>ರಾಯಚೂರು</strong>: ‘ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮಂಡಿಸಿದ ಆದಾಯ ಕೊರತೆಯ ಬಜೆಟ್ ಜಿಲ್ಲೆಗೆ ಯಾವುದೇ ವಿಶೇಷ ಯೋಜನೆಗಳಿಗೆ ಅನುದಾನವಿಲ್ಲದ ನಿರಾಶದಾಯಕ ಬಜೆಟ್ ಆಗಿದೆ’ ಎಂದು ಸಂಸದ ರಾಜಾ ಅಮರೇಶ್ವರ ನಾಯಕ ಪ್ರತಿಕ್ರಿಯಿಸಿದ್ದಾರೆ.</p>.<p>ಸಿದ್ದರಾಮಯ್ಯ ಅವರು ₹ 3,71,383 ಕೋಟಿ ಗಾತ್ರದ ಆದಾಯದ ಕೊರತೆಯ ಬಜೆಟ್ ಮಂಡಿಸಿದ್ದು ಹಾಗೂ ಕೇವಲ ಗ್ಯಾರಂಟಿ ಯೋಜನೆಗಳಿಗೆ ಹಣ ತುಂಬಿಸಲು ಹೆಚ್ಚಿನ ಸಾಲಕ್ಕೆ ಬೇಡಿಕೆ ನೀಡಿರುವುದು ರಾಜ್ಯ ಅಭಿವೃದ್ಧಿಗೆ ಧಕ್ಕೆ ಉಂಟು ಮಾಡುವ ಬಜೆಟ್ ಆಗಿದೆ ಎಂದು ಹೇಳಿದ್ದಾರೆ.</p>.<p>ಜಿಲ್ಲೆಗೆ ಕೇವಲ ಹಳೆ ಯೋಜನೆಗಳನ್ನು ಮರು ಗುರುತಿಸಲಾಗಿದೆ. ರಾಯಚೂರು ವಿಶ್ವವಿದ್ಯಾಲಯಕ್ಕೆ, ಟೆಕ್ಸ್ಟೈಲ್ ಪಾರ್ಕ್ಗೆ ಯಾವುದೇ ಅನುದಾನ ಘೋಷಣೆಯಾಗಿಲ್ಲ. ಕೇಂದ್ರ ಸರ್ಕಾರದ ನೆರವಿನ ಯೋಜನೆಗಳಾದ ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಯೋಜನೆಗಳಿಗೆ ರಾಜ್ಯದ ಪಾಲಿನ ಅನುದಾನ ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ತಿಳಿಸಿದ್ದಾರೆ.</p>.<p>ಕನಿಷ್ಠ ಪಕ್ಷ ರಾಯಚೂರು ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಅನುದಾನ ನೀಡಿದ್ದಲ್ಲಿ ಈ ಭಾಗದ ಜನರ ವಿದ್ಯಾರ್ಜನೆಗೆ ಅನುಕೂಲವಾಗುತ್ತಿತ್ತು. ವಿಶ್ವವಿದ್ಯಾಲಯ ಸ್ಥಾಪನೆಗೆ ಅರ್ಥ ಬರುತ್ತಿತ್ತು. ಕೇವಲ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಘೋಷಣೆ ಮಾಡಿದ ಯೋಜನೆಗಳನ್ನು ಪುನಃ ಉಚ್ಚರಿಸಿ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ನಿರಾಶೆಯನ್ನು ಮೂಡಿಸಿದ್ದಾರೆ ಎಂದು ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ‘ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮಂಡಿಸಿದ ಆದಾಯ ಕೊರತೆಯ ಬಜೆಟ್ ಜಿಲ್ಲೆಗೆ ಯಾವುದೇ ವಿಶೇಷ ಯೋಜನೆಗಳಿಗೆ ಅನುದಾನವಿಲ್ಲದ ನಿರಾಶದಾಯಕ ಬಜೆಟ್ ಆಗಿದೆ’ ಎಂದು ಸಂಸದ ರಾಜಾ ಅಮರೇಶ್ವರ ನಾಯಕ ಪ್ರತಿಕ್ರಿಯಿಸಿದ್ದಾರೆ.</p>.<p>ಸಿದ್ದರಾಮಯ್ಯ ಅವರು ₹ 3,71,383 ಕೋಟಿ ಗಾತ್ರದ ಆದಾಯದ ಕೊರತೆಯ ಬಜೆಟ್ ಮಂಡಿಸಿದ್ದು ಹಾಗೂ ಕೇವಲ ಗ್ಯಾರಂಟಿ ಯೋಜನೆಗಳಿಗೆ ಹಣ ತುಂಬಿಸಲು ಹೆಚ್ಚಿನ ಸಾಲಕ್ಕೆ ಬೇಡಿಕೆ ನೀಡಿರುವುದು ರಾಜ್ಯ ಅಭಿವೃದ್ಧಿಗೆ ಧಕ್ಕೆ ಉಂಟು ಮಾಡುವ ಬಜೆಟ್ ಆಗಿದೆ ಎಂದು ಹೇಳಿದ್ದಾರೆ.</p>.<p>ಜಿಲ್ಲೆಗೆ ಕೇವಲ ಹಳೆ ಯೋಜನೆಗಳನ್ನು ಮರು ಗುರುತಿಸಲಾಗಿದೆ. ರಾಯಚೂರು ವಿಶ್ವವಿದ್ಯಾಲಯಕ್ಕೆ, ಟೆಕ್ಸ್ಟೈಲ್ ಪಾರ್ಕ್ಗೆ ಯಾವುದೇ ಅನುದಾನ ಘೋಷಣೆಯಾಗಿಲ್ಲ. ಕೇಂದ್ರ ಸರ್ಕಾರದ ನೆರವಿನ ಯೋಜನೆಗಳಾದ ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಯೋಜನೆಗಳಿಗೆ ರಾಜ್ಯದ ಪಾಲಿನ ಅನುದಾನ ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ತಿಳಿಸಿದ್ದಾರೆ.</p>.<p>ಕನಿಷ್ಠ ಪಕ್ಷ ರಾಯಚೂರು ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಅನುದಾನ ನೀಡಿದ್ದಲ್ಲಿ ಈ ಭಾಗದ ಜನರ ವಿದ್ಯಾರ್ಜನೆಗೆ ಅನುಕೂಲವಾಗುತ್ತಿತ್ತು. ವಿಶ್ವವಿದ್ಯಾಲಯ ಸ್ಥಾಪನೆಗೆ ಅರ್ಥ ಬರುತ್ತಿತ್ತು. ಕೇವಲ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಘೋಷಣೆ ಮಾಡಿದ ಯೋಜನೆಗಳನ್ನು ಪುನಃ ಉಚ್ಚರಿಸಿ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ನಿರಾಶೆಯನ್ನು ಮೂಡಿಸಿದ್ದಾರೆ ಎಂದು ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>