ಮಾರುಕಟ್ಟೆ ಅಭಿವೃದ್ಧಿಗೆ ಮುಂದಾದ ಶಾಸಕ ಆರ್.ಬಸನಗೌಡ ತುರುವಿಹಾಳ ಪುರಸಭೆಯಿಂದ ಹಣ ಮೀಸಲಿಟ್ಟು ಟೆಂಡರ್ ಕರೆಸುವಲ್ಲಿ ಯಶಸ್ವಿಯಾದರು. ಮಾರುಕಟ್ಟೆ ಅಭಿವೃದ್ಧಿಗೆ ಭೂಮಿ ಪೂಜೆ ಸಹ ಮಾಡಿದರೂ, ಆದರೆ, ಕೆಲವು ಕಾರಣಗಳಿಂದ ಕಾಮಗಾರಿ ನನೆಗುದಿಗೆ ಬಿದ್ದಿದೆ. ಕಾರಣ ಗುತ್ತಿಗೆದಾರರು ಕಾಮಗಾರಿ ಆರಂಭಿಸಲು ಆಗದೇ ತ್ರಿಶಂಖು ಸ್ಥಿತಿ ಎದುರಿಸುವಂತಾಗಿದೆ. ಶೀಘ್ರ ಮಾರುಕಟ್ಟೆ ಅಭಿವೃದ್ಧಿಯಾಗುತ್ತದೆ ಎಂದು ಕನಸು ಕಂಡಿದ್ದ ರೈತರ ಕನಸು ಕನಸಾಗಿಯೇ ಉಳಿದಿದೆ. ಶಾಸಕರು, ಪುರಸಭೆ ಅಧಿಕಾರಿಗಳು ಕೂಡಲೇ ಸಮಸ್ಯೆ ಇತ್ಯರ್ಥಪಡಿಸಿ ಕಾಮಗಾರಿ ಆರಂಭಿಸಿ ಸಂತೆ ಮಾರುಕಟ್ಟೆ ಅಭಿವೃದ್ಧಿ ಪಡಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ.