<p><strong>ರಾಯಚೂರು</strong>: ‘ಜಾನಪದ, ಗ್ರಾಮೀಣ ಸೊಗಡಿನ ಮುಂಗಾರು ಸಾಂಸ್ಕೃತಿಕ ಹಬ್ಬವನ್ನು ಈ ಬಾರಿ ಮತ್ತಷ್ಟು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ’ ಎಂದು ಸಮಾಜದ ಹಿರಿಯ ಮುಖಂಡ ಹಾಗೂ ಮಾಜಿ ಶಾಸಕ ಎ.ಪಾಪಾರೆಡ್ಡಿ ಹೇಳಿದರು. </p>.<p>ನಗರದ ಲಕ್ಷ್ಮಮ್ಮದೇವಿ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಕಾರ ಹುಣ್ಣಿಮೆಯ ಪ್ರಯುಕ್ತ ನಡೆಯುವ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬವನ್ನು ಈ ಬಾರಿ ಬರುವ ಜೂನ್ 21ರಿಂದ 23 ರವರೆಗೆ ಆಯೋಜಿಸಲಾಗಿದೆ. 23 ವರ್ಷಗಳಿಂದ ಮುಂಗಾರು ಸಾಂಸ್ಕೃತಿಕ ರಾಯಚೂರು ನಾಡ ಹಬ್ಬವನ್ನು ಅತ್ಯಂತ ವೈಭವದಿಂದ ನಡೆಸಲಾಗುತ್ತಿದೆ’ ಎಂದರು.</p>.<p>‘ಮುನ್ನೂರು ಕಾಪು ಸಮಾಜ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಇತರೆ ಸಮಾಜಕ್ಕೆ ಮಾದರಿಯಾಗಿದೆ. ಶೈಕ್ಷಣಿಕ, ರಾಜಕೀಯ, ಆರ್ಥಿಕವಾಗಿ ಮುನ್ನೂರು ಕಾಪು ಸಮಾಜ ಬಲಿಷ್ಠವಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಆರ್ಥಿಕವಾಗಿ ಸದೃಢವಾಗಬೇಕು. ಈ ನಿಟ್ಟಿನಲ್ಲಿ ಸಮಾಜ ಒಗ್ಗಟ್ಟು ಪ್ರದರ್ಶನ ಅಗತ್ಯ’ ಎಂದು ಹೇಳಿದರು. </p>.<p>ಸಭೆಯಲ್ಲಿ ಸಮಾಜದ ಮುಖಂಡರು ಪಾಲ್ಗೊಂಡು ಸಲಹೆ–ಸೂಚನೆ ನೀಡಿದರು. ಬೆಲ್ಲಂ ನರಸರೆಡ್ಡಿ, ಗಿ.ಕೃಷ್ಣಮೂರ್ತಿ, ಉ.ಬಸವರಾಜ ರೆಡ್ಡಿ, ರಾಳ ತಿಮ್ಮರೆಡ್ಡಿ, ಕುಕ್ಕಲ ದೊಡ್ಡ ನರಸಿಂಹಲು, ಬಂಗಿ ನರಸರೆಡ್ಡಿ, ಸುಗಣ್ಣಗಾರ ವೆಂಕಟರೆಡ್ಡಿ, ಬುಡತಪ್ಪಗಾರು ಆಂಜನೇಯ ಹಾಗೂ ಜಿ.ಶೇಖರರೆಡ್ಡಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ‘ಜಾನಪದ, ಗ್ರಾಮೀಣ ಸೊಗಡಿನ ಮುಂಗಾರು ಸಾಂಸ್ಕೃತಿಕ ಹಬ್ಬವನ್ನು ಈ ಬಾರಿ ಮತ್ತಷ್ಟು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ’ ಎಂದು ಸಮಾಜದ ಹಿರಿಯ ಮುಖಂಡ ಹಾಗೂ ಮಾಜಿ ಶಾಸಕ ಎ.ಪಾಪಾರೆಡ್ಡಿ ಹೇಳಿದರು. </p>.<p>ನಗರದ ಲಕ್ಷ್ಮಮ್ಮದೇವಿ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಕಾರ ಹುಣ್ಣಿಮೆಯ ಪ್ರಯುಕ್ತ ನಡೆಯುವ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬವನ್ನು ಈ ಬಾರಿ ಬರುವ ಜೂನ್ 21ರಿಂದ 23 ರವರೆಗೆ ಆಯೋಜಿಸಲಾಗಿದೆ. 23 ವರ್ಷಗಳಿಂದ ಮುಂಗಾರು ಸಾಂಸ್ಕೃತಿಕ ರಾಯಚೂರು ನಾಡ ಹಬ್ಬವನ್ನು ಅತ್ಯಂತ ವೈಭವದಿಂದ ನಡೆಸಲಾಗುತ್ತಿದೆ’ ಎಂದರು.</p>.<p>‘ಮುನ್ನೂರು ಕಾಪು ಸಮಾಜ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಇತರೆ ಸಮಾಜಕ್ಕೆ ಮಾದರಿಯಾಗಿದೆ. ಶೈಕ್ಷಣಿಕ, ರಾಜಕೀಯ, ಆರ್ಥಿಕವಾಗಿ ಮುನ್ನೂರು ಕಾಪು ಸಮಾಜ ಬಲಿಷ್ಠವಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಆರ್ಥಿಕವಾಗಿ ಸದೃಢವಾಗಬೇಕು. ಈ ನಿಟ್ಟಿನಲ್ಲಿ ಸಮಾಜ ಒಗ್ಗಟ್ಟು ಪ್ರದರ್ಶನ ಅಗತ್ಯ’ ಎಂದು ಹೇಳಿದರು. </p>.<p>ಸಭೆಯಲ್ಲಿ ಸಮಾಜದ ಮುಖಂಡರು ಪಾಲ್ಗೊಂಡು ಸಲಹೆ–ಸೂಚನೆ ನೀಡಿದರು. ಬೆಲ್ಲಂ ನರಸರೆಡ್ಡಿ, ಗಿ.ಕೃಷ್ಣಮೂರ್ತಿ, ಉ.ಬಸವರಾಜ ರೆಡ್ಡಿ, ರಾಳ ತಿಮ್ಮರೆಡ್ಡಿ, ಕುಕ್ಕಲ ದೊಡ್ಡ ನರಸಿಂಹಲು, ಬಂಗಿ ನರಸರೆಡ್ಡಿ, ಸುಗಣ್ಣಗಾರ ವೆಂಕಟರೆಡ್ಡಿ, ಬುಡತಪ್ಪಗಾರು ಆಂಜನೇಯ ಹಾಗೂ ಜಿ.ಶೇಖರರೆಡ್ಡಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>