<p><strong>ಸಿಂಧನೂರು:</strong> ‘ರಾಮಭಕ್ತರನ್ನು ಬಿಡುಗಡೆಗೊಳಿಸಿ, ಇಲ್ಲವೇ ನಾನು ರಾಮಭಕ್ತ ನನ್ನನ್ನು ಬಂಧಿಸಿ ಚಳವಳಿ’ ಅಂಗವಾಗಿ ಹಿಂದೂ ಜಾಗರಣ ವೇದಿಕೆ ತಾಲ್ಲೂಕು ಘಟಕದ ಮುಖಂಡರು ಗುರುವಾರ ನಗರದ ಸುಕಾಲಪೇಟೆ ರಸ್ತೆಯಲ್ಲಿರುವ ಡಿವೈಎಸ್ಪಿ ಕಚೇರಿ ಮುಂದೆ ಪ್ರತಿಭಟಿಸಿದರು.</p>.<p>‘ರಾಮಭಕ್ತರನ್ನು ಹತ್ತಿಕ್ಕುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಯೋಧ್ಯ ರಾಮ ಮಂದಿರದ ಹೋರಾಟದ ಘಟನೆಯನ್ನು ಮುಂದಿಟ್ಟುಕೊಂಡು ಪ್ರಕರಣಗಳನ್ನು ದಾಖಲೆ ಮಾಡುತ್ತಿದೆ. ಪೊಲೀಸ್ ಇಲಾಖೆಯನ್ನು ಕಾಂಗ್ರೆಸ್ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ರಾಮಭಕ್ತರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆಯಬೇಕು’ ಎಂದು ಆಗ್ರಹಿಸಿದರು.</p>.<p>ಡಿವೈಎಸ್ಪಿ ಬಿ.ಎಸ್.ತಳವಾರ ಮನವಿ ಪತ್ರ ಸ್ವೀಕರಿಸಿದರು.</p>.<p>ಹಿಂದೂ ಜಾಗರಣ ವೇದಿಕೆಯ ಸದಸ್ಯರಾದ ಪಂಪಾಪತಿ ನಾಯಕ, ಮಂಜುನಾಥ ಹರಸೂರು, ವಿಜಯ್ ಚೌದರಿ, ಹನುಮಂತ, ಮಲ್ಲಯ್ಯ, ಗಿರೀಶ್ ವಕೀಲ, ಸತೀಶ್ ಮುನ್ಸಿ, ವೀರೇಶ್, ಮಹೇಶ್, ಸುರೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಧನೂರು:</strong> ‘ರಾಮಭಕ್ತರನ್ನು ಬಿಡುಗಡೆಗೊಳಿಸಿ, ಇಲ್ಲವೇ ನಾನು ರಾಮಭಕ್ತ ನನ್ನನ್ನು ಬಂಧಿಸಿ ಚಳವಳಿ’ ಅಂಗವಾಗಿ ಹಿಂದೂ ಜಾಗರಣ ವೇದಿಕೆ ತಾಲ್ಲೂಕು ಘಟಕದ ಮುಖಂಡರು ಗುರುವಾರ ನಗರದ ಸುಕಾಲಪೇಟೆ ರಸ್ತೆಯಲ್ಲಿರುವ ಡಿವೈಎಸ್ಪಿ ಕಚೇರಿ ಮುಂದೆ ಪ್ರತಿಭಟಿಸಿದರು.</p>.<p>‘ರಾಮಭಕ್ತರನ್ನು ಹತ್ತಿಕ್ಕುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಯೋಧ್ಯ ರಾಮ ಮಂದಿರದ ಹೋರಾಟದ ಘಟನೆಯನ್ನು ಮುಂದಿಟ್ಟುಕೊಂಡು ಪ್ರಕರಣಗಳನ್ನು ದಾಖಲೆ ಮಾಡುತ್ತಿದೆ. ಪೊಲೀಸ್ ಇಲಾಖೆಯನ್ನು ಕಾಂಗ್ರೆಸ್ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ರಾಮಭಕ್ತರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆಯಬೇಕು’ ಎಂದು ಆಗ್ರಹಿಸಿದರು.</p>.<p>ಡಿವೈಎಸ್ಪಿ ಬಿ.ಎಸ್.ತಳವಾರ ಮನವಿ ಪತ್ರ ಸ್ವೀಕರಿಸಿದರು.</p>.<p>ಹಿಂದೂ ಜಾಗರಣ ವೇದಿಕೆಯ ಸದಸ್ಯರಾದ ಪಂಪಾಪತಿ ನಾಯಕ, ಮಂಜುನಾಥ ಹರಸೂರು, ವಿಜಯ್ ಚೌದರಿ, ಹನುಮಂತ, ಮಲ್ಲಯ್ಯ, ಗಿರೀಶ್ ವಕೀಲ, ಸತೀಶ್ ಮುನ್ಸಿ, ವೀರೇಶ್, ಮಹೇಶ್, ಸುರೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>