<p><strong>ರಾಯಚೂರು:</strong> ‘ಮುಡಾ ಪ್ರಕರಣದ ವಿವಾದಿತ ಜಮೀನು ಪರಿವರ್ತನೆ ನಿಯಮಾನುಸಾರ ಮಾಡಲಾಗಿದ್ದು, ಲೋಕಾಯುಕ್ತರಿಗೂ ಈ ಬಗ್ಗೆ ಸಂಪೂರ್ಣ ಮಾಹಿತಿ ಕೊಡಲಾಗಿದೆ’ ಎಂದು ಸಂಸದ ಜಿ.ಕುಮಾರ ನಾಯಕ ತಿಳಿಸಿದರು.</p>.<p>‘ಮುಡಾ ವಿವಾದಿತ ಜಮೀನು ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಒಂದು ಗಂಟೆಗೂ ಹೆಚ್ಚು ಸಮಯ ಲೋಕಾಯುಕ್ತ ಪೊಲೀಸರು ನನ್ನನ್ನು ವಿಚಾರಣೆಗೆ ಒಳಪಡಿಸಿ ಅನೇಕ ಪ್ರಶ್ನೆಗಳನ್ನು ಕೇಳಿದ್ದಾರೆ’ ಎಂದು ಗುರುವಾರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದರು.</p>.<p>‘2002ರಿಂದ 2005ರವರೆಗೆ ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದೆ. 1998ರಲ್ಲಿ ಭೂ ಅಧಿಸೂಚನೆ ಹೊರಡಿಸಲಾಗಿದೆ. ಅಂತಿಮ ನೋಟಿಫಿಕೇಷನ್ ಆದ 45 ದಿನಗಳ ಬಳಿಕ ಡಿನೋಟಿಫಿಕೇಷನ್ ಆಗಿದೆ. ಆರು ವರ್ಷಗಳ ನಂತರ ಜಿಲ್ಲಾಧಿಕಾರಿಯಿಂದ ಲೋಪವಾಗಿದೆ ಎನ್ನುವ ಆರೋಪದಲ್ಲಿ ಹುರುಳಿಲ್ಲ’ ಎಂದರು.</p>.<p>‘ಲೋಕಾಯುಕ್ತರ ವಿಚಾರಣೆ ವೇಳೆ ಎಲ್ಲ ಮಾಹಿತಿ ನೀಡಿದ್ದೇನೆ. ನನ್ನ ಅಧಿಕಾರ ಅವಧಿಯಲ್ಲಿ ಕಡತಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಿದ್ದೇನೆ’ ಎಂದು ತಿಳಿಸಿದರು.</p>.<p>‘ರಾಯಚೂರು ವಿಮಾನ ನಿಲ್ದಾಣ ಕಾಮಗಾರಿಯ ವೇಗ ಹೆಚ್ಚಿಸಲು ಸೈಟ್ ಕ್ಲಿಯರೆನ್ಸ್ ಸಹಕಾರಿಯಾಗಿದೆ. ಕೆಕೆಆರ್ಡಿಬಿ ಹಾಗೂ ರಾಜ್ಯ ಸರ್ಕಾರದ ವಿವಿಧ ಅನುದಾನದಡಿ ವಿಮಾನ ನಿಲ್ದಾಣ ಕಾಮಗಾರಿ ಪ್ರಕ್ರಿಯೆ ನಡೆಯಲಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ‘ಮುಡಾ ಪ್ರಕರಣದ ವಿವಾದಿತ ಜಮೀನು ಪರಿವರ್ತನೆ ನಿಯಮಾನುಸಾರ ಮಾಡಲಾಗಿದ್ದು, ಲೋಕಾಯುಕ್ತರಿಗೂ ಈ ಬಗ್ಗೆ ಸಂಪೂರ್ಣ ಮಾಹಿತಿ ಕೊಡಲಾಗಿದೆ’ ಎಂದು ಸಂಸದ ಜಿ.ಕುಮಾರ ನಾಯಕ ತಿಳಿಸಿದರು.</p>.<p>‘ಮುಡಾ ವಿವಾದಿತ ಜಮೀನು ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಒಂದು ಗಂಟೆಗೂ ಹೆಚ್ಚು ಸಮಯ ಲೋಕಾಯುಕ್ತ ಪೊಲೀಸರು ನನ್ನನ್ನು ವಿಚಾರಣೆಗೆ ಒಳಪಡಿಸಿ ಅನೇಕ ಪ್ರಶ್ನೆಗಳನ್ನು ಕೇಳಿದ್ದಾರೆ’ ಎಂದು ಗುರುವಾರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದರು.</p>.<p>‘2002ರಿಂದ 2005ರವರೆಗೆ ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದೆ. 1998ರಲ್ಲಿ ಭೂ ಅಧಿಸೂಚನೆ ಹೊರಡಿಸಲಾಗಿದೆ. ಅಂತಿಮ ನೋಟಿಫಿಕೇಷನ್ ಆದ 45 ದಿನಗಳ ಬಳಿಕ ಡಿನೋಟಿಫಿಕೇಷನ್ ಆಗಿದೆ. ಆರು ವರ್ಷಗಳ ನಂತರ ಜಿಲ್ಲಾಧಿಕಾರಿಯಿಂದ ಲೋಪವಾಗಿದೆ ಎನ್ನುವ ಆರೋಪದಲ್ಲಿ ಹುರುಳಿಲ್ಲ’ ಎಂದರು.</p>.<p>‘ಲೋಕಾಯುಕ್ತರ ವಿಚಾರಣೆ ವೇಳೆ ಎಲ್ಲ ಮಾಹಿತಿ ನೀಡಿದ್ದೇನೆ. ನನ್ನ ಅಧಿಕಾರ ಅವಧಿಯಲ್ಲಿ ಕಡತಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಿದ್ದೇನೆ’ ಎಂದು ತಿಳಿಸಿದರು.</p>.<p>‘ರಾಯಚೂರು ವಿಮಾನ ನಿಲ್ದಾಣ ಕಾಮಗಾರಿಯ ವೇಗ ಹೆಚ್ಚಿಸಲು ಸೈಟ್ ಕ್ಲಿಯರೆನ್ಸ್ ಸಹಕಾರಿಯಾಗಿದೆ. ಕೆಕೆಆರ್ಡಿಬಿ ಹಾಗೂ ರಾಜ್ಯ ಸರ್ಕಾರದ ವಿವಿಧ ಅನುದಾನದಡಿ ವಿಮಾನ ನಿಲ್ದಾಣ ಕಾಮಗಾರಿ ಪ್ರಕ್ರಿಯೆ ನಡೆಯಲಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>