‘ಕುಮಾರಸ್ವಾಮಿ ಅವರು ಕೇಂದ್ರದಿಂದ ಅನುದಾನ ತಂದು ರಾಜ್ಯದ ಅಭಿವೃದ್ಧಿ ಮಾಡುವುದನ್ನು ಬಿಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಅಧಿಕಾರದಿಂದ ಕೆಳಗಿಸಲು ಷಡ್ಯಂತ್ರ ರೂಪಿಸುತ್ತಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಮುಡಾ ನಿವೇಶನ ಹಗರಣ ನಡೆದಿದೆ ಎಂದು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಬಿಜೆಪಿ, ಜೆಡಿಎಸ್ ನಾಯಕರಿಗೆ ಜನರ ಬಗ್ಗೆ ಕಾಳಜಿಯಿಲ್ಲ. 70 ವರ್ಷಗಳಲ್ಲಿ ಕಾಣದಂತಹ ಕಲುಷಿತ ರಾಜಕಾರಣ ಮಾಡುತ್ತಿದ್ದಾರೆ’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.