<p><strong>ಲಿಂಗಸುಗೂರು</strong>: ರಾಜ್ಯದ ಸರ್ಕಾರಿ, ಅರೆ ಸರ್ಕಾರಿ ಸೇರಿದಂತೆ ಖಾಸಗಿ ಕಂಪನಿಗಳಲ್ಲಿ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಕನ್ನ ಡಿಗರಿಗೆ ಶೇ 75ರಷ್ಟು ಮೀಸಲಾತಿ ಸೌಲಭ್ಯ ಕಲ್ಪಿಸಲು ಸರ್ಕಾರ ವಿಧೇಯಕ ಜಾರಿ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಶೆಟ್ಟಿ ಬಣ) ಕಾರ್ಯಕರ್ತರು ಒತ್ತಾಯಿಸಿದರು.</p>.<p>ಉಪ ವಿಭಾಗಾಧಿಕಾರಿ ಶಿಂಧೆ ಅವಿನಾಶ ಸಂಜೀವನ್ ಅವರಿಗೆ ಮನವಿ ಸಲ್ಲಿಸಿ,‘ರಾಜ್ಯದಲ್ಲಿ ಸ್ಥಾಪನೆಗೊಳ್ಳುವ ಕಂಪನಿಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಕಲ್ಪಿಸುವ ವಿಧೇಯಕ–2024 ಅನುಷ್ಠಾನಕ್ಕೆ ತರಬೇಕು. ವೃಂದವಾರು ಮೀಸಲಾತಿ ಘೋಷಿಸುವ ಬದಲು ಕನಿಷ್ಠ ಶೇ 75ರಷ್ಟು ಹುದ್ದೆಗಳಲ್ಲಿ ನಮ್ಮವರಿಗೆ ಆದ್ಯತೆ ನೀಡಲು ಸರ್ಕಾರ ದಿಟ್ಟ ನಿರ್ಧಾರ ಪ್ರಕಟಿಸಬೇಕು’ ಎಂದು ಗಮನ ಸೆಳೆದರು.</p>.<p>ಕನ್ನಡ ನೆಲ, ಜಲ, ವಿದ್ಯುತ್ ಸೇರಿ ಸರ್ಕಾರಿ ಸೌಲಭ್ಯ ಪಡೆದುಕೊಳ್ಳುವ ಕಂಪನಿಗಳು ವಿವಿಧ ಹುದ್ದೆಗಳಲ್ಲಿ ಶೇ 75ರಷ್ಟು ಅವಕಾಶ ಕಲ್ಪಿಸದೆ ಹೋದರೆ ನಿಷೇಧಿಸಬೇಕು. ಅಧಿವೇಶನದಲ್ಲಿ ವಿಶೇಷ ವಿಧೇಯಕ ಮಂಡಿಸಿ ಜಾರಿಗೆ ತರಬೇಕು. ಇಲ್ಲದಿದ್ದರೆ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.</p>.<p>ತಾಲ್ಲೂಕು ಘಟಕದ ಅಧ್ಯಕ್ಷ ಆಂಜನೇಯ ಭಂಡಾರಿ, ಮುಖಂಡರಾದ ಭೀಮೇಶ ನಾಯಕ, ಕುರುಮೇಶ ನಾಯಕ, ಪ್ರಭಾಕರ ಗಸ್ತಿ, ಸಲೀಂಖಾನ್, ಶಿವು ಪತ್ತಾರ, ಮುತ್ತುರಾಜು, ನಾಗರಾಜ ಗುತ್ತೆದಾರ ಹಾಗೂ ಸಿದ್ಧು ಚಲುವಾದಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರು</strong>: ರಾಜ್ಯದ ಸರ್ಕಾರಿ, ಅರೆ ಸರ್ಕಾರಿ ಸೇರಿದಂತೆ ಖಾಸಗಿ ಕಂಪನಿಗಳಲ್ಲಿ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಕನ್ನ ಡಿಗರಿಗೆ ಶೇ 75ರಷ್ಟು ಮೀಸಲಾತಿ ಸೌಲಭ್ಯ ಕಲ್ಪಿಸಲು ಸರ್ಕಾರ ವಿಧೇಯಕ ಜಾರಿ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಶೆಟ್ಟಿ ಬಣ) ಕಾರ್ಯಕರ್ತರು ಒತ್ತಾಯಿಸಿದರು.</p>.<p>ಉಪ ವಿಭಾಗಾಧಿಕಾರಿ ಶಿಂಧೆ ಅವಿನಾಶ ಸಂಜೀವನ್ ಅವರಿಗೆ ಮನವಿ ಸಲ್ಲಿಸಿ,‘ರಾಜ್ಯದಲ್ಲಿ ಸ್ಥಾಪನೆಗೊಳ್ಳುವ ಕಂಪನಿಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಕಲ್ಪಿಸುವ ವಿಧೇಯಕ–2024 ಅನುಷ್ಠಾನಕ್ಕೆ ತರಬೇಕು. ವೃಂದವಾರು ಮೀಸಲಾತಿ ಘೋಷಿಸುವ ಬದಲು ಕನಿಷ್ಠ ಶೇ 75ರಷ್ಟು ಹುದ್ದೆಗಳಲ್ಲಿ ನಮ್ಮವರಿಗೆ ಆದ್ಯತೆ ನೀಡಲು ಸರ್ಕಾರ ದಿಟ್ಟ ನಿರ್ಧಾರ ಪ್ರಕಟಿಸಬೇಕು’ ಎಂದು ಗಮನ ಸೆಳೆದರು.</p>.<p>ಕನ್ನಡ ನೆಲ, ಜಲ, ವಿದ್ಯುತ್ ಸೇರಿ ಸರ್ಕಾರಿ ಸೌಲಭ್ಯ ಪಡೆದುಕೊಳ್ಳುವ ಕಂಪನಿಗಳು ವಿವಿಧ ಹುದ್ದೆಗಳಲ್ಲಿ ಶೇ 75ರಷ್ಟು ಅವಕಾಶ ಕಲ್ಪಿಸದೆ ಹೋದರೆ ನಿಷೇಧಿಸಬೇಕು. ಅಧಿವೇಶನದಲ್ಲಿ ವಿಶೇಷ ವಿಧೇಯಕ ಮಂಡಿಸಿ ಜಾರಿಗೆ ತರಬೇಕು. ಇಲ್ಲದಿದ್ದರೆ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.</p>.<p>ತಾಲ್ಲೂಕು ಘಟಕದ ಅಧ್ಯಕ್ಷ ಆಂಜನೇಯ ಭಂಡಾರಿ, ಮುಖಂಡರಾದ ಭೀಮೇಶ ನಾಯಕ, ಕುರುಮೇಶ ನಾಯಕ, ಪ್ರಭಾಕರ ಗಸ್ತಿ, ಸಲೀಂಖಾನ್, ಶಿವು ಪತ್ತಾರ, ಮುತ್ತುರಾಜು, ನಾಗರಾಜ ಗುತ್ತೆದಾರ ಹಾಗೂ ಸಿದ್ಧು ಚಲುವಾದಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>