<p>ರಾಯಚೂರು: ದೇಶದ ಬೆನ್ನೆಲುಬು ಎಂದು ಕರೆಯುವ ಕೃಷಿ ಕ್ಷೇತ್ರಕ್ಕೆ ಎಂಜಿನಿಯರುಗಳ ಪಾತ್ರ ಮುಖ್ಯವಾಗಿದೆ. ಇವರು ದೇಶ ಸದೃಢಗೊಳ್ಳುವಲ್ಲಿ ಹೊಸ ಕ್ರಾಂತಿಯನ್ನು ಸೃಷ್ಟಿಸಿದ್ದಾರೆ ಎಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಶಿಕ್ಷಣ ನಿರ್ದೇಶಕ ಡಾ.ಎಂ.ಜಿ.ಪಾಟೀಲ ಹೇಳಿದರು.</p>.<p>ನಗರದ ಕೃಷಿ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಕೃಷಿ ವಿಶ್ವವಿದ್ಯಾಲಯ, ಕೃಷಿ ತಾಂತ್ರಿಕ ಮಹಾವಿದ್ಯಾಲಯದಿಂದ ಬುಧವಾರ ಆಯೋಜಿಸಲಾಗಿದ್ದ ವಿದ್ಯಾರ್ಥಿ ಸಂಘ, ಕನ್ನಡ ಸಂಘ ಮತ್ತು ಅಭಿಯಂತರರ ವಿವಿಧ ಸಂಘಗಳ ಉದ್ಘಾಟನೆ ಹಾಗೂ ಎಂಜಿನಿಯರ್ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಕನ್ನಡ ಸಂಘ ಸ್ಥಾಪಿಸಿದ್ದು, ಸರ್ಕಾರ ಹೊರಡಿಸುವ ಕನ್ನಡ ಕಾರ್ಯಕ್ರಮಗಳನ್ನು ಸಂಘ ಜಾರಿಗೆ ತರಬೇಕು. ಕನ್ನಡ ಕುರಿತ ರೂಪುರೇಷೆಗಳನ್ನು ಅನುಷ್ಠಾನಗೊಳಿಸಬೇಕು. ಇದಕ್ಕೆ ವಿಶ್ವವಿದ್ಯಾಲಯದಿಂದ ಅಗತ್ಯ ಸಹಕಾರನೀಡಲಾಗುವುದು ಎಂದರು. ಲೋಕೇಶ್ವರ ರಾವ್ ಕಾಳೆ ಮಾತನಾಡಿದರು.</p>.<p>ಕೃಷಿ ವಿಶ್ವವಿದ್ಯಾಲಯದ ಮುಖ್ಯಸ್ಥ ಡಾ.ಎಂ.ನೇಮಿಚಂದ್ರಪ್ಪ, ಡಾ.ಎಂ.ವೀರನಗೌಡ, ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ಧಾರೂಢ ಬಿ.ಪಾಟೀಲ, ಮಹಾಂತೇಶ ಗಾಣಿಗಿ, ಕರಿಬಸವರಾಜ ಕರಿಗೌಡ್ರು, ಪಿ.ದಿವ್ಯ ಸೇರಿದಂತೆ ಉಪನ್ಯಾಸಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ದೇಶದ ಬೆನ್ನೆಲುಬು ಎಂದು ಕರೆಯುವ ಕೃಷಿ ಕ್ಷೇತ್ರಕ್ಕೆ ಎಂಜಿನಿಯರುಗಳ ಪಾತ್ರ ಮುಖ್ಯವಾಗಿದೆ. ಇವರು ದೇಶ ಸದೃಢಗೊಳ್ಳುವಲ್ಲಿ ಹೊಸ ಕ್ರಾಂತಿಯನ್ನು ಸೃಷ್ಟಿಸಿದ್ದಾರೆ ಎಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಶಿಕ್ಷಣ ನಿರ್ದೇಶಕ ಡಾ.ಎಂ.ಜಿ.ಪಾಟೀಲ ಹೇಳಿದರು.</p>.<p>ನಗರದ ಕೃಷಿ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಕೃಷಿ ವಿಶ್ವವಿದ್ಯಾಲಯ, ಕೃಷಿ ತಾಂತ್ರಿಕ ಮಹಾವಿದ್ಯಾಲಯದಿಂದ ಬುಧವಾರ ಆಯೋಜಿಸಲಾಗಿದ್ದ ವಿದ್ಯಾರ್ಥಿ ಸಂಘ, ಕನ್ನಡ ಸಂಘ ಮತ್ತು ಅಭಿಯಂತರರ ವಿವಿಧ ಸಂಘಗಳ ಉದ್ಘಾಟನೆ ಹಾಗೂ ಎಂಜಿನಿಯರ್ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಕನ್ನಡ ಸಂಘ ಸ್ಥಾಪಿಸಿದ್ದು, ಸರ್ಕಾರ ಹೊರಡಿಸುವ ಕನ್ನಡ ಕಾರ್ಯಕ್ರಮಗಳನ್ನು ಸಂಘ ಜಾರಿಗೆ ತರಬೇಕು. ಕನ್ನಡ ಕುರಿತ ರೂಪುರೇಷೆಗಳನ್ನು ಅನುಷ್ಠಾನಗೊಳಿಸಬೇಕು. ಇದಕ್ಕೆ ವಿಶ್ವವಿದ್ಯಾಲಯದಿಂದ ಅಗತ್ಯ ಸಹಕಾರನೀಡಲಾಗುವುದು ಎಂದರು. ಲೋಕೇಶ್ವರ ರಾವ್ ಕಾಳೆ ಮಾತನಾಡಿದರು.</p>.<p>ಕೃಷಿ ವಿಶ್ವವಿದ್ಯಾಲಯದ ಮುಖ್ಯಸ್ಥ ಡಾ.ಎಂ.ನೇಮಿಚಂದ್ರಪ್ಪ, ಡಾ.ಎಂ.ವೀರನಗೌಡ, ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ಧಾರೂಢ ಬಿ.ಪಾಟೀಲ, ಮಹಾಂತೇಶ ಗಾಣಿಗಿ, ಕರಿಬಸವರಾಜ ಕರಿಗೌಡ್ರು, ಪಿ.ದಿವ್ಯ ಸೇರಿದಂತೆ ಉಪನ್ಯಾಸಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>