<p><strong>ಹಟ್ಟಿಚಿನ್ನದಗಣಿ</strong>: ಬಾರಿಗಿಡದ ದೊಡ್ಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ‘ಹಸಿರು ಮತ್ತು ನೈರ್ಮಲ್ಯ’ ರಾಜ್ಯ ಪ್ರಶಸ್ತಿ ಲಭಿಸಿದೆ.</p>.<p>ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ನವರು ಪ್ರಶಸ್ತಿಗೆ ಶಾಲೆಯನ್ನು ಆಯ್ಕೆ ಮಾಡಿದ್ದಾರೆ. ಜು.27ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಶಾಲೆಯ ಮುಖ್ಯಶಿಕ್ಷಕರು ತಿಳಿಸಿದ್ದಾರೆ.</p>.<p>ಶಾಲೆಯ ಆವರಣ ಹಸಿರಿನಿಂದ ಕಂಗೊಳಿಸುತ್ತಿದ್ದು, ಗುರುಗುಂಟಾ ಹೋಬಳಿಯಲ್ಲಿಯೇ ಇದು ಮಾದರಿ ಶಾಲೆಯಾಗಿದೆ. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಮಕ್ಕಳನ್ನು ತೊಡಗಿಸಲಾಗುತ್ತಿದೆ. ಮಕ್ಕಳು ಪರಿಸರದಲ್ಲಿ ಅಕ್ಷರಾಭ್ಯಾಸ ಮಾಡುತ್ತಾರೆ.</p>.<p>‘ಗುಡ್ಡಗಾಡು ಪ್ರದೇಶದ ಶಾಲೆಯನ್ನು ಗುರುತಿಸಿ ಹಸಿರು ಪ್ರಶಸ್ತಿ ನೀಡುತ್ತಿರುವುದು ಸಂತಸ ತಂದಿದೆ. ನಮ್ಮ ದೊಡ್ಡಿ ಶಾಲೆಯನ್ನು ರಾಜ್ಯಕ್ಕೆ ಪರಿಚಯಿಸಿದ ಕೀರ್ತಿ ಇಲ್ಲಿನ ಮುಖ್ಯಶಿಕ್ಷಕ ಚಂದ್ರು ಅವರಿಗೆ ಸಲ್ಲುತ್ತದೆ’ ಎನ್ನುತ್ತಾರೆ ಎಸ್ಡಿಎಂಸಿ ಅಧ್ಯಕ್ಷ ದುರುಗಪ್ಪ.</p>.<p>ಶಾಲೆ ಸ್ವಚ್ಛತೆ, ಪರಿಸರ, ಕ್ರೀಡೆ, ಕಲೆ, ಸಾಂಸ್ಕೃತಿಕ ಚಟುವಟಿಕೆ ಸೇರಿ 22 ಅಂಶಗಳನ್ನು ಮಾನಡಂಡವಾಗಿ ಪರಿಗಣಿಸಿ ಸರ್ಕಾರಿ ಶಾಲೆಗೆ ರಾಜ್ಯ ಮಟ್ಟದ ಪ್ರಶಸ್ತಿ ನೀಡಿರುವುದು ಸಂತಸದ ವಿಷಯ ಎಂದು ಮುಖ್ಯಶಿಕ್ಷಕ ಚಂದ್ರು ಕಬ್ಬಲಿಗೇರ್ ತಿಳಿಸಿದರು.</p>.<p>ಗುಡ್ಡಗಾಡು ಪ್ರದೇಶದಲ್ಲಿ ಇರುವ ಸರ್ಕಾರಿ ಶಾಲೆಗೆ ರಾಜ್ಯ ಮಟ್ಟದ ಪ್ರಶಸ್ತಿ ದೊರಕಿರುವುದು ಸಂತಸದ ವಿಷಯ. ಇಂಥ ಅನೇಕ ಪ್ರಶಸ್ತಿಗಳು ಈ ಶಾಲೆಯನ್ನು ಅರಿಸಿ ಬರಲಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹುಂಬಣ್ಣ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಟ್ಟಿಚಿನ್ನದಗಣಿ</strong>: ಬಾರಿಗಿಡದ ದೊಡ್ಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ‘ಹಸಿರು ಮತ್ತು ನೈರ್ಮಲ್ಯ’ ರಾಜ್ಯ ಪ್ರಶಸ್ತಿ ಲಭಿಸಿದೆ.</p>.<p>ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ನವರು ಪ್ರಶಸ್ತಿಗೆ ಶಾಲೆಯನ್ನು ಆಯ್ಕೆ ಮಾಡಿದ್ದಾರೆ. ಜು.27ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಶಾಲೆಯ ಮುಖ್ಯಶಿಕ್ಷಕರು ತಿಳಿಸಿದ್ದಾರೆ.</p>.<p>ಶಾಲೆಯ ಆವರಣ ಹಸಿರಿನಿಂದ ಕಂಗೊಳಿಸುತ್ತಿದ್ದು, ಗುರುಗುಂಟಾ ಹೋಬಳಿಯಲ್ಲಿಯೇ ಇದು ಮಾದರಿ ಶಾಲೆಯಾಗಿದೆ. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಮಕ್ಕಳನ್ನು ತೊಡಗಿಸಲಾಗುತ್ತಿದೆ. ಮಕ್ಕಳು ಪರಿಸರದಲ್ಲಿ ಅಕ್ಷರಾಭ್ಯಾಸ ಮಾಡುತ್ತಾರೆ.</p>.<p>‘ಗುಡ್ಡಗಾಡು ಪ್ರದೇಶದ ಶಾಲೆಯನ್ನು ಗುರುತಿಸಿ ಹಸಿರು ಪ್ರಶಸ್ತಿ ನೀಡುತ್ತಿರುವುದು ಸಂತಸ ತಂದಿದೆ. ನಮ್ಮ ದೊಡ್ಡಿ ಶಾಲೆಯನ್ನು ರಾಜ್ಯಕ್ಕೆ ಪರಿಚಯಿಸಿದ ಕೀರ್ತಿ ಇಲ್ಲಿನ ಮುಖ್ಯಶಿಕ್ಷಕ ಚಂದ್ರು ಅವರಿಗೆ ಸಲ್ಲುತ್ತದೆ’ ಎನ್ನುತ್ತಾರೆ ಎಸ್ಡಿಎಂಸಿ ಅಧ್ಯಕ್ಷ ದುರುಗಪ್ಪ.</p>.<p>ಶಾಲೆ ಸ್ವಚ್ಛತೆ, ಪರಿಸರ, ಕ್ರೀಡೆ, ಕಲೆ, ಸಾಂಸ್ಕೃತಿಕ ಚಟುವಟಿಕೆ ಸೇರಿ 22 ಅಂಶಗಳನ್ನು ಮಾನಡಂಡವಾಗಿ ಪರಿಗಣಿಸಿ ಸರ್ಕಾರಿ ಶಾಲೆಗೆ ರಾಜ್ಯ ಮಟ್ಟದ ಪ್ರಶಸ್ತಿ ನೀಡಿರುವುದು ಸಂತಸದ ವಿಷಯ ಎಂದು ಮುಖ್ಯಶಿಕ್ಷಕ ಚಂದ್ರು ಕಬ್ಬಲಿಗೇರ್ ತಿಳಿಸಿದರು.</p>.<p>ಗುಡ್ಡಗಾಡು ಪ್ರದೇಶದಲ್ಲಿ ಇರುವ ಸರ್ಕಾರಿ ಶಾಲೆಗೆ ರಾಜ್ಯ ಮಟ್ಟದ ಪ್ರಶಸ್ತಿ ದೊರಕಿರುವುದು ಸಂತಸದ ವಿಷಯ. ಇಂಥ ಅನೇಕ ಪ್ರಶಸ್ತಿಗಳು ಈ ಶಾಲೆಯನ್ನು ಅರಿಸಿ ಬರಲಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹುಂಬಣ್ಣ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>