<p><strong>ಲಿಂಗಸುಗೂರು</strong>: ನಾರಾಯಣಪುರ ಅಣೆಕಟ್ಟೆಯಿಂದ ಹೆಚ್ಚುವರಿ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಆದ್ದರಿಂದ ಕೃಷ್ಣೆ ದಿನದಿಂದ ದಿನಕ್ಕೆ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದಾಳೆ. ಆರೋಗ್ಯ ಇಲಾಖೆ ತುಂಬು ಗರ್ಭಿಣಿಯರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡುತ್ತಿದ್ದಾರೆ.</p>.<p>ಗುರುವಾರ ಒಬ್ಬರು, ಶುಕ್ರವಾರ ಇಬ್ಬರು ಹಾಗೂ ಶನಿವಾರ ಒಬ್ಬರನ್ನು ಗರ್ಭಿಣಿಯನ್ನು ಆಂಬುಲೆನ್ಸ್ ಮೂಲಕ ಈಚನಾಳ ಮತ್ತು ಲಿಂಗಸುಗೂರಿನ ಸಾರ್ವಜನಿಕ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ನಾಲ್ವರು ಗರ್ಭಿಣಿಯರು ಸ್ವಂತ ವಾಹನಗಳಲ್ಲಿ ಸಂಬಂಧಿಗಳ ಮನೆಗೆ ತೆರಳಿದ್ದಾರೆ. ಇನ್ನೂ ಆರು ಜನ ಮಾತ್ರ ಉಳಿದಿದ್ದಾರೆ.</p>.<p>‘ಆಂಬುಲೆನ್ಸ್ ಸಹಿತ ವೈದ್ಯರು, ಆರೋಗ್ಯ ಸಹಾಯಕರು ನಿತ್ಯ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ. ನಡುಗಡ್ಡೆ ಗ್ರಾಮಸ್ಥರ ಆರೋಗ್ಯ ರಕ್ಷಣೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಅಮರೇಶ ಪಾಟೀಲ ಮಾಕಾಪುರ ತಿಳಿಸಿದರು.</p>.<p>ಆರೋಗ್ಯ ಶಿಕ್ಷಣಾಧಿಕಾರಿ ಪ್ರಾಣೇಶ ಕುಲಕರ್ಣಿ, ಆರೋಗ್ಯ ಸಹಾಯಕರಾದ ಸಿದ್ದಲಿಂಗಪ್ಪ, ಪ್ರತಾಪ, ಶಿವಕುಮಾರ, ಅಲಿ, ಹುಲಿಗೆಮ್ಮ, ರಾಧಾ, ಜಗದೀಶ ಸೇರಿದಂತೆ ಆಶಾ ಕಾರ್ಯಕರ್ತೆಯರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರು</strong>: ನಾರಾಯಣಪುರ ಅಣೆಕಟ್ಟೆಯಿಂದ ಹೆಚ್ಚುವರಿ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಆದ್ದರಿಂದ ಕೃಷ್ಣೆ ದಿನದಿಂದ ದಿನಕ್ಕೆ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದಾಳೆ. ಆರೋಗ್ಯ ಇಲಾಖೆ ತುಂಬು ಗರ್ಭಿಣಿಯರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡುತ್ತಿದ್ದಾರೆ.</p>.<p>ಗುರುವಾರ ಒಬ್ಬರು, ಶುಕ್ರವಾರ ಇಬ್ಬರು ಹಾಗೂ ಶನಿವಾರ ಒಬ್ಬರನ್ನು ಗರ್ಭಿಣಿಯನ್ನು ಆಂಬುಲೆನ್ಸ್ ಮೂಲಕ ಈಚನಾಳ ಮತ್ತು ಲಿಂಗಸುಗೂರಿನ ಸಾರ್ವಜನಿಕ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ನಾಲ್ವರು ಗರ್ಭಿಣಿಯರು ಸ್ವಂತ ವಾಹನಗಳಲ್ಲಿ ಸಂಬಂಧಿಗಳ ಮನೆಗೆ ತೆರಳಿದ್ದಾರೆ. ಇನ್ನೂ ಆರು ಜನ ಮಾತ್ರ ಉಳಿದಿದ್ದಾರೆ.</p>.<p>‘ಆಂಬುಲೆನ್ಸ್ ಸಹಿತ ವೈದ್ಯರು, ಆರೋಗ್ಯ ಸಹಾಯಕರು ನಿತ್ಯ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ. ನಡುಗಡ್ಡೆ ಗ್ರಾಮಸ್ಥರ ಆರೋಗ್ಯ ರಕ್ಷಣೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಅಮರೇಶ ಪಾಟೀಲ ಮಾಕಾಪುರ ತಿಳಿಸಿದರು.</p>.<p>ಆರೋಗ್ಯ ಶಿಕ್ಷಣಾಧಿಕಾರಿ ಪ್ರಾಣೇಶ ಕುಲಕರ್ಣಿ, ಆರೋಗ್ಯ ಸಹಾಯಕರಾದ ಸಿದ್ದಲಿಂಗಪ್ಪ, ಪ್ರತಾಪ, ಶಿವಕುಮಾರ, ಅಲಿ, ಹುಲಿಗೆಮ್ಮ, ರಾಧಾ, ಜಗದೀಶ ಸೇರಿದಂತೆ ಆಶಾ ಕಾರ್ಯಕರ್ತೆಯರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>