<p><strong>ರಾಯಚೂರು:</strong> ‘ಆಗಸ್ಟ್ 14ರವರೆಗೆ ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನ ನಡೆಯಲಿದ್ದು, ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಿಬ್ಬಂದಿ ಮನೆ ಮನೆ ಭೇಟಿ ನೀಡುವ ಸಂದರ್ಭದಲ್ಲಿ ಕುಷ್ಠ ರೋಗದ ಲಕ್ಷಣಗಳು ಕಂಡುಬಂದಲ್ಲಿ ಅಗತ್ಯ ಮಾಹಿತಿ ನೀಡಿ ಸಹಕರಿಸಬೇಕು’ ಎಂದು ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ಯಶೋಧ ಹೇಳಿದರು.</p>.<p>ನಗರದ ವಿವಿಧ ಕಾಲೊನಿಗಳಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಷ್ಠರೋಗ ನಿರ್ಮೂಲನ ವಿಭಾಗದ ವತಿಯಿಂದ ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಸಾರ್ವಜನಿಕರು ತಮ್ಮ ದೇಹದ ಯಾವುದೇ ಭಾಗದಲ್ಲಿ ತಿಳಿಬಿಳಿ ತಾಮ್ರ ವರ್ಣದ ಅಥವಾ ಕೆಂಪುಮಿಶ್ರಿತ ಸ್ಪರ್ಶ ಜ್ಞಾನವಿಲ್ಲದ ಮಚ್ಚೆ ಕಂಡು ಬಂದಲ್ಲಿ ಇದು ಕುಷ್ಠ ರೋಗದ ಲಕ್ಷಣವಾಗಿರುತ್ತದೆ. ಅಂತಹವರು ಕೂಡಲೇ ಹತ್ತಿರದ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ವೈದ್ಯರಿಂದ ತಪಾಸಣೆಗೆ ಒಳಪಡಬೇಕು. ಅಗತ್ಯವಿದ್ದಲ್ಲಿ ಚಿಕಿತ್ಸೆ ಪಡೆಯಬೇಕು ಎಂದು ಸಲಹೆ ನೀಡಿದರು.</p>.<p>ಕೈ ಕಾಲುಗಳಲ್ಲಿ ಜೋಮು ಹಿಡಿಯುವಿಕೆ, ಮುಖ ಮತ್ತು ಕಿವಿಗಳ ಮೇಲೆ ಎಣ್ಣೆ ಸವರಿದಂತ ಹೊಳಪು ಮತ್ತು ಗಂಟುಗಳು, ಕಣ್ಣು ರೆಪ್ಪೆ ಮುಚ್ಚಲು ಸಾಮರ್ಥ್ಯವಿಲ್ಲದಿರುವುದು, ಬಿಸಿ ಮತ್ತು ತಣ್ಣನೆಯ ವಸ್ತುಗಳನ್ನು ಮುಟ್ಟಿದಾಗ ಸ್ಪರ್ಶದ ಅರಿವಿಲ್ಲದಿರುವುದು, ಅಂಗೈ ಮತ್ತು ಪಾದಗಳಲ್ಲಿ ಬಲಹೀನತೆ ಇಂತಹ ಸಮಸ್ಯೆಗಳಿದ್ದಲ್ಲಿ ವೈದ್ಯರ ಬಳಿ ಪರೀಕ್ಷಿಸಿಕೊಳ್ಳಬೇಕು. ಅಲ್ಲದೆ ಕುಷ್ಠ ರೋಗವನ್ನು ಬಹುವಿಧ ಔಷಧಿ ಚಿಕಿತ್ಸೆಯಿಂದ ಗುಣಪಡಿಸಬಹುದು. ಆರಂಭಿಕ ಹಂತದಲ್ಲಿಯೇ ಕುಷ್ಠರೋಗ ಪತ್ತೆ ಹಚ್ಚುವ ಮೂಲಕ ಅಂಗವಿಕಲತೆ ತಪ್ಪಿಸಬಹುದು ಎಂದು ಹೇಳಿದರು.</p>.<p>ಜಿಲ್ಲಾ ಆರೋಗ್ಯ ಮತ್ತು ತಾಲ್ಲೂಕು ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ‘ಆಗಸ್ಟ್ 14ರವರೆಗೆ ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನ ನಡೆಯಲಿದ್ದು, ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಿಬ್ಬಂದಿ ಮನೆ ಮನೆ ಭೇಟಿ ನೀಡುವ ಸಂದರ್ಭದಲ್ಲಿ ಕುಷ್ಠ ರೋಗದ ಲಕ್ಷಣಗಳು ಕಂಡುಬಂದಲ್ಲಿ ಅಗತ್ಯ ಮಾಹಿತಿ ನೀಡಿ ಸಹಕರಿಸಬೇಕು’ ಎಂದು ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ಯಶೋಧ ಹೇಳಿದರು.</p>.<p>ನಗರದ ವಿವಿಧ ಕಾಲೊನಿಗಳಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಷ್ಠರೋಗ ನಿರ್ಮೂಲನ ವಿಭಾಗದ ವತಿಯಿಂದ ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಸಾರ್ವಜನಿಕರು ತಮ್ಮ ದೇಹದ ಯಾವುದೇ ಭಾಗದಲ್ಲಿ ತಿಳಿಬಿಳಿ ತಾಮ್ರ ವರ್ಣದ ಅಥವಾ ಕೆಂಪುಮಿಶ್ರಿತ ಸ್ಪರ್ಶ ಜ್ಞಾನವಿಲ್ಲದ ಮಚ್ಚೆ ಕಂಡು ಬಂದಲ್ಲಿ ಇದು ಕುಷ್ಠ ರೋಗದ ಲಕ್ಷಣವಾಗಿರುತ್ತದೆ. ಅಂತಹವರು ಕೂಡಲೇ ಹತ್ತಿರದ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ವೈದ್ಯರಿಂದ ತಪಾಸಣೆಗೆ ಒಳಪಡಬೇಕು. ಅಗತ್ಯವಿದ್ದಲ್ಲಿ ಚಿಕಿತ್ಸೆ ಪಡೆಯಬೇಕು ಎಂದು ಸಲಹೆ ನೀಡಿದರು.</p>.<p>ಕೈ ಕಾಲುಗಳಲ್ಲಿ ಜೋಮು ಹಿಡಿಯುವಿಕೆ, ಮುಖ ಮತ್ತು ಕಿವಿಗಳ ಮೇಲೆ ಎಣ್ಣೆ ಸವರಿದಂತ ಹೊಳಪು ಮತ್ತು ಗಂಟುಗಳು, ಕಣ್ಣು ರೆಪ್ಪೆ ಮುಚ್ಚಲು ಸಾಮರ್ಥ್ಯವಿಲ್ಲದಿರುವುದು, ಬಿಸಿ ಮತ್ತು ತಣ್ಣನೆಯ ವಸ್ತುಗಳನ್ನು ಮುಟ್ಟಿದಾಗ ಸ್ಪರ್ಶದ ಅರಿವಿಲ್ಲದಿರುವುದು, ಅಂಗೈ ಮತ್ತು ಪಾದಗಳಲ್ಲಿ ಬಲಹೀನತೆ ಇಂತಹ ಸಮಸ್ಯೆಗಳಿದ್ದಲ್ಲಿ ವೈದ್ಯರ ಬಳಿ ಪರೀಕ್ಷಿಸಿಕೊಳ್ಳಬೇಕು. ಅಲ್ಲದೆ ಕುಷ್ಠ ರೋಗವನ್ನು ಬಹುವಿಧ ಔಷಧಿ ಚಿಕಿತ್ಸೆಯಿಂದ ಗುಣಪಡಿಸಬಹುದು. ಆರಂಭಿಕ ಹಂತದಲ್ಲಿಯೇ ಕುಷ್ಠರೋಗ ಪತ್ತೆ ಹಚ್ಚುವ ಮೂಲಕ ಅಂಗವಿಕಲತೆ ತಪ್ಪಿಸಬಹುದು ಎಂದು ಹೇಳಿದರು.</p>.<p>ಜಿಲ್ಲಾ ಆರೋಗ್ಯ ಮತ್ತು ತಾಲ್ಲೂಕು ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>