<p><strong>ಲಿಂಗಸುಗೂರು (ರಾಯಚೂರು ಜಿಲ್ಲೆ):</strong> ತಾಲ್ಲೂಕಿನ ನೀರಲಕೇರಿ ಗ್ರಾಮದಲ್ಲಿ 6ರಿಂದ 18 ವರ್ಷದ ಮಕ್ಕಳಲ್ಲಿ ಮಂಗನ ಬಾವು (ಗದ್ದಬಾವು) ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಂಡಿದೆ. ಒಂದು ವಾರದಲ್ಲಿ ಪ್ರಾಥಮಿಕ ಶಾಲೆಯ 150ಕ್ಕೂ ಹೆಚ್ಚು ಮಕ್ಕಳಲ್ಲಿ ಮಂಗನ ಬಾವು ಕಾಣಿಸಿಕೊಂಡಿದೆ. </p>.<p>ಶಾಲೆಯ 1–7ನೇ ತರಗತಿಯಲ್ಲಿ ಒಟ್ಟು 302 ಮಕ್ಕಳು ಇದ್ದಾರೆ.</p>.<p>ಮಂಗನ ಬಾವು ಕಾಣಿಸಿಕೊಂಡ ಮಕ್ಕಳು ಜ್ವರ, ಸ್ನಾಯು ನೋವು, ತಲೆ ನೋವಿನಿಂದ ಬಳಲುತ್ತಿದ್ದಾರೆ. ಚಿಕಿತ್ಸೆಗಾಗಿ ಆನೆಹೊಸೂರು ಸಮುದಾಯ ಆರೋಗ್ಯ ಕೇಂದ್ರ, ಲಿಂಗಸುಗೂರು ಸಾರ್ವಜನಿಕ ಆಸ್ಪತ್ರೆ ಸಂಪರ್ಕಿಸಿದ್ದು, ಸ್ಥಳೀಯವಾಗಿ ಚಿಕಿತ್ಸೆ ಲಭ್ಯವಾಗದೆ ಪರದಾಡುವಂತಾಗಿದೆ.</p>.<p>ಸ್ಥಳೀಯವಾಗಿ ಚಿಕಿತ್ಸೆ ಸಿಗದಿದ್ದರಿಂದ ಬೆಲ್ಲ ಅರಿಸಿನ ಲೇಪನ, ಜಗಟು ಪಟ್ಟಿ ಸೇರಿದಂತೆ ಮನೆ ಮದ್ದಿಗೆ ಜನ ಮೊರೆಹೋಗಿದ್ದಾರೆ. </p>.<p>‘ಶಾಲೆಯಲ್ಲಿ ಬಹುತೇಕ ಮಕ್ಕಳಲ್ಲಿ ಮಂಗನಬಾವು ಕಾಯಿಲೆ ಕಾಣಿಸಿಕೊಂಡಿದೆ. ಕೆಲ ಮಕ್ಕಳು ಜ್ವರ ಇತರೆ ಲಕ್ಷಣಗಳಿಂದ ಅಸ್ವಸ್ಥಗೊಂಡಾಗ ಆನೆಹೊಸೂರು ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆ ಕಳುಹಿಸಿದ್ದೇವೆ’ ಎಂದು ಶಾಲಾ ಮುಖ್ಯ ಶಿಕ್ಷಕ ಶೇರಷಹಾ ದೋಟಿಹಾಳ ತಿಳಿಸಿದರು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಮರೇಶ ಮಾಕಾಪುರ ಅವರನ್ನು ಈ ಬಗ್ಗೆ ವಿಚಾರಿಸಿದಾಗ, ‘ಈ ರೋಗದಿಂದ ಭಯಗೊಳ್ಳುವ ಅಗತ್ಯವಿಲ್ಲ. ಸೂಕ್ತ ಚಿಕಿತ್ಸೆಗೆ ಅಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರು (ರಾಯಚೂರು ಜಿಲ್ಲೆ):</strong> ತಾಲ್ಲೂಕಿನ ನೀರಲಕೇರಿ ಗ್ರಾಮದಲ್ಲಿ 6ರಿಂದ 18 ವರ್ಷದ ಮಕ್ಕಳಲ್ಲಿ ಮಂಗನ ಬಾವು (ಗದ್ದಬಾವು) ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಂಡಿದೆ. ಒಂದು ವಾರದಲ್ಲಿ ಪ್ರಾಥಮಿಕ ಶಾಲೆಯ 150ಕ್ಕೂ ಹೆಚ್ಚು ಮಕ್ಕಳಲ್ಲಿ ಮಂಗನ ಬಾವು ಕಾಣಿಸಿಕೊಂಡಿದೆ. </p>.<p>ಶಾಲೆಯ 1–7ನೇ ತರಗತಿಯಲ್ಲಿ ಒಟ್ಟು 302 ಮಕ್ಕಳು ಇದ್ದಾರೆ.</p>.<p>ಮಂಗನ ಬಾವು ಕಾಣಿಸಿಕೊಂಡ ಮಕ್ಕಳು ಜ್ವರ, ಸ್ನಾಯು ನೋವು, ತಲೆ ನೋವಿನಿಂದ ಬಳಲುತ್ತಿದ್ದಾರೆ. ಚಿಕಿತ್ಸೆಗಾಗಿ ಆನೆಹೊಸೂರು ಸಮುದಾಯ ಆರೋಗ್ಯ ಕೇಂದ್ರ, ಲಿಂಗಸುಗೂರು ಸಾರ್ವಜನಿಕ ಆಸ್ಪತ್ರೆ ಸಂಪರ್ಕಿಸಿದ್ದು, ಸ್ಥಳೀಯವಾಗಿ ಚಿಕಿತ್ಸೆ ಲಭ್ಯವಾಗದೆ ಪರದಾಡುವಂತಾಗಿದೆ.</p>.<p>ಸ್ಥಳೀಯವಾಗಿ ಚಿಕಿತ್ಸೆ ಸಿಗದಿದ್ದರಿಂದ ಬೆಲ್ಲ ಅರಿಸಿನ ಲೇಪನ, ಜಗಟು ಪಟ್ಟಿ ಸೇರಿದಂತೆ ಮನೆ ಮದ್ದಿಗೆ ಜನ ಮೊರೆಹೋಗಿದ್ದಾರೆ. </p>.<p>‘ಶಾಲೆಯಲ್ಲಿ ಬಹುತೇಕ ಮಕ್ಕಳಲ್ಲಿ ಮಂಗನಬಾವು ಕಾಯಿಲೆ ಕಾಣಿಸಿಕೊಂಡಿದೆ. ಕೆಲ ಮಕ್ಕಳು ಜ್ವರ ಇತರೆ ಲಕ್ಷಣಗಳಿಂದ ಅಸ್ವಸ್ಥಗೊಂಡಾಗ ಆನೆಹೊಸೂರು ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆ ಕಳುಹಿಸಿದ್ದೇವೆ’ ಎಂದು ಶಾಲಾ ಮುಖ್ಯ ಶಿಕ್ಷಕ ಶೇರಷಹಾ ದೋಟಿಹಾಳ ತಿಳಿಸಿದರು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಮರೇಶ ಮಾಕಾಪುರ ಅವರನ್ನು ಈ ಬಗ್ಗೆ ವಿಚಾರಿಸಿದಾಗ, ‘ಈ ರೋಗದಿಂದ ಭಯಗೊಳ್ಳುವ ಅಗತ್ಯವಿಲ್ಲ. ಸೂಕ್ತ ಚಿಕಿತ್ಸೆಗೆ ಅಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>