<p><strong>ಸಿರವಾರ</strong>: ಸಂವಿಧಾನದ ಮೂಲಕ ಪ್ರತಿಯೊಬ್ಬರಲ್ಲಿದ್ದ ಮೇಲು ಕೀಳು, ಭೇದ ಭಾವ, ಧರ್ಮ, ಜಾತಿ, ಉದ್ಯೋಗ ಹೆಸರಿನಲ್ಲಿ ತಾರತಮ್ಯ ಹೋಗಲಾಡಿಸಲು ಶ್ರಮಿಸಿದ ಮಹಾನ್ ನಾಯಕ ಡಾ.ಬಿ.ಅರ್.ಅಂಬೇಡ್ಕರ್ ಎಂದು ಮಾಚನೂರು ಉನ್ನತೀಕರಿಸಿದ ಸ.ಹಿ.ಪ್ರಾ.ಶಾಲೆ ಶಿಕ್ಷಕ ಜಯಪ್ಪ ಕಡದೊಡ್ಡಿ ಹೇಳಿದರು.</p>.<p>ತಾಲ್ಲೂಕಿನ ಮಾಡಗಿರಿ ಗ್ರಾಮದಲ್ಲಿ ಬಹುಜನ ಸಂಘರ್ಷ ಸಮಿತಿಯಿಂದ ಗುರುವಾರ ನಡೆದ 89ನೇ ಮನೆ-ಮನೆಗೆ ಅಂಬೇಡ್ಕರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಪ್ರತಿಯೊಬ್ಬರು ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಉತ್ತಮ ನಾಗರೀಕನಾಗಬೇಕು ಎಂಬುದು ಅವರ ಆಶಯವಾಗಿತ್ತು, ಅವರು ಹಾಕಿಕೊಟ್ಟ ದಾರಿಯನ್ನು ಸದ್ಬಳಕೆ ಮಾಡಿಕೊಂಡು ನಾವು ಸಮಾಜದ ಪರಿವರ್ತನೆಗೆ ಕೈಜೋಡಿಸೋಣ ಎಂದರು.</p>.<p>ಬಹುಜನ ಸಂಘರ್ಷ ಸಮಿತಿ ಅಧ್ಯಕ್ಷ ಜೆ.ಶರಣಪ್ಪ ಬಲ್ಲಟಗಿ, ಶಿಕ್ಷಕ ಮೋದಿನ್ ಸಾಬ್ ಮಾಚನೂರು, ಸಂಪನ್ಮೂಲ ವ್ಯಕ್ತಿ ಎಂ.ಡಿ.ಹುಸೇನ್ ಮಾಡಗಿರಿ ಮಾತನಾಡಿದರು.</p>.<p>ಮಾಡಗಿರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ತಾರಮ್ಮ, ರವಿ ಮಾಡಗಿರಿ, ಚನ್ನಬಸವ ಮಾಡಗಿರಿ, ಯಲ್ಲಮ್ಮ, ಹನುಮಂತ, ಭಿಮಪ್ಪ ಸೇರಿದಂತೆ ಶಾಲಾ ಮಕ್ಕಳು, ಮಹಿಳೆಯರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರವಾರ</strong>: ಸಂವಿಧಾನದ ಮೂಲಕ ಪ್ರತಿಯೊಬ್ಬರಲ್ಲಿದ್ದ ಮೇಲು ಕೀಳು, ಭೇದ ಭಾವ, ಧರ್ಮ, ಜಾತಿ, ಉದ್ಯೋಗ ಹೆಸರಿನಲ್ಲಿ ತಾರತಮ್ಯ ಹೋಗಲಾಡಿಸಲು ಶ್ರಮಿಸಿದ ಮಹಾನ್ ನಾಯಕ ಡಾ.ಬಿ.ಅರ್.ಅಂಬೇಡ್ಕರ್ ಎಂದು ಮಾಚನೂರು ಉನ್ನತೀಕರಿಸಿದ ಸ.ಹಿ.ಪ್ರಾ.ಶಾಲೆ ಶಿಕ್ಷಕ ಜಯಪ್ಪ ಕಡದೊಡ್ಡಿ ಹೇಳಿದರು.</p>.<p>ತಾಲ್ಲೂಕಿನ ಮಾಡಗಿರಿ ಗ್ರಾಮದಲ್ಲಿ ಬಹುಜನ ಸಂಘರ್ಷ ಸಮಿತಿಯಿಂದ ಗುರುವಾರ ನಡೆದ 89ನೇ ಮನೆ-ಮನೆಗೆ ಅಂಬೇಡ್ಕರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಪ್ರತಿಯೊಬ್ಬರು ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಉತ್ತಮ ನಾಗರೀಕನಾಗಬೇಕು ಎಂಬುದು ಅವರ ಆಶಯವಾಗಿತ್ತು, ಅವರು ಹಾಕಿಕೊಟ್ಟ ದಾರಿಯನ್ನು ಸದ್ಬಳಕೆ ಮಾಡಿಕೊಂಡು ನಾವು ಸಮಾಜದ ಪರಿವರ್ತನೆಗೆ ಕೈಜೋಡಿಸೋಣ ಎಂದರು.</p>.<p>ಬಹುಜನ ಸಂಘರ್ಷ ಸಮಿತಿ ಅಧ್ಯಕ್ಷ ಜೆ.ಶರಣಪ್ಪ ಬಲ್ಲಟಗಿ, ಶಿಕ್ಷಕ ಮೋದಿನ್ ಸಾಬ್ ಮಾಚನೂರು, ಸಂಪನ್ಮೂಲ ವ್ಯಕ್ತಿ ಎಂ.ಡಿ.ಹುಸೇನ್ ಮಾಡಗಿರಿ ಮಾತನಾಡಿದರು.</p>.<p>ಮಾಡಗಿರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ತಾರಮ್ಮ, ರವಿ ಮಾಡಗಿರಿ, ಚನ್ನಬಸವ ಮಾಡಗಿರಿ, ಯಲ್ಲಮ್ಮ, ಹನುಮಂತ, ಭಿಮಪ್ಪ ಸೇರಿದಂತೆ ಶಾಲಾ ಮಕ್ಕಳು, ಮಹಿಳೆಯರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>