<p><strong>ಹಟ್ಟಿ ಚಿನ್ನದ ಗಣಿ (ರಾಯಚೂರು ಜಿಲ್ಲೆ): ಹ</strong>ಟ್ಟಿ ಚಿನ್ನದ ಗಣಿ ಕಂಪನಿಯ ಆವರಣದಲ್ಲೇ ಇರುವ ಮಲ್ಲಪ್ಪ ಶಾಫ್ಟ್ನ ಭೂಮಿಯ ಕೆಳಮೈ ವಿಭಾಗದಲ್ಲಿ ಶುಕ್ರವಾರ ಬೆಳಗಿನ ಜಾವ 3.30ಕ್ಕೆ ಭೂಕುಸಿತವಾಗಿ ಒಬ್ಬ ಕಾರ್ಮಿಕ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.</p><p>ಭೂಕುಸಿತದಲ್ಲಿ ಮೌನೇಶ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಯಾಸಪಟ್ಟು ಮೌನೇಶ ಅವರ ಶವ ಹೊರ ತೆಗೆಯಲಾಗಿದೆ. ಗಂಭೀರವಾಗಿ ಗಾಯಗೊಂಡ ನಾಲ್ವರಿಗೆ ಕಂಪನಿಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕಳಿಸಿಕೊಡಲಾಗಿದೆ.</p><p>ಮೃತರು ಸಂಬಂಧಿಕರು ಹಾಗೂ ಕಾರ್ಮಿಕರ ಮುಖಂಡರು ಮೃತನ ಕುಟುಂಬದವರಿಗೆ ಪರಿಹಾರ ಘೋಷಿಸುವವರೆಗೂ ಶವ ಪರೀಕ್ಷೆಗೆ ಅವಕಾಶ ಕೊಡುವುದಿಲ್ಲ ಎಂದು ಪಟ್ಟು ಹಿಡಿದ್ದಾರೆ. ಹೀಗಾಗಿ ಕಂಪನಿಯ ಆವರಣದಲ್ಲಿ ತ್ವೇಷಮಯ ವಾತಾವರಣ ನಿರ್ಮಾಣವಾಗಿದೆ.</p><p>ಗಣಿ ಕಂಪನಿ ಆಸ್ಪತ್ರೆಗೆ ಕಾರ್ಯ ನಿರ್ವಾಹಕ ನಿರ್ದೇಶಕ, ಪ್ರಧಾನ ವ್ಯವಸ್ಥಾಪಕ ಹಾಗೂ ಉಪ ಪ್ರಧಾನ ವ್ಯವಸ್ಥಾಪಕ, ಅಧಿಕಾರಿಗಳು ಕಾರ್ಮಿಕ ಸಂಘದ ಮುಖಂಡರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಟ್ಟಿ ಚಿನ್ನದ ಗಣಿ (ರಾಯಚೂರು ಜಿಲ್ಲೆ): ಹ</strong>ಟ್ಟಿ ಚಿನ್ನದ ಗಣಿ ಕಂಪನಿಯ ಆವರಣದಲ್ಲೇ ಇರುವ ಮಲ್ಲಪ್ಪ ಶಾಫ್ಟ್ನ ಭೂಮಿಯ ಕೆಳಮೈ ವಿಭಾಗದಲ್ಲಿ ಶುಕ್ರವಾರ ಬೆಳಗಿನ ಜಾವ 3.30ಕ್ಕೆ ಭೂಕುಸಿತವಾಗಿ ಒಬ್ಬ ಕಾರ್ಮಿಕ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.</p><p>ಭೂಕುಸಿತದಲ್ಲಿ ಮೌನೇಶ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಯಾಸಪಟ್ಟು ಮೌನೇಶ ಅವರ ಶವ ಹೊರ ತೆಗೆಯಲಾಗಿದೆ. ಗಂಭೀರವಾಗಿ ಗಾಯಗೊಂಡ ನಾಲ್ವರಿಗೆ ಕಂಪನಿಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕಳಿಸಿಕೊಡಲಾಗಿದೆ.</p><p>ಮೃತರು ಸಂಬಂಧಿಕರು ಹಾಗೂ ಕಾರ್ಮಿಕರ ಮುಖಂಡರು ಮೃತನ ಕುಟುಂಬದವರಿಗೆ ಪರಿಹಾರ ಘೋಷಿಸುವವರೆಗೂ ಶವ ಪರೀಕ್ಷೆಗೆ ಅವಕಾಶ ಕೊಡುವುದಿಲ್ಲ ಎಂದು ಪಟ್ಟು ಹಿಡಿದ್ದಾರೆ. ಹೀಗಾಗಿ ಕಂಪನಿಯ ಆವರಣದಲ್ಲಿ ತ್ವೇಷಮಯ ವಾತಾವರಣ ನಿರ್ಮಾಣವಾಗಿದೆ.</p><p>ಗಣಿ ಕಂಪನಿ ಆಸ್ಪತ್ರೆಗೆ ಕಾರ್ಯ ನಿರ್ವಾಹಕ ನಿರ್ದೇಶಕ, ಪ್ರಧಾನ ವ್ಯವಸ್ಥಾಪಕ ಹಾಗೂ ಉಪ ಪ್ರಧಾನ ವ್ಯವಸ್ಥಾಪಕ, ಅಧಿಕಾರಿಗಳು ಕಾರ್ಮಿಕ ಸಂಘದ ಮುಖಂಡರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>