ಸೋಮವಾರ ಹೇಳಿಕೆ ನೀಡಿರುವ ಅವರು, ಜೋಡೆತ್ತು, ಟ್ರ್ಯಾಕ್ಟರ್, ಬಂಡಿ ಮತ್ತು ನೇಗಿಲು ಮೆರವಣಿಗೆಯು ಮಿನಿವಿಧಾನಸೌಧ ಕಾರ್ಯಾಲಯದಿಂದ ಬೆಳಿಗ್ಗೆ 11 ಗಂಟೆಗೆ ಪ್ರಾರಂಭವಾಗಲಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಲಿದ್ದಾರೆ. ಕೃಷಿ ಮಳಿಗೆಗಳ ಉದ್ಘಾಟನೆಯನ್ನು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸುವರು. ಸ್ತ್ರೀಶಕ್ತಿ ಭವನದ ಆವರಣದಲ್ಲಿ ಸಂಗ್ರಾಣಿ ಕಲ್ಲು, ಗುಂಡು ಎತ್ತುವ ಸ್ಪರ್ಧೆ, ಕೃಷಿ ವಿಶ್ವವಿದ್ಯಾಲಯದ ತಜ್ಞರಿಂದ ಮಣ್ಣಿನ ಸಂರಕ್ಷಣೆ, ನೀರಿನ ನಿರ್ವಹಣೆ ಮತ್ತು ಪರ್ಯಾಯ ಬೆಳೆಗಳ ಕುರಿತು ಕಾರ್ಯಾಗಾರ ಹಾಗೂ ರೈತರೊಂದಿಗೆ ಸಂವಾದ ಮತ್ತು ಕೃಷಿಯಲ್ಲಿ ಸಾಧನೆ ಮಾಡಿದ ರೈತರಿಗೆ ಗೌರವ ಸನ್ಮಾನ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದ್ದಾರೆ.