<p><strong>ಲಿಂಗಸುಗೂರು</strong>: ಸ್ಥಳೀಯ ನ್ಯಾಯಾಲಯದಲ್ಲಿ ಶನಿವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರ ಮತ್ತು ವಕೀಲರ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ₹4.01 ಕೋಟಿ ಮೊತ್ತದ ಪರಿಹಾರದ 9,865 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ.</p>.<p>₹53,80,828 ಪರಿಹಾರ ಮೊತ್ತದ 50 ಸಿವಿಲ್ ಪ್ರಕರಣಗಳು, ₹95,82,974 ಪರಿಹಾರ ಮೊತ್ತದ 1,691 ಕ್ರಿಮಿನಲ್ ಪ್ರಕರಣಗಳು ಹಾಗೂ ₹2,51,52,196 ಪರಿಹಾರ ಮೊತ್ತದ 8,124 ವ್ಯಾಜ್ಯ ಪೂರ್ವ ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥವಾಗಿವೆ.</p>.<p>ಹಿರಿಯ ಶ್ರೇಣೀ ಸಿವಿಲ್ ನ್ಯಾಯಾಧೀಶೆ ಉಂಡಿ ಮಂಜುಳಾ ಶಿವಪ್ಪ ಮಾತನಾಡಿ, ‘ಸಣ್ಣ–ಪುಟ್ಟ ಕಾರಣ ಮುಂದಿಟ್ಟು ಸ್ವಪ್ರತಿಷ್ಠೆಗಾಗಿ ಪ್ರಕರಣಗಳನ್ನು ಮುಂದುವರಿಸಬಾರದು. ಪರಸ್ಪರರ ರಾಜಿ ಸೌಹಾರ್ದಯುತ ಬದುಕು, ಸ್ವಸ್ಥ ಸಮಾಜ ಹಾಗೂ ಸುಂದರ ಬದುಕಿಗೆ ನಂದಾದೀಪವಾಗಲಿದೆ’ ಎಂದು ಕಿವಿಮಾತು ಹೇಳಿದರು.</p>.<p>ಪ್ರಧಾನ ಸಿವಿಲ್ ನ್ಯಾಯಾಧೀಶ ಕೆ.ಅಂಬಣ್ಣ, ವಕೀಲರ ಸಂಘದ ಅಧ್ಯಕ್ಷ ಭೂಪನಗೌಡ ಕರಡಕಲ್ಲ ಸೇರಿದಂತೆ ವಕೀಲರ ಸಂಘದ ಪದಾಧಿಕಾರಿಗಳು, ಸದಸ್ಯರು, ನ್ಯಾಯಾಂಗ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರು</strong>: ಸ್ಥಳೀಯ ನ್ಯಾಯಾಲಯದಲ್ಲಿ ಶನಿವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರ ಮತ್ತು ವಕೀಲರ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ₹4.01 ಕೋಟಿ ಮೊತ್ತದ ಪರಿಹಾರದ 9,865 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ.</p>.<p>₹53,80,828 ಪರಿಹಾರ ಮೊತ್ತದ 50 ಸಿವಿಲ್ ಪ್ರಕರಣಗಳು, ₹95,82,974 ಪರಿಹಾರ ಮೊತ್ತದ 1,691 ಕ್ರಿಮಿನಲ್ ಪ್ರಕರಣಗಳು ಹಾಗೂ ₹2,51,52,196 ಪರಿಹಾರ ಮೊತ್ತದ 8,124 ವ್ಯಾಜ್ಯ ಪೂರ್ವ ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥವಾಗಿವೆ.</p>.<p>ಹಿರಿಯ ಶ್ರೇಣೀ ಸಿವಿಲ್ ನ್ಯಾಯಾಧೀಶೆ ಉಂಡಿ ಮಂಜುಳಾ ಶಿವಪ್ಪ ಮಾತನಾಡಿ, ‘ಸಣ್ಣ–ಪುಟ್ಟ ಕಾರಣ ಮುಂದಿಟ್ಟು ಸ್ವಪ್ರತಿಷ್ಠೆಗಾಗಿ ಪ್ರಕರಣಗಳನ್ನು ಮುಂದುವರಿಸಬಾರದು. ಪರಸ್ಪರರ ರಾಜಿ ಸೌಹಾರ್ದಯುತ ಬದುಕು, ಸ್ವಸ್ಥ ಸಮಾಜ ಹಾಗೂ ಸುಂದರ ಬದುಕಿಗೆ ನಂದಾದೀಪವಾಗಲಿದೆ’ ಎಂದು ಕಿವಿಮಾತು ಹೇಳಿದರು.</p>.<p>ಪ್ರಧಾನ ಸಿವಿಲ್ ನ್ಯಾಯಾಧೀಶ ಕೆ.ಅಂಬಣ್ಣ, ವಕೀಲರ ಸಂಘದ ಅಧ್ಯಕ್ಷ ಭೂಪನಗೌಡ ಕರಡಕಲ್ಲ ಸೇರಿದಂತೆ ವಕೀಲರ ಸಂಘದ ಪದಾಧಿಕಾರಿಗಳು, ಸದಸ್ಯರು, ನ್ಯಾಯಾಂಗ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>