ರಾಯಚೂರು: ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಎಂ.ಪುಟ್ಟಮಾದಯ್ಯ ಅವರನ್ನು ನಿಯೋಜಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
ಜುಲೈ 3ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಅವರನ್ನು ಕೋಲಾರಕ್ಕೆ ವರ್ಗಾವಣೆ ಮಾಡಲಾಗಿತ್ತು. ಗುರುವಾರ ಬೆಂಗಳೂರಿನ ಕರ್ನಾಟಕ ಲೋಕಾಯುಕ್ತದಲ್ಲಿ ವಿಶೇಷ ತನಿಖಾ ದಳದ ಪೊಲೀಸ್ ಅಧೀಕ್ಷಕರಾಗಿದ್ದ ಅವರನ್ನು ರಾಯಚೂರಿಗೆ ವರ್ಗಾವಣೆ ಮಾಡಲಾಗಿದೆ.