<p><strong>ರಾಯಚೂರು:</strong> ಕರ್ನಾಟಕ ಸರ್ಕಾರವು ನೆರೆಯ ಆಂಧ್ರಪ್ರದೇಶದ ಮಂತ್ರಾಲಯದಲ್ಲಿ ನಿರ್ಮಿಸಿರುವ ಹಳೆಯ ಕರ್ನಾಟಕ ರಾಜ್ಯ ವಸತಿಗೃಹವನ್ನು ಕುಡಿಯುವ ನೀರಿನ ಸಮಸ್ಯೆಯಿಂದಾಗಿ ಮೂರು ತಿಂಗಳಿಂದ ಬಂದ್ ಮಾಡಲಾಗಿದೆ.</p>.<p>ಹಳೆಯ ಕಟ್ಟಡದಲ್ಲಿ 52 ಹಾಗೂ ಹೊಸ ಕಟ್ಟಡದಲ್ಲಿ ಏಸಿ ಹಾಗೂ ಸಾಮನ್ಯ ಕೊಠಡಿಗಳು ಸೇರಿ ಒಟ್ಟು 50 ಕೊಠಡಿಗಳಿವೆ. ಬೇಸಿಗೆಯಲ್ಲಿ ತುಂಗಭದ್ರಾ ನದಿ ಬತ್ತಿ ನೀರಿನ ಸಮಸ್ಯೆ ಉಲ್ಬಣಗೊಂಡಿತ್ತು. ದೂರದ ಊರುಗಳಿಂದ ಬರುವ ಭಕ್ತರು ಅನಿವಾರ್ಯವಾಗಿ ಖಾಸಗಿ ಲಾಡ್ಜ್ಗಳಿಗೆ ಹೇಳಿದಷ್ಟು ಹಣ ಕೊಟ್ಟು ಉಳಿದುಕೊಳ್ಳಬೇಕಾದ ಸ್ಥಿತಿ ಬಂದಿದೆ.</p>.<p>ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ರಾಜ್ಯದ ವಿವಿಧೆಡೆಯಿಂದ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ. ಗುರುವಾರ, ಶನಿವಾರ ಹಾಗೂ ಭಾನುವಾರ ಭಕ್ತರ ಸಂಖ್ಯೆ ಇನ್ನೂ ಅಧಿಕವಾಗಿರುತ್ತದೆ.</p>.<p>ಆಗಸ್ಟ್ 18ರಿಂದ ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ ಆರಾಧನೆ ಕಾರ್ಯಕ್ರಮ ಆರಂಭವಾಗಲಿದೆ. ಅಗತ್ಯ ಮೂಲಸೌಲರ್ಯ ಒದಗಿಸದೇ ಭಕ್ತರಿಗೆ ಕೊಠಡಿಗಳನ್ನು ಕೊಟ್ಟರೆ ಗಂಭೀರ ಸಮಸ್ಯೆ ಉಲ್ಬಣಗೊಳ್ಳುವ ಸಾಧ್ಯತೆ ಇದೆ. ತಾತ್ಕಾಲಿಕವಾಗಿ ಹಳೆಯ ವಸತಿ ಗೃಹ ಬಂದ್ ಮಾಡಲಾಗಿದೆ ಎಂದು ವಸತಿಗೃಹ ಸಿಬ್ಬಂದಿ ತಿಳಿಸಿದ್ದಾರೆ.</p>.<p>‘ಹೊಸ ವಸತಿಗೃಹದಲ್ಲಿ ಯಾವುದೇ ಸಮಸ್ಯೆ ಇಲ್ಲ. ಹಳೆಯ ವಸತಿ ಗೃಹದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗಿರುವುದು ನಿಜ. ಶೀಘ್ರದಲ್ಲೇ ಬೋರ್ವೆಲ್ ಕೊರೆದು ನೀರಿನ ಸಮಸ್ಯೆ ಪರಿಹರಿಸಲು ಪ್ರಯತ್ನಿಸಲಾಗುವುದು’ ಎಂದು ಛತ್ರದ ವ್ಯವಸ್ಥಾಪಕಿ ತ್ರಿವೇಣಿ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಕರ್ನಾಟಕ ಸರ್ಕಾರವು ನೆರೆಯ ಆಂಧ್ರಪ್ರದೇಶದ ಮಂತ್ರಾಲಯದಲ್ಲಿ ನಿರ್ಮಿಸಿರುವ ಹಳೆಯ ಕರ್ನಾಟಕ ರಾಜ್ಯ ವಸತಿಗೃಹವನ್ನು ಕುಡಿಯುವ ನೀರಿನ ಸಮಸ್ಯೆಯಿಂದಾಗಿ ಮೂರು ತಿಂಗಳಿಂದ ಬಂದ್ ಮಾಡಲಾಗಿದೆ.</p>.<p>ಹಳೆಯ ಕಟ್ಟಡದಲ್ಲಿ 52 ಹಾಗೂ ಹೊಸ ಕಟ್ಟಡದಲ್ಲಿ ಏಸಿ ಹಾಗೂ ಸಾಮನ್ಯ ಕೊಠಡಿಗಳು ಸೇರಿ ಒಟ್ಟು 50 ಕೊಠಡಿಗಳಿವೆ. ಬೇಸಿಗೆಯಲ್ಲಿ ತುಂಗಭದ್ರಾ ನದಿ ಬತ್ತಿ ನೀರಿನ ಸಮಸ್ಯೆ ಉಲ್ಬಣಗೊಂಡಿತ್ತು. ದೂರದ ಊರುಗಳಿಂದ ಬರುವ ಭಕ್ತರು ಅನಿವಾರ್ಯವಾಗಿ ಖಾಸಗಿ ಲಾಡ್ಜ್ಗಳಿಗೆ ಹೇಳಿದಷ್ಟು ಹಣ ಕೊಟ್ಟು ಉಳಿದುಕೊಳ್ಳಬೇಕಾದ ಸ್ಥಿತಿ ಬಂದಿದೆ.</p>.<p>ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ರಾಜ್ಯದ ವಿವಿಧೆಡೆಯಿಂದ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ. ಗುರುವಾರ, ಶನಿವಾರ ಹಾಗೂ ಭಾನುವಾರ ಭಕ್ತರ ಸಂಖ್ಯೆ ಇನ್ನೂ ಅಧಿಕವಾಗಿರುತ್ತದೆ.</p>.<p>ಆಗಸ್ಟ್ 18ರಿಂದ ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ ಆರಾಧನೆ ಕಾರ್ಯಕ್ರಮ ಆರಂಭವಾಗಲಿದೆ. ಅಗತ್ಯ ಮೂಲಸೌಲರ್ಯ ಒದಗಿಸದೇ ಭಕ್ತರಿಗೆ ಕೊಠಡಿಗಳನ್ನು ಕೊಟ್ಟರೆ ಗಂಭೀರ ಸಮಸ್ಯೆ ಉಲ್ಬಣಗೊಳ್ಳುವ ಸಾಧ್ಯತೆ ಇದೆ. ತಾತ್ಕಾಲಿಕವಾಗಿ ಹಳೆಯ ವಸತಿ ಗೃಹ ಬಂದ್ ಮಾಡಲಾಗಿದೆ ಎಂದು ವಸತಿಗೃಹ ಸಿಬ್ಬಂದಿ ತಿಳಿಸಿದ್ದಾರೆ.</p>.<p>‘ಹೊಸ ವಸತಿಗೃಹದಲ್ಲಿ ಯಾವುದೇ ಸಮಸ್ಯೆ ಇಲ್ಲ. ಹಳೆಯ ವಸತಿ ಗೃಹದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗಿರುವುದು ನಿಜ. ಶೀಘ್ರದಲ್ಲೇ ಬೋರ್ವೆಲ್ ಕೊರೆದು ನೀರಿನ ಸಮಸ್ಯೆ ಪರಿಹರಿಸಲು ಪ್ರಯತ್ನಿಸಲಾಗುವುದು’ ಎಂದು ಛತ್ರದ ವ್ಯವಸ್ಥಾಪಕಿ ತ್ರಿವೇಣಿ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>