ಅನಾರೋಗ್ಯಕ್ಕೆ ತುತ್ತಾದ ಮಕ್ಕಳು ಆಸ್ಪತ್ರೆಗಳಿಗೆ ಅಲೆದಾಡುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಶಾಲಾ ಮಕ್ಕಳು ತರಗತಿ ಕೊಠಡಿಗಳಿಗೆ ಹೋಗಲು ಮತ್ತು ಆಟ ಆಡಲು ತುಂಬಾ ತೊಂದರೆಯಾಗಿದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಶಾಲಾ ಆವರಣದಲ್ಲಿ ಮರಂ ಹಾಕಿಸಿ ಮಳೆ ನೀರು ಮುಂದೆ ಹೋಗುವಂತೆ ಮಾಡಬೇಕು. ಶಾಲೆಯ ಕಿಟಕಿ ಹಾಗೂ ಬಾಗಿಲು ದುರಸ್ತಿ ಮಾಡಿಸಬೇಕು. ಶಾಲೆಗೆ ಸಿ.ಸಿ ಟಿವಿ ಕ್ಯಾಮೆರಾ ಅಳವಡಿಸಬೇಕು ಎಂದು ಪಾಲಕರು ಒತ್ತಾಯಿಸಿದ್ದಾರೆ.