<p><strong>ಸಿಂಧನೂರು:</strong> 2024-25ನೇ ಸಾಲಿನ ಬಜೆಟ್ನಲ್ಲಿ ಕೃಷಿ ಕೂಲಿಕಾರರ ಮತ್ತು ಗ್ರಾಮೀಣ ಕೆಲಸಗಾರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ತಾಲ್ಲೂಕು ಘಟಕ ಸೋಮವಾರ ಸ್ಥಳೀಯ ಶಾಸಕ ಹಂಪನಗೌಡ ಬಾದರ್ಲಿ ಅವರಿಗೆ ಮನವಿ ಪತ್ರ ಸಲ್ಲಿಸಿತು.</p>.<p>ಅಸಂಘಟಿತ ಕಾರ್ಮಿಕರಿಗೆ ಇರುವಂತೆ ಕೃಷಿ ಕೂಲಿಕಾರರಿಗಾಗಿ ಕಲ್ಯಾಣ ನಿಧಿ ಸ್ಥಾಪಿಸಿ, ಕಲ್ಯಾಣ ಮಂಡಳಿಯ ಮೂಲಕ ಅದರ ನಿರ್ವಹಣೆ ಮಾಡುವುದಾಗಿ ಬಜೆಟ್ನಲ್ಲಿ ಘೋಷಿಸಬೇಕು. ಉದ್ಯೋಗ ಖಾತ್ರಿ ಕೆಲಸಗಾರರಿಗೆ ಆಧಾರ್ ಅಡಿಯಲ್ಲಿ ವೇತನ ನೀಡುವ ಪದ್ಧತಿ ಕೈಬಿಡಬೇಕು. ನರೇಗಾ ಯೋಜನೆಯನ್ನು ನಗರ ಪ್ರದೇಶಗಳಿಗೂ ವಿಸ್ತರಿಸಿ, 200 ದಿನಗಳ ಕೆಲಸ ಕೊಟ್ಟು, ದಿನಕ್ಕೆ ₹600 ಕೂಲಿ ಕೊಡಬೇಕು. ವಸತಿ ರಹಿತ ಕೂಲಿಕಾರರಿಗೆ ನಿವೇಶನ ಹಾಗೂ ಮನೆಗಳನ್ನು ನಿರ್ಮಿಸಿ ಕೊಡಬೇಕು. ಸರ್ಕಾರಿ ಭೂಮಿಯಲ್ಲಿ ವಾಸಿಸುತ್ತಿರುವ ಕೂಲಿಕಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಅಪ್ಪಣ್ಣ ಕಾಂಬಳೆ ಆಗ್ರಹಿಸಿದರು.</p>.<p>ಸರ್ಕಾರಿ ಭೂಮಿಯನ್ನು ಸಾಗುವಳಿ ಮಾಡುತ್ತಿರುವ ಕೂಲಿಕಾರರನ್ನು ಒಕ್ಕಲೆಬ್ಬಿಸಬಾರದು. ಅವರಿಗೆ ತಲಾ 4 ಎಕರೆಯಂತೆ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಿ ಸಾಗುವಳಿ ಚೀಟಿ ಕೊಡಬೇಕು. ಮಹಿಳೆಯರಿಗೆ ಜಂಟಿ ಪಟ್ಟಾ ಕೊಡಬೇಕು. ಆಸಕ್ತಿಯಿರುವ ಭೂರಹಿತ ದಲಿತ ಕುಟುಂಬಗಳು ಮತ್ತು ದೇವದಾಸಿ ಮಹಿಳೆಯರಿಗೆ ಕನಿಷ್ಠ 2 ಎಕರೆ ಭೂಮಿ ನೀಡಬೇಕು. ವಿದ್ಯುತ್ ಖಾಸಗೀಕರಣ ಕೈಬಿಡಬೇಕು. ಕೇರಳ ಮಾದರಿಯಲ್ಲಿ ಕೂಲಿಕಾರರಿಗೆ ಬ್ಯಾಂಕ್ ಮೂಲಕ ಸಬ್ಸಿಡಿ ಸಹಿತದ ಸಾಲ, ಋಣ ಮುಕ್ತ ಕಾಯ್ದೆ, ಸಮಗ್ರ ಪಡಿತರ ಪದ್ಧತಿ, 60 ವರ್ಷ ವಯಸ್ಸಾಗಿರುವ ಕೂಲಿಕಾರರಿಗೆ ತಲಾ ₹5 ಸಾವಿರ ಮಾಸಿಕ ನಿವೃತ್ತಿ ವೇತನ ನೀಡಬೇಕು. ಅಸ್ಪೃಶ್ಯತೆ ಆಚರಿಸುತ್ತಿರುವವರ ವಿರುದ್ಧ ಪೊಲೀಸರು ಸ್ವಂತ ನಿರ್ಧಾರದ ಪ್ರಕರಣ ದಾಖಲು ಮಾಡಿಕೊಳ್ಳಬೇಕು. ಹಿಂದಿನ ಸರ್ಕಾರ ಜಾರಿ ಮಾಡಿರುವ ಭೂ ಸುಧಾರಣಾ ತಿದ್ದುಪಡಿ, ಎಪಿಎಂಸಿ, ಜಾನುವಾರ ಹತ್ಯೆ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.</p>.<p>ಶಾಸಕರ ಅನುಪಸ್ಥಿತಿಯಲ್ಲಿ ಅವರ ಆಪ್ತಸಹಾಯಕ ಮುತ್ತಣ್ಣ ಮನವಿ ಪತ್ರ ಸ್ವೀಕರಿಸಿದರು. ಸಂಘದ ಅಧ್ಯಕ್ಷ ಶಂಕ್ರಪ್ಪ ಕೆಂಗಲ್, ಹುಸೇನಪ್ಪ ದಢೇಸುಗೂರು, ವಿ.ಗುಡದಪ್ಪ ಕುರಕುಂದಾ, ಬಸವರಾಜ ತಿಡಿಗೋಳ, ಅಮೀನ್ಪಾಷಾ ಗೋಮರ್ಸಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಧನೂರು:</strong> 2024-25ನೇ ಸಾಲಿನ ಬಜೆಟ್ನಲ್ಲಿ ಕೃಷಿ ಕೂಲಿಕಾರರ ಮತ್ತು ಗ್ರಾಮೀಣ ಕೆಲಸಗಾರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ತಾಲ್ಲೂಕು ಘಟಕ ಸೋಮವಾರ ಸ್ಥಳೀಯ ಶಾಸಕ ಹಂಪನಗೌಡ ಬಾದರ್ಲಿ ಅವರಿಗೆ ಮನವಿ ಪತ್ರ ಸಲ್ಲಿಸಿತು.</p>.<p>ಅಸಂಘಟಿತ ಕಾರ್ಮಿಕರಿಗೆ ಇರುವಂತೆ ಕೃಷಿ ಕೂಲಿಕಾರರಿಗಾಗಿ ಕಲ್ಯಾಣ ನಿಧಿ ಸ್ಥಾಪಿಸಿ, ಕಲ್ಯಾಣ ಮಂಡಳಿಯ ಮೂಲಕ ಅದರ ನಿರ್ವಹಣೆ ಮಾಡುವುದಾಗಿ ಬಜೆಟ್ನಲ್ಲಿ ಘೋಷಿಸಬೇಕು. ಉದ್ಯೋಗ ಖಾತ್ರಿ ಕೆಲಸಗಾರರಿಗೆ ಆಧಾರ್ ಅಡಿಯಲ್ಲಿ ವೇತನ ನೀಡುವ ಪದ್ಧತಿ ಕೈಬಿಡಬೇಕು. ನರೇಗಾ ಯೋಜನೆಯನ್ನು ನಗರ ಪ್ರದೇಶಗಳಿಗೂ ವಿಸ್ತರಿಸಿ, 200 ದಿನಗಳ ಕೆಲಸ ಕೊಟ್ಟು, ದಿನಕ್ಕೆ ₹600 ಕೂಲಿ ಕೊಡಬೇಕು. ವಸತಿ ರಹಿತ ಕೂಲಿಕಾರರಿಗೆ ನಿವೇಶನ ಹಾಗೂ ಮನೆಗಳನ್ನು ನಿರ್ಮಿಸಿ ಕೊಡಬೇಕು. ಸರ್ಕಾರಿ ಭೂಮಿಯಲ್ಲಿ ವಾಸಿಸುತ್ತಿರುವ ಕೂಲಿಕಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಅಪ್ಪಣ್ಣ ಕಾಂಬಳೆ ಆಗ್ರಹಿಸಿದರು.</p>.<p>ಸರ್ಕಾರಿ ಭೂಮಿಯನ್ನು ಸಾಗುವಳಿ ಮಾಡುತ್ತಿರುವ ಕೂಲಿಕಾರರನ್ನು ಒಕ್ಕಲೆಬ್ಬಿಸಬಾರದು. ಅವರಿಗೆ ತಲಾ 4 ಎಕರೆಯಂತೆ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಿ ಸಾಗುವಳಿ ಚೀಟಿ ಕೊಡಬೇಕು. ಮಹಿಳೆಯರಿಗೆ ಜಂಟಿ ಪಟ್ಟಾ ಕೊಡಬೇಕು. ಆಸಕ್ತಿಯಿರುವ ಭೂರಹಿತ ದಲಿತ ಕುಟುಂಬಗಳು ಮತ್ತು ದೇವದಾಸಿ ಮಹಿಳೆಯರಿಗೆ ಕನಿಷ್ಠ 2 ಎಕರೆ ಭೂಮಿ ನೀಡಬೇಕು. ವಿದ್ಯುತ್ ಖಾಸಗೀಕರಣ ಕೈಬಿಡಬೇಕು. ಕೇರಳ ಮಾದರಿಯಲ್ಲಿ ಕೂಲಿಕಾರರಿಗೆ ಬ್ಯಾಂಕ್ ಮೂಲಕ ಸಬ್ಸಿಡಿ ಸಹಿತದ ಸಾಲ, ಋಣ ಮುಕ್ತ ಕಾಯ್ದೆ, ಸಮಗ್ರ ಪಡಿತರ ಪದ್ಧತಿ, 60 ವರ್ಷ ವಯಸ್ಸಾಗಿರುವ ಕೂಲಿಕಾರರಿಗೆ ತಲಾ ₹5 ಸಾವಿರ ಮಾಸಿಕ ನಿವೃತ್ತಿ ವೇತನ ನೀಡಬೇಕು. ಅಸ್ಪೃಶ್ಯತೆ ಆಚರಿಸುತ್ತಿರುವವರ ವಿರುದ್ಧ ಪೊಲೀಸರು ಸ್ವಂತ ನಿರ್ಧಾರದ ಪ್ರಕರಣ ದಾಖಲು ಮಾಡಿಕೊಳ್ಳಬೇಕು. ಹಿಂದಿನ ಸರ್ಕಾರ ಜಾರಿ ಮಾಡಿರುವ ಭೂ ಸುಧಾರಣಾ ತಿದ್ದುಪಡಿ, ಎಪಿಎಂಸಿ, ಜಾನುವಾರ ಹತ್ಯೆ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.</p>.<p>ಶಾಸಕರ ಅನುಪಸ್ಥಿತಿಯಲ್ಲಿ ಅವರ ಆಪ್ತಸಹಾಯಕ ಮುತ್ತಣ್ಣ ಮನವಿ ಪತ್ರ ಸ್ವೀಕರಿಸಿದರು. ಸಂಘದ ಅಧ್ಯಕ್ಷ ಶಂಕ್ರಪ್ಪ ಕೆಂಗಲ್, ಹುಸೇನಪ್ಪ ದಢೇಸುಗೂರು, ವಿ.ಗುಡದಪ್ಪ ಕುರಕುಂದಾ, ಬಸವರಾಜ ತಿಡಿಗೋಳ, ಅಮೀನ್ಪಾಷಾ ಗೋಮರ್ಸಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>