<p><strong>ಸಿಂಧನೂರು:</strong> ತಾಲ್ಲೂಕಿನ ಮುದ್ದಾಪುರ ಬಳಿ ರಸ್ತೆ ಸಾರಿಗೆ ಸಂಸ್ಥೆಯ ಬಸ್ವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರವಾಹನದ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಬೂತಲದಿನ್ನಿಯ ದೊಡ್ಲಾ ಹಾಲಿನ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕುನ್ನಟಗಿ ಕ್ಯಾಂಪಿನ ದೇವರಾಜ ಈರಪ್ಪ(23), ಮಲ್ಲಾಪುರದ ಸಂತೋಷ ಕುಮಾರ ಹನುಮಂತ(22) ಮೃತರು.</p>.<p>ಹಾಲಿನ ಡೇರಿಯ ಕೆಲಸದ ಪ್ರಯುಕ್ತ ಮಸ್ಕಿಗೆ ಹೋಗಿ ಮರಳಿ ಬರುವಾಗ ಹೊಸಪೇಟೆಯಿಂದ ಸಿಂಧನೂರು ಮಾರ್ಗವಾಗಿ ಕಲಬುರಗಿಗೆ ತೆರಳುತ್ತಿದ್ದ ಸಾರಿಗೆ ಬಸ್, ಚಾಲಕನ ನಿಯಂತ್ರಣತಪ್ಪಿ ದ್ವಿಚಕ್ರ ವಾಹನ ಸವಾರರಿಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.</p>.<p>ಮೃತ ಯುವಕರು ಸ್ನೇಹಿತರಾಗಿದ್ದರು. ಇಬ್ಬರೂ ಸಾವಿನಲ್ಲೂ ಒಂದಾಗಿರುವುದು ಅವರ ಕುಟುಂಬಗಳ ನೋವು ಹೆಚ್ಚಿಸಿದೆ. ಈ ಕುರಿತು ತುರ್ವಿಹಾಳ ಪೊಲೀಸ್ ಠಾಣೆಯ ಪಿಎಸ್ಐ ಹುಸೆನಪ್ಪ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಧನೂರು:</strong> ತಾಲ್ಲೂಕಿನ ಮುದ್ದಾಪುರ ಬಳಿ ರಸ್ತೆ ಸಾರಿಗೆ ಸಂಸ್ಥೆಯ ಬಸ್ವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರವಾಹನದ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಬೂತಲದಿನ್ನಿಯ ದೊಡ್ಲಾ ಹಾಲಿನ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕುನ್ನಟಗಿ ಕ್ಯಾಂಪಿನ ದೇವರಾಜ ಈರಪ್ಪ(23), ಮಲ್ಲಾಪುರದ ಸಂತೋಷ ಕುಮಾರ ಹನುಮಂತ(22) ಮೃತರು.</p>.<p>ಹಾಲಿನ ಡೇರಿಯ ಕೆಲಸದ ಪ್ರಯುಕ್ತ ಮಸ್ಕಿಗೆ ಹೋಗಿ ಮರಳಿ ಬರುವಾಗ ಹೊಸಪೇಟೆಯಿಂದ ಸಿಂಧನೂರು ಮಾರ್ಗವಾಗಿ ಕಲಬುರಗಿಗೆ ತೆರಳುತ್ತಿದ್ದ ಸಾರಿಗೆ ಬಸ್, ಚಾಲಕನ ನಿಯಂತ್ರಣತಪ್ಪಿ ದ್ವಿಚಕ್ರ ವಾಹನ ಸವಾರರಿಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.</p>.<p>ಮೃತ ಯುವಕರು ಸ್ನೇಹಿತರಾಗಿದ್ದರು. ಇಬ್ಬರೂ ಸಾವಿನಲ್ಲೂ ಒಂದಾಗಿರುವುದು ಅವರ ಕುಟುಂಬಗಳ ನೋವು ಹೆಚ್ಚಿಸಿದೆ. ಈ ಕುರಿತು ತುರ್ವಿಹಾಳ ಪೊಲೀಸ್ ಠಾಣೆಯ ಪಿಎಸ್ಐ ಹುಸೆನಪ್ಪ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>