<p><strong>ದೇವದುರ್ಗ:</strong> ನಾರಾಯಣಪುರದ ಬಸವಸಾಗರ ಜಲಾಶಯದಿಂದ ಗುರುವಾರ ಸಂಜೆ 25 ಗೇಟ್ ಮೂಲಕ 2.5 ಲಕ್ಷ ಕ್ಯುಸೆಕ್ ನೀರು ಕೃಷ್ಣಾ ನದಿಗೆ ಹರಿಸಲಾಗಿದೆ. ತಾಲ್ಲೂಕಿನ ಹೂವಿನಹೆಡಗಿ ಸೇತುವೆ ಸಂಪೂರ್ಣ ಮುಳುಗಡೆಯಾಗಿ ಸಂಚಾರ ಬಂದ್ ಮಾಡಲಾಗಿದೆ. ದೇವದುರ್ಗದಿಂದ ಶಹಾಪುರ, ಕಲಬುರಗಿ, ಬೀದರ್, ಯಾದಗಿರಿ ತೆರಳುವ ವಾಹನಗಳು ತಿಂಥಣಿ ಬ್ರಿಜ್ ಮೂಲಕ ಸಂಚರಿಸುತ್ತಿವೆ.</p>.<p>ತಾಲ್ಲೂಕು ಆಡಳಿತ ಸೇತುವೆ ಹತ್ತಿರ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಿದೆ. ತಾಲ್ಲೂಕಿನ ನದಿ ತೀರದ 40 ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ನದಿಯ ನೀರು ನೋಡಲು ಜನರು ಕೃಷ್ಣ ನದಿಯ ಬ್ರಿಜ್ ಹತ್ತಿರ ಧಾವಿಸುತ್ತಿದ್ದಾರೆ. ದಿನದಿಂದ ದಿನಕ್ಕೆ ಜಲಾಶಯದ ಒಳಹರಿವು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಮತ್ತಷ್ಟು ನೀರು ಹರಿದು ಬರುವ ಸಾಧ್ಯತೆ ಇದೆ. ಶುಕ್ರವಾರ 2.5 ಲಕ್ಷ ದಿಂದ 3 ಲಕ್ಷ ಕ್ಯುಸೆಕ್ ನೀರು ಬರುವ ಸಾಧ್ಯತೆ ಇದ್ದು ಹೂವಿನಹೆಡಗಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ.</p>.<p>ತಾಲ್ಲೂಕಿನ ಸುಮಾರು 40 ಕ್ಕೂ ಹೆಚ್ಚಿನ ಹಳ್ಳಿಗಳು ಪ್ರವಾಹಕ್ಕೆ ಸಿಲುಕಲಿವೆ. ಬುಧವಾರ ರಾತ್ರಿ ವರೆಗೆ 2 ಲಕ್ಷ 25 ಸಾವಿರ ಕ್ಯುಸೆಕ್ ನೀರು ಮಾತ್ರ ಹರಿಸಿದ್ದರು. ಗುರುವಾರ ಜಲಾಶಯದ ಪ್ರಕಟಣೆಯಲ್ಲಿ ಸಹಾಯಂಕಾಲ ಗಂಟೆ ವರೆಗೆ 2.5 ಲಕ್ಷ ಕ್ಯುಸೆಕ್ ನೀರು ಬಿಟ್ಟಿರುವ ಹಿನ್ನೆಲೆ ಕೆಲ ನದಿ ಪಾತ್ರದ ಗ್ರಾಮಗಳಲ್ಲಿ ಪ್ರವಾಹ ಎದುರಾಗಿದೆ.</p>.<p>’ಮಹಾರಾಷ್ಟ್ರದಲ್ಲಿ ನಿರಂತರವಾಗಿ ಮಳೆ ಸುರಿದಿದ್ದರಿಂದ ಒಳ ಹರಿವು ಮತ್ತಷ್ಟು ಹೆಚ್ಚಾಗಿದೆ. ನಾಳೆ ಮತ್ತಷ್ಟು ನೀರು ಬಿಡುವ ಸಾದ್ಯತೆ ಇದೆ. ಪ್ರವಾಹ ಸಂಭವಿಸುವ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ’ ಎಂದು ತಹಶೀಲ್ದಾರ ಚನ್ನಮಲ್ಲಪ್ಪ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವದುರ್ಗ:</strong> ನಾರಾಯಣಪುರದ ಬಸವಸಾಗರ ಜಲಾಶಯದಿಂದ ಗುರುವಾರ ಸಂಜೆ 25 ಗೇಟ್ ಮೂಲಕ 2.5 ಲಕ್ಷ ಕ್ಯುಸೆಕ್ ನೀರು ಕೃಷ್ಣಾ ನದಿಗೆ ಹರಿಸಲಾಗಿದೆ. ತಾಲ್ಲೂಕಿನ ಹೂವಿನಹೆಡಗಿ ಸೇತುವೆ ಸಂಪೂರ್ಣ ಮುಳುಗಡೆಯಾಗಿ ಸಂಚಾರ ಬಂದ್ ಮಾಡಲಾಗಿದೆ. ದೇವದುರ್ಗದಿಂದ ಶಹಾಪುರ, ಕಲಬುರಗಿ, ಬೀದರ್, ಯಾದಗಿರಿ ತೆರಳುವ ವಾಹನಗಳು ತಿಂಥಣಿ ಬ್ರಿಜ್ ಮೂಲಕ ಸಂಚರಿಸುತ್ತಿವೆ.</p>.<p>ತಾಲ್ಲೂಕು ಆಡಳಿತ ಸೇತುವೆ ಹತ್ತಿರ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಿದೆ. ತಾಲ್ಲೂಕಿನ ನದಿ ತೀರದ 40 ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ನದಿಯ ನೀರು ನೋಡಲು ಜನರು ಕೃಷ್ಣ ನದಿಯ ಬ್ರಿಜ್ ಹತ್ತಿರ ಧಾವಿಸುತ್ತಿದ್ದಾರೆ. ದಿನದಿಂದ ದಿನಕ್ಕೆ ಜಲಾಶಯದ ಒಳಹರಿವು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಮತ್ತಷ್ಟು ನೀರು ಹರಿದು ಬರುವ ಸಾಧ್ಯತೆ ಇದೆ. ಶುಕ್ರವಾರ 2.5 ಲಕ್ಷ ದಿಂದ 3 ಲಕ್ಷ ಕ್ಯುಸೆಕ್ ನೀರು ಬರುವ ಸಾಧ್ಯತೆ ಇದ್ದು ಹೂವಿನಹೆಡಗಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ.</p>.<p>ತಾಲ್ಲೂಕಿನ ಸುಮಾರು 40 ಕ್ಕೂ ಹೆಚ್ಚಿನ ಹಳ್ಳಿಗಳು ಪ್ರವಾಹಕ್ಕೆ ಸಿಲುಕಲಿವೆ. ಬುಧವಾರ ರಾತ್ರಿ ವರೆಗೆ 2 ಲಕ್ಷ 25 ಸಾವಿರ ಕ್ಯುಸೆಕ್ ನೀರು ಮಾತ್ರ ಹರಿಸಿದ್ದರು. ಗುರುವಾರ ಜಲಾಶಯದ ಪ್ರಕಟಣೆಯಲ್ಲಿ ಸಹಾಯಂಕಾಲ ಗಂಟೆ ವರೆಗೆ 2.5 ಲಕ್ಷ ಕ್ಯುಸೆಕ್ ನೀರು ಬಿಟ್ಟಿರುವ ಹಿನ್ನೆಲೆ ಕೆಲ ನದಿ ಪಾತ್ರದ ಗ್ರಾಮಗಳಲ್ಲಿ ಪ್ರವಾಹ ಎದುರಾಗಿದೆ.</p>.<p>’ಮಹಾರಾಷ್ಟ್ರದಲ್ಲಿ ನಿರಂತರವಾಗಿ ಮಳೆ ಸುರಿದಿದ್ದರಿಂದ ಒಳ ಹರಿವು ಮತ್ತಷ್ಟು ಹೆಚ್ಚಾಗಿದೆ. ನಾಳೆ ಮತ್ತಷ್ಟು ನೀರು ಬಿಡುವ ಸಾದ್ಯತೆ ಇದೆ. ಪ್ರವಾಹ ಸಂಭವಿಸುವ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ’ ಎಂದು ತಹಶೀಲ್ದಾರ ಚನ್ನಮಲ್ಲಪ್ಪ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>