<p><strong>ರಾಯಚೂರು:</strong> ‘ಅಯೋಡಿನ್ ಮನುಷ್ಯನಿಗೆ ಅಗತ್ಯವಾಗಿ ಬೇಕಾಗುವ ಸೂಕ್ಷ್ಮ ಪೋಷಕಾಂಶ. ಇದು ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಅವಶ್ಯಕ’ ಎಂದು ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಸರೋಜಾ ಕೆ. ಹೇಳಿದರು.</p>.<p>ನಗರದ ಇಂದ್ರನಗರದ ಅಂಬೇಡ್ಕರ್ ಭವನದಲ್ಲಿ ವಿಶ್ವ ಅಯೋಡಿನ್ ಕೊರತೆಯ ನ್ಯೂನತೆಗಳ ನಿಯಂತ್ರಣ ದಿನ ಹಾಗೂ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ತಾಯಿಯ ಗರ್ಭದಲ್ಲಿರುವಾಗಲೇ ಶಿಶುವಿನ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಪ್ರಾರಂಭವಾಗುತ್ತದೆ. ಈ ಸಂದರ್ಭದಲ್ಲಿ ಗರ್ಭಿಣಿಯರಲ್ಲಿ ಅಯೋಡಿನ್ ಅಂಶ ಕೊರತೆಯಿದ್ದರೆ ಶಿಶುವಿನಲ್ಲಿ ಸರಿಪಡಿಸಲಾಗದಂಥ ದೈಹಿಕ ಹಾಗೂ ಮಾನಸಿಕ ತೊಂದರೆಗಳು ಉಂಟಾಗುತ್ತವೆ’ ಎಂದು ತಿಳಿಸಿದರು.</p>.<p>‘ಅಯೋಡಿನ್ ಕೊರತೆ ಅಲ್ಪಪ್ರಮಾಣದಲ್ಲಿದ್ದರೂ ಪ್ರಾರಂಭದಲ್ಲಿ ಮಗುವಿಗೆ ಬೆಳವಣಿಗೆ ಸಹಜವಾಗಿ ಕಂಡರೂ ಕ್ರಮೇಣ ಕುಂಠಿತ ಬೆಳವಣಿಗೆ, ಬುದ್ಧಿ ಮಾಂದ್ಯತೆ, ಕಿವುಡು, ಮೂಕತನ ಮತ್ತಿತರ ನ್ಯೂನತೆಗಳು ಕಾಣಿಸಿಕೊಳ್ಳಬಹುದು. ಗರ್ಭಿಣಿಯರಲ್ಲಿ ಅಯೋಡಿನ್ ಕೊರತೆಯಿಂದ ಪದೇ-ಪದೇ ಗರ್ಭಪಾತ, ಸತ್ತು ಹುಟ್ಟುವ ಮಕ್ಕಳ ಸಂಖ್ಯೆಯಲ್ಲಿ ಹೆಚ್ಚಳ ಹಾಗೂ ಸಂತಾನೋತ್ಪತ್ತಿಯಲ್ಲಿ ತೊಂದರೆ ಆಗುತ್ತದೆ’ ಎಂದರು.<br><br> ‘ಉಪ್ಪಿನಲ್ಲಿ 15-30 ಪಿಪಿಪಿಎಂ ಆಯೋಡಿನ್ ಇರಬೇಕು. ಒಂದು ದಿನಕ್ಕೆ ಅಗತ್ಯವಿರುವ ಅಯೋಡಿನ್ ಅಂಶದ ಪ್ರಮಾಣ ವಯಸ್ಕರಲ್ಲಿ 150 ಮೈಕ್ರೋ ಗ್ರಾಂ, ಗರ್ಭಿಣಿಯರು, ಬಾಣಂತಿಯರಿಗೆ 200 ಮೈಕ್ರೋ ಗ್ರಾಂ, 0-1ತಿಂಗಳ ಮಕ್ಕಳಿಗೆ 50 ಮೈಕ್ರೋ ಗ್ರಾಂ, 12-59 ತಿಂಗಳ ಮಕ್ಕಳಿಗೆ 90 ಮೈಕ್ರೋ ಗ್ರಾಂ, ಶಾಲಾ ಮಕ್ಕಳಿಗೆ 120 ಮೈಕ್ರೋ ಗ್ರಾಂ ಬೇಕು. ಪ್ರತಿಯೊಬ್ಬರು ತಮ್ಮ ದಿನನಿತ್ಯದ ಆಹಾರದಲ್ಲಿ ಅಯೋಡಿನ್ಯುಕ್ತ ಉಪ್ಪನ್ನು ಬಳಸುವುದರಿಂದ ಗಳಗಂಡ ರೋಗ, ನ್ಯೂನತೆಗಳ ನಿವಾರಣೆ ಸಾಧ್ಯ’ ಎಂದರು.</p>.<p>ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶಶಿಕಲಾ, ಎಚ್ಐಒ ಶ್ರುತಿ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ‘ಅಯೋಡಿನ್ ಮನುಷ್ಯನಿಗೆ ಅಗತ್ಯವಾಗಿ ಬೇಕಾಗುವ ಸೂಕ್ಷ್ಮ ಪೋಷಕಾಂಶ. ಇದು ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಅವಶ್ಯಕ’ ಎಂದು ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಸರೋಜಾ ಕೆ. ಹೇಳಿದರು.</p>.<p>ನಗರದ ಇಂದ್ರನಗರದ ಅಂಬೇಡ್ಕರ್ ಭವನದಲ್ಲಿ ವಿಶ್ವ ಅಯೋಡಿನ್ ಕೊರತೆಯ ನ್ಯೂನತೆಗಳ ನಿಯಂತ್ರಣ ದಿನ ಹಾಗೂ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ತಾಯಿಯ ಗರ್ಭದಲ್ಲಿರುವಾಗಲೇ ಶಿಶುವಿನ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಪ್ರಾರಂಭವಾಗುತ್ತದೆ. ಈ ಸಂದರ್ಭದಲ್ಲಿ ಗರ್ಭಿಣಿಯರಲ್ಲಿ ಅಯೋಡಿನ್ ಅಂಶ ಕೊರತೆಯಿದ್ದರೆ ಶಿಶುವಿನಲ್ಲಿ ಸರಿಪಡಿಸಲಾಗದಂಥ ದೈಹಿಕ ಹಾಗೂ ಮಾನಸಿಕ ತೊಂದರೆಗಳು ಉಂಟಾಗುತ್ತವೆ’ ಎಂದು ತಿಳಿಸಿದರು.</p>.<p>‘ಅಯೋಡಿನ್ ಕೊರತೆ ಅಲ್ಪಪ್ರಮಾಣದಲ್ಲಿದ್ದರೂ ಪ್ರಾರಂಭದಲ್ಲಿ ಮಗುವಿಗೆ ಬೆಳವಣಿಗೆ ಸಹಜವಾಗಿ ಕಂಡರೂ ಕ್ರಮೇಣ ಕುಂಠಿತ ಬೆಳವಣಿಗೆ, ಬುದ್ಧಿ ಮಾಂದ್ಯತೆ, ಕಿವುಡು, ಮೂಕತನ ಮತ್ತಿತರ ನ್ಯೂನತೆಗಳು ಕಾಣಿಸಿಕೊಳ್ಳಬಹುದು. ಗರ್ಭಿಣಿಯರಲ್ಲಿ ಅಯೋಡಿನ್ ಕೊರತೆಯಿಂದ ಪದೇ-ಪದೇ ಗರ್ಭಪಾತ, ಸತ್ತು ಹುಟ್ಟುವ ಮಕ್ಕಳ ಸಂಖ್ಯೆಯಲ್ಲಿ ಹೆಚ್ಚಳ ಹಾಗೂ ಸಂತಾನೋತ್ಪತ್ತಿಯಲ್ಲಿ ತೊಂದರೆ ಆಗುತ್ತದೆ’ ಎಂದರು.<br><br> ‘ಉಪ್ಪಿನಲ್ಲಿ 15-30 ಪಿಪಿಪಿಎಂ ಆಯೋಡಿನ್ ಇರಬೇಕು. ಒಂದು ದಿನಕ್ಕೆ ಅಗತ್ಯವಿರುವ ಅಯೋಡಿನ್ ಅಂಶದ ಪ್ರಮಾಣ ವಯಸ್ಕರಲ್ಲಿ 150 ಮೈಕ್ರೋ ಗ್ರಾಂ, ಗರ್ಭಿಣಿಯರು, ಬಾಣಂತಿಯರಿಗೆ 200 ಮೈಕ್ರೋ ಗ್ರಾಂ, 0-1ತಿಂಗಳ ಮಕ್ಕಳಿಗೆ 50 ಮೈಕ್ರೋ ಗ್ರಾಂ, 12-59 ತಿಂಗಳ ಮಕ್ಕಳಿಗೆ 90 ಮೈಕ್ರೋ ಗ್ರಾಂ, ಶಾಲಾ ಮಕ್ಕಳಿಗೆ 120 ಮೈಕ್ರೋ ಗ್ರಾಂ ಬೇಕು. ಪ್ರತಿಯೊಬ್ಬರು ತಮ್ಮ ದಿನನಿತ್ಯದ ಆಹಾರದಲ್ಲಿ ಅಯೋಡಿನ್ಯುಕ್ತ ಉಪ್ಪನ್ನು ಬಳಸುವುದರಿಂದ ಗಳಗಂಡ ರೋಗ, ನ್ಯೂನತೆಗಳ ನಿವಾರಣೆ ಸಾಧ್ಯ’ ಎಂದರು.</p>.<p>ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶಶಿಕಲಾ, ಎಚ್ಐಒ ಶ್ರುತಿ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>