<p><strong>ರಾಯಚೂರು:</strong> ತಾಲ್ಲೂಕಿನ ಬಾಪೂರ ಗ್ರಾಮದ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿದ್ದ ಸಣ್ಣ ನರಸಪ್ಪ ಅವರ ಹತ್ತಿ ಬೆಳೆಯನ್ನು ನಾಶ ಮಾಡಿದ ರಾಯಚೂರು ವಲಯದ ಅರಣ್ಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ಕೂಲಿಕಾರರ ಸಂಘ ಜಿಲ್ಲಾ ಘಟಕದ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಲಾಯಿತು.</p>.<p>ಈ ಕುರಿತು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ ಪದಾಧಿಕಾರಿಗಳು, ರಾಯಚೂರು ತಾಲ್ಲೂಕಿನ ಬಾಪೂರು ತಾಂಡಾದ ಸರ್ವೆ ನಂಬರ್ 18ರ 3 ಎಕರೆ ವಿಸ್ತೀರ್ಣದಲ್ಲಿ ಅನೇಕ ವರ್ಷಗಳಿಂದ ಲಚ್ಚನಾಯಕ ಬಾಗೂರು ತಾಂಡಾ ಹಾಗೂ ಚಂದ್ರಪ್ಪ ನಾಯಕ ಬಾಗೂರ ತಾಂಡಾ ಅವರು ಹತ್ತಿ ಬೆಳೆ ಬೆಳೆದು ಕೃಷಿ ಚಟುವಟಿಕೆ ಮಾಡುತ್ತಿದ್ದು, ಜುಲೈ 21ರಿಂದ 23ರವರೆಗೆ ಮೂರು ದಿನ ಅರಣ್ಯ ಇಲಾಖೆ ಅಧಿಕಾರಿಗಳು ಜೆಸಿಬಿ ಮೂಲಕ ಬೆಳೆ ನಾಶ ಪಡಿಸಿದ್ದಾರೆ. ಲಚ್ಚನಾಯಕ ಹಾಗೂ ಚಂದ್ರಪ್ಪ ಅರಣ್ಯ ಇಲಾಖೆ ಅಧಿಕಾರಿಗಳ ಕಾಲಿಗೆ ಬಿದ್ದು ಬೆಳೆ ನಾಶ ಮಾಡಬೇಡಿ ಎಂದು ಬೇಡಿಕೊಂಡರೂ ಅಮಾನವೀಯವಾಗಿ ವರ್ತಿಸಿದ್ದಾರೆ ಎಂದು ದೂರಿದರು.</p>.<p>ಕೂಡಲೇ ಬೆಳೆ ನಾಶ ಮಾಡಿದ ಅರಣ್ಯ ಅಧಿಕಾರಿಗಳ ಮೇಲೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಿರುದ್ಧದ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು. ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.</p>.<p>ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕರಿಯಪ್ಪ ಅಚ್ಚೊಳ್ಳಿ, ಪದಾಧಿಕಾರಿಗಳಾದ ನಾಗರಾಜ, ಈಶ್ವರಪ್ಪ, ಸತ್ಯಪ್ಪ, ಜಂಗ್ಲಿಸಾಬ್, ಇಸ್ಮಾಯಿಲ್, ಮಲ್ಲಯ್ಯ ಮಂಡಲಗೇರ, ವೀರೇಶ ಬಾಪೂರು, ಲಚ್ಚಪ್ಪ ನಾಯಕ, ವೆಂಕಟೇಶ ನಾಯಕ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ತಾಲ್ಲೂಕಿನ ಬಾಪೂರ ಗ್ರಾಮದ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿದ್ದ ಸಣ್ಣ ನರಸಪ್ಪ ಅವರ ಹತ್ತಿ ಬೆಳೆಯನ್ನು ನಾಶ ಮಾಡಿದ ರಾಯಚೂರು ವಲಯದ ಅರಣ್ಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ಕೂಲಿಕಾರರ ಸಂಘ ಜಿಲ್ಲಾ ಘಟಕದ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಲಾಯಿತು.</p>.<p>ಈ ಕುರಿತು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ ಪದಾಧಿಕಾರಿಗಳು, ರಾಯಚೂರು ತಾಲ್ಲೂಕಿನ ಬಾಪೂರು ತಾಂಡಾದ ಸರ್ವೆ ನಂಬರ್ 18ರ 3 ಎಕರೆ ವಿಸ್ತೀರ್ಣದಲ್ಲಿ ಅನೇಕ ವರ್ಷಗಳಿಂದ ಲಚ್ಚನಾಯಕ ಬಾಗೂರು ತಾಂಡಾ ಹಾಗೂ ಚಂದ್ರಪ್ಪ ನಾಯಕ ಬಾಗೂರ ತಾಂಡಾ ಅವರು ಹತ್ತಿ ಬೆಳೆ ಬೆಳೆದು ಕೃಷಿ ಚಟುವಟಿಕೆ ಮಾಡುತ್ತಿದ್ದು, ಜುಲೈ 21ರಿಂದ 23ರವರೆಗೆ ಮೂರು ದಿನ ಅರಣ್ಯ ಇಲಾಖೆ ಅಧಿಕಾರಿಗಳು ಜೆಸಿಬಿ ಮೂಲಕ ಬೆಳೆ ನಾಶ ಪಡಿಸಿದ್ದಾರೆ. ಲಚ್ಚನಾಯಕ ಹಾಗೂ ಚಂದ್ರಪ್ಪ ಅರಣ್ಯ ಇಲಾಖೆ ಅಧಿಕಾರಿಗಳ ಕಾಲಿಗೆ ಬಿದ್ದು ಬೆಳೆ ನಾಶ ಮಾಡಬೇಡಿ ಎಂದು ಬೇಡಿಕೊಂಡರೂ ಅಮಾನವೀಯವಾಗಿ ವರ್ತಿಸಿದ್ದಾರೆ ಎಂದು ದೂರಿದರು.</p>.<p>ಕೂಡಲೇ ಬೆಳೆ ನಾಶ ಮಾಡಿದ ಅರಣ್ಯ ಅಧಿಕಾರಿಗಳ ಮೇಲೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಿರುದ್ಧದ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು. ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.</p>.<p>ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕರಿಯಪ್ಪ ಅಚ್ಚೊಳ್ಳಿ, ಪದಾಧಿಕಾರಿಗಳಾದ ನಾಗರಾಜ, ಈಶ್ವರಪ್ಪ, ಸತ್ಯಪ್ಪ, ಜಂಗ್ಲಿಸಾಬ್, ಇಸ್ಮಾಯಿಲ್, ಮಲ್ಲಯ್ಯ ಮಂಡಲಗೇರ, ವೀರೇಶ ಬಾಪೂರು, ಲಚ್ಚಪ್ಪ ನಾಯಕ, ವೆಂಕಟೇಶ ನಾಯಕ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>