<p><strong>ಹಟ್ಟಿಚಿನ್ನದಗಣಿ</strong>: ‘ಬಿಜೆಪಿಯ ಸುಳ್ಳು ಭರವಸೆಗಳಿಂದ ಜನರು ಬೇಸತ್ತು ಹೋಗಿದ್ದಾರೆ’ ಎಂದು ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಡಿ.ಎಸ್.ಹೂಲಗೇರಿ ಹೇಳಿದರು.</p>.<p>ಪಟ್ಟಣ ಸಮೀಪದ ಕೋಠಾ, ಆನ್ವರಿ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಕುಮಾರ ನಾಯಕ ಅವರ ಪರ ಮತಯಾಚನೆ ಮಾಡಿ ಮಾತನಾಡಿದರು.</p>.<p>ಕೊಟ್ಟ ಮಾತಿನಂತೆ ಕಾಂಗ್ರೆಸ್ 5 ಗ್ಯಾರಂಟಿಗಳನ್ನು ಜಾರಿ ಮಾಡಿದೆ. ಆದ್ದರಿಂದ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮತ ನೀಡಬೇಕು ಎಂದು ಮನವಿ ಮಾಡಿದರು.</p>.<p>ತಾಲ್ಲೂಕಿನಲ್ಲಿ ಶಾಸಕರು ಇದ್ದಾರೋ ಇಲ್ಲವೋ ಎಂಬಂತಾಗಿದೆ. ಜನರ ಸಮಸ್ಯೆಗಳನ್ನು ಆಲಿಸುವಲ್ಲಿ ಶಾಸಕರು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಇಂಥ ಶಾಸಕರಿಂದ ಅಭಿವೃದ್ಧಿ ನಿರೀಕ್ಷೆ ಮಾಡುವುದು ಅಸಾಧ್ಯ ಎಂದು ಹೇಳಿದರು.</p>.<p>ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಗ್ರಾಮಿಣ ಜನರ ಸಮಸ್ಯೆಗಳನ್ನು ಬಗೆಹರಿಸಿಕೊಡಲಾಗುವುದು ಎಂದರು.</p>.<p>ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯಕ, ಶಿವಣ್ಣ ನಾಯಕ ಕೋಠಾ, ಮುದುಕಪ್ಪ ವಕೀಲ, ಸಂಗಣ್ಣ ದೇಸಾಯಿ, ಶಂಕರ, ವಿಜಯಲಕ್ಷ್ಮಿ, ಬಸವನಗೌಡ ಮೇದಿನಾಪುರ ಸೇರಿದಂತೆ ಅನೇಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಟ್ಟಿಚಿನ್ನದಗಣಿ</strong>: ‘ಬಿಜೆಪಿಯ ಸುಳ್ಳು ಭರವಸೆಗಳಿಂದ ಜನರು ಬೇಸತ್ತು ಹೋಗಿದ್ದಾರೆ’ ಎಂದು ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಡಿ.ಎಸ್.ಹೂಲಗೇರಿ ಹೇಳಿದರು.</p>.<p>ಪಟ್ಟಣ ಸಮೀಪದ ಕೋಠಾ, ಆನ್ವರಿ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಕುಮಾರ ನಾಯಕ ಅವರ ಪರ ಮತಯಾಚನೆ ಮಾಡಿ ಮಾತನಾಡಿದರು.</p>.<p>ಕೊಟ್ಟ ಮಾತಿನಂತೆ ಕಾಂಗ್ರೆಸ್ 5 ಗ್ಯಾರಂಟಿಗಳನ್ನು ಜಾರಿ ಮಾಡಿದೆ. ಆದ್ದರಿಂದ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮತ ನೀಡಬೇಕು ಎಂದು ಮನವಿ ಮಾಡಿದರು.</p>.<p>ತಾಲ್ಲೂಕಿನಲ್ಲಿ ಶಾಸಕರು ಇದ್ದಾರೋ ಇಲ್ಲವೋ ಎಂಬಂತಾಗಿದೆ. ಜನರ ಸಮಸ್ಯೆಗಳನ್ನು ಆಲಿಸುವಲ್ಲಿ ಶಾಸಕರು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಇಂಥ ಶಾಸಕರಿಂದ ಅಭಿವೃದ್ಧಿ ನಿರೀಕ್ಷೆ ಮಾಡುವುದು ಅಸಾಧ್ಯ ಎಂದು ಹೇಳಿದರು.</p>.<p>ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಗ್ರಾಮಿಣ ಜನರ ಸಮಸ್ಯೆಗಳನ್ನು ಬಗೆಹರಿಸಿಕೊಡಲಾಗುವುದು ಎಂದರು.</p>.<p>ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯಕ, ಶಿವಣ್ಣ ನಾಯಕ ಕೋಠಾ, ಮುದುಕಪ್ಪ ವಕೀಲ, ಸಂಗಣ್ಣ ದೇಸಾಯಿ, ಶಂಕರ, ವಿಜಯಲಕ್ಷ್ಮಿ, ಬಸವನಗೌಡ ಮೇದಿನಾಪುರ ಸೇರಿದಂತೆ ಅನೇಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>