<p><strong>ರಾಯಚೂರು</strong>: ದೇವದುರ್ಗದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿವಿಧ ವೃತ್ತಿಗಳಲ್ಲಿ ಮೆರಿಟ್ ಹಾಗೂ ಮೀಸಲಾತಿ ಆಧಾರದ ಮೇಲೆ ನೇರ ಪ್ರವೇಶಕ್ಕಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.</p>.<p>ಅರ್ಹ ಆಸಕ್ತ ಎಸ್ಸೆಸ್ಸೆಲ್ಸಿ ಪಾಸ್, ಫೇಲ್ ಆದ ಅಭ್ಯರ್ಥಿಗಳು ನೇರ ಪ್ರವೇಶಕ್ಕೆ ಆಫ್ ಲೈನ್ ಪಡೆದು ಅರ್ಜಿಯನ್ನು ಪಡೆದು ಆಗಸ್ಟ್ 31 ರೊಳಗೆ ಸಲ್ಲಿಸಲು ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.</p>.<p>ಪ್ರವೇಶ ಹಾಗೂ ಬೋಧನಾ ಶುಲ್ಕ ₹1200 ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9740671796, ತರಬೇತಿ ಅಧಿಕಾರಿಗಳ ಮೊಬೈಲ್ ಸಂಖ್ಯೆ 7676126770ಗೆ ಸಂಪರ್ಕಿಸಬಹುದು ಎಂದು ಪ್ರಾಚಾರ್ಯರು ತಿಳಿಸಿದ್ದಾರೆ.</p>.<p><strong>27 ರಂದು ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ</strong></p>.<p><strong>ರಾಯಚೂರು</strong>: ಭವಿಷ್ಯನಿಧಿ, ಪಿಂಚಣಿ ಸಂಬಂಧಿತ ಕುಂದು ಕೊರತೆ ನಿವಾರಣೆಗಾಗಿ ಜುಲೈ 27ರಂದು ಬೆಳಿಗ್ಗೆ 9.30ರಿಂದ ಸಂಜೆ 4ರ ವರೆಗೆ ನಗರದ ಕನ್ನಡ ಭವನದಲ್ಲಿ ‘ನಿಧಿ ಆಪ್ಕೆ ನಿಕಟ್’ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ ಪ್ರಾದೇಶಿಕ ಕಚೇರಿಯ ಆಯುಕ್ತರು ತಿಳಿಸಿದ್ದಾರೆ.</p>.<p>ಜಿಲ್ಲೆಯ ಉದ್ಯೋಗದಾತರು, ನೌಕರರು ಮತ್ತು ಪಿಂಚಣಿದಾರರು, ಇಪಿಎಫ್ ಚಂದಾದಾರರು ಮತ್ತು ಉದ್ಯೋಗದಾತರು ಈ ಕಾರ್ಯಕ್ರಮಕ್ಕೆ ಹಾಜರಾಗಿ ಇದರ ಪ್ರಯೋಜನ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ sro.raichur@epfindia.gov.in ನಲ್ಲಿ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ. </p>.<p><strong>ನಗರಸಭೆ ಪ್ರಭಾರ ಪೌರಾಯುಕ್ತರಾಗಿ ಮೆಹಬೂಬ ಜಿಲಾನಿ</strong></p>.<p>ರಾಯಚೂರು ನಗರಸಭೆ ಪ್ರಭಾರ ಪೌರಾಯುಕ್ತರಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಮೆಹಬೂಬ ಜಿಲಾನಿ ಅವರನ್ನು ಜಿಲ್ಲಾಧಿಕಾರಿ ನಿಯೋಜಿಸಿದ್ದಾರೆ.</p>.<p> <strong>ನಿರುದ್ಯೋಗಿ ಅಭ್ಯರ್ಥಿಗಳಿಗೆ ಪೂರ್ವಭಾವಿ ತರಬೇತಿ</strong></p>.<p>ರಾಯಚೂರು ಜಿಲ್ಲೆಯಲ್ಲಿ ನಿರುದ್ಯೋಗಿ ಅಭ್ಯರ್ಥಿಗಳು ಕೆಇಎ ಇಂದ ಅಧಿಸೂಚಿಸಲ್ಪಟ್ಟ ಗ್ರೂಪ್-ಬಿ ಮತ್ತು ಗ್ರೂಪ್-ಸಿ ಹುದ್ದೆಗಳಿಗೆ ಜುನ್ 24 ರಿಂದ ಆಗಸ್ಟ್ 8ರವರೆಗೆ 13 ದಿನಗಳ ಪೂರ್ವ ಭಾವಿ ಆಯ್ಕೆಯ ಪೂರ್ವ ತರಬೇತಿಯನ್ನು ಆಯೋಜಿಸಲಾಗಿದೆ.</p>.<p>ನುರಿತ ಉಪನ್ಯಾಸಕರಿಂದ ಸಾಮಾನ್ಯ ಜ್ಞಾನ, ಕನ್ನಡ, ಇಂಗ್ಲಿಷ್, ಗಣಿತ, ಕಂಟ್ಯೂಟರ್ ವಿಷಯ ಕುರಿತು ಉಪನ್ಯಾಸ ತರಬೇತಿ ನಗರದ ಗೂಡ್ಸ್ಶೆಡ್ ರಸ್ತೆಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಆವರಣದಲ್ಲಿ ಏರ್ಪಡಿಸಲಾಗುತ್ತದೆ. ಸಮಯ ಮಧ್ಯಹ್ನ 2 ರಿಂದ ಸಂಜೆ 6 ವರೆಗೆ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಈ ತರಬೇತಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08532-231684, 9901028565, 0873610442, 8678603928 ಗೆ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ದೇವದುರ್ಗದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿವಿಧ ವೃತ್ತಿಗಳಲ್ಲಿ ಮೆರಿಟ್ ಹಾಗೂ ಮೀಸಲಾತಿ ಆಧಾರದ ಮೇಲೆ ನೇರ ಪ್ರವೇಶಕ್ಕಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.</p>.<p>ಅರ್ಹ ಆಸಕ್ತ ಎಸ್ಸೆಸ್ಸೆಲ್ಸಿ ಪಾಸ್, ಫೇಲ್ ಆದ ಅಭ್ಯರ್ಥಿಗಳು ನೇರ ಪ್ರವೇಶಕ್ಕೆ ಆಫ್ ಲೈನ್ ಪಡೆದು ಅರ್ಜಿಯನ್ನು ಪಡೆದು ಆಗಸ್ಟ್ 31 ರೊಳಗೆ ಸಲ್ಲಿಸಲು ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.</p>.<p>ಪ್ರವೇಶ ಹಾಗೂ ಬೋಧನಾ ಶುಲ್ಕ ₹1200 ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9740671796, ತರಬೇತಿ ಅಧಿಕಾರಿಗಳ ಮೊಬೈಲ್ ಸಂಖ್ಯೆ 7676126770ಗೆ ಸಂಪರ್ಕಿಸಬಹುದು ಎಂದು ಪ್ರಾಚಾರ್ಯರು ತಿಳಿಸಿದ್ದಾರೆ.</p>.<p><strong>27 ರಂದು ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ</strong></p>.<p><strong>ರಾಯಚೂರು</strong>: ಭವಿಷ್ಯನಿಧಿ, ಪಿಂಚಣಿ ಸಂಬಂಧಿತ ಕುಂದು ಕೊರತೆ ನಿವಾರಣೆಗಾಗಿ ಜುಲೈ 27ರಂದು ಬೆಳಿಗ್ಗೆ 9.30ರಿಂದ ಸಂಜೆ 4ರ ವರೆಗೆ ನಗರದ ಕನ್ನಡ ಭವನದಲ್ಲಿ ‘ನಿಧಿ ಆಪ್ಕೆ ನಿಕಟ್’ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ ಪ್ರಾದೇಶಿಕ ಕಚೇರಿಯ ಆಯುಕ್ತರು ತಿಳಿಸಿದ್ದಾರೆ.</p>.<p>ಜಿಲ್ಲೆಯ ಉದ್ಯೋಗದಾತರು, ನೌಕರರು ಮತ್ತು ಪಿಂಚಣಿದಾರರು, ಇಪಿಎಫ್ ಚಂದಾದಾರರು ಮತ್ತು ಉದ್ಯೋಗದಾತರು ಈ ಕಾರ್ಯಕ್ರಮಕ್ಕೆ ಹಾಜರಾಗಿ ಇದರ ಪ್ರಯೋಜನ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ sro.raichur@epfindia.gov.in ನಲ್ಲಿ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ. </p>.<p><strong>ನಗರಸಭೆ ಪ್ರಭಾರ ಪೌರಾಯುಕ್ತರಾಗಿ ಮೆಹಬೂಬ ಜಿಲಾನಿ</strong></p>.<p>ರಾಯಚೂರು ನಗರಸಭೆ ಪ್ರಭಾರ ಪೌರಾಯುಕ್ತರಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಮೆಹಬೂಬ ಜಿಲಾನಿ ಅವರನ್ನು ಜಿಲ್ಲಾಧಿಕಾರಿ ನಿಯೋಜಿಸಿದ್ದಾರೆ.</p>.<p> <strong>ನಿರುದ್ಯೋಗಿ ಅಭ್ಯರ್ಥಿಗಳಿಗೆ ಪೂರ್ವಭಾವಿ ತರಬೇತಿ</strong></p>.<p>ರಾಯಚೂರು ಜಿಲ್ಲೆಯಲ್ಲಿ ನಿರುದ್ಯೋಗಿ ಅಭ್ಯರ್ಥಿಗಳು ಕೆಇಎ ಇಂದ ಅಧಿಸೂಚಿಸಲ್ಪಟ್ಟ ಗ್ರೂಪ್-ಬಿ ಮತ್ತು ಗ್ರೂಪ್-ಸಿ ಹುದ್ದೆಗಳಿಗೆ ಜುನ್ 24 ರಿಂದ ಆಗಸ್ಟ್ 8ರವರೆಗೆ 13 ದಿನಗಳ ಪೂರ್ವ ಭಾವಿ ಆಯ್ಕೆಯ ಪೂರ್ವ ತರಬೇತಿಯನ್ನು ಆಯೋಜಿಸಲಾಗಿದೆ.</p>.<p>ನುರಿತ ಉಪನ್ಯಾಸಕರಿಂದ ಸಾಮಾನ್ಯ ಜ್ಞಾನ, ಕನ್ನಡ, ಇಂಗ್ಲಿಷ್, ಗಣಿತ, ಕಂಟ್ಯೂಟರ್ ವಿಷಯ ಕುರಿತು ಉಪನ್ಯಾಸ ತರಬೇತಿ ನಗರದ ಗೂಡ್ಸ್ಶೆಡ್ ರಸ್ತೆಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಆವರಣದಲ್ಲಿ ಏರ್ಪಡಿಸಲಾಗುತ್ತದೆ. ಸಮಯ ಮಧ್ಯಹ್ನ 2 ರಿಂದ ಸಂಜೆ 6 ವರೆಗೆ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಈ ತರಬೇತಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08532-231684, 9901028565, 0873610442, 8678603928 ಗೆ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>