<p><strong>ಲಿಂಗಸುಗೂರು:</strong> ತಾಲ್ಲೂಕಿನ ಹಾಲಭಾವಿ ತಾಂಡಾದಲ್ಲಿ ಬುಧವಾರ 6 ಪ್ರಕರಣಗಳು ವರದಿಯಾಗಿದ್ದು, ತಾಲ್ಲೂಕು ಆಡಳಿತ ಪ್ರಕರಣ ಹರಡದಂತೆ ಸಾಕಷ್ಟು ಮುಂಜಾಗ್ರತ ಕ್ರಮಕ್ಕೆ ಹರಸಾಹಸ ನಡೆಸಿದೆ.</p>.<p>ಬುಧವಾರ ಪತ್ತೆಯಾದ ಹೊಸ ಪ್ರಕರಣಗಳ ಸಂತ್ರಸ್ತರಿಗೆ ಸ್ಥಳೀಯವಾಗಿ ಚಿಕಿತ್ಸೆ ನೀಡಲಾಗುತ್ತಿದೆ. 4 ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮದಲ್ಲಿ ಆರೋಗ್ಯ ಇಲಾಖೆ ಮತ್ತು ತಾಲ್ಲೂಕು ಪಂಚಾಯಿತಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿ ಮನೆ ಮನೆಗೆ ಜಾಗೃತಿ ಮೂಡಿಸಲಾಗುತ್ತಿದೆ.</p>.<p>ಟ್ಯಾಂಕರ್ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ಮಾಂಸ, ಮದ್ಯ ಸೇವನೆ ಮಾಡಬಾರದು. ಕಾಯಿಸಿ ಆರಿಸಿದ ನೀರನ್ನೆ ಸೇವಿಸಬೇಕು. ಕುಡಿಯುವ ನೀರಲ್ಲಿ ಆರೋಗ್ಯ ಇಲಾಖೆ ನೀಡುವ ಪೌಡರ್, ಮಾತ್ರೆ ಮಿಶ್ರಣ ಮಾಡಿ ಸೇವಿಸುವುದು ಸೇರಿದಂತೆ ಇತರೆ ಸಲಹೆಗಳನ್ನು ನೀಡಲಾಗುತ್ತಿದೆ.</p>.<p>ತಾಂಡಾ ಜನ ಮಾತ್ರ ದೇವರ ಹೆಸರಲ್ಲಿ ಕೋಳಿ, ಕುರಿ ಬಲಿ ಕೊಡುತ್ತಿದ್ದಾರೆ. ಅನ್ಯ ತಾಂಡಾಗಳ ಜನ ಮದ್ಯ, ಮಾಂಸ ಮಾರಾಟ ನಿರ್ಭಯದಿಂದ ಮಾರಾಟ ಮಾಡುತ್ತಿದ್ದಾರೆ. ನಿಷೇಧಿತ ವಸ್ತು ಮಾರಾಟ ಮಾಡದಂತೆ ತಡೆಯುವುದು ಸವಾಲಾಗಿ ಪರಿಣಮಿಸಿದೆ.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಮರೇಶ ಪಾಟೀಲ ಮಾಕಾಪುರ, ತಾಲ್ಲೂಕು ಪಂಚಾಯಿತಿ ಇಒ ಅಮರೇಶ ನೇತೃತ್ವದ ತಂಡ ತಾಂಡಾದಲ್ಲಿ ಬಿಡಾರ ಹೂಡಿದೆ. ಮಾಂಸ, ಮದ್ಯ ಮಾರಾಟ ತಡೆಗೆ ಪೊಲೀಸ್ ಇಲಾಖೆಗೆ ಲಿಖಿತ ಮಾಹಿತಿ ಕೂಡ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರು:</strong> ತಾಲ್ಲೂಕಿನ ಹಾಲಭಾವಿ ತಾಂಡಾದಲ್ಲಿ ಬುಧವಾರ 6 ಪ್ರಕರಣಗಳು ವರದಿಯಾಗಿದ್ದು, ತಾಲ್ಲೂಕು ಆಡಳಿತ ಪ್ರಕರಣ ಹರಡದಂತೆ ಸಾಕಷ್ಟು ಮುಂಜಾಗ್ರತ ಕ್ರಮಕ್ಕೆ ಹರಸಾಹಸ ನಡೆಸಿದೆ.</p>.<p>ಬುಧವಾರ ಪತ್ತೆಯಾದ ಹೊಸ ಪ್ರಕರಣಗಳ ಸಂತ್ರಸ್ತರಿಗೆ ಸ್ಥಳೀಯವಾಗಿ ಚಿಕಿತ್ಸೆ ನೀಡಲಾಗುತ್ತಿದೆ. 4 ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮದಲ್ಲಿ ಆರೋಗ್ಯ ಇಲಾಖೆ ಮತ್ತು ತಾಲ್ಲೂಕು ಪಂಚಾಯಿತಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿ ಮನೆ ಮನೆಗೆ ಜಾಗೃತಿ ಮೂಡಿಸಲಾಗುತ್ತಿದೆ.</p>.<p>ಟ್ಯಾಂಕರ್ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ಮಾಂಸ, ಮದ್ಯ ಸೇವನೆ ಮಾಡಬಾರದು. ಕಾಯಿಸಿ ಆರಿಸಿದ ನೀರನ್ನೆ ಸೇವಿಸಬೇಕು. ಕುಡಿಯುವ ನೀರಲ್ಲಿ ಆರೋಗ್ಯ ಇಲಾಖೆ ನೀಡುವ ಪೌಡರ್, ಮಾತ್ರೆ ಮಿಶ್ರಣ ಮಾಡಿ ಸೇವಿಸುವುದು ಸೇರಿದಂತೆ ಇತರೆ ಸಲಹೆಗಳನ್ನು ನೀಡಲಾಗುತ್ತಿದೆ.</p>.<p>ತಾಂಡಾ ಜನ ಮಾತ್ರ ದೇವರ ಹೆಸರಲ್ಲಿ ಕೋಳಿ, ಕುರಿ ಬಲಿ ಕೊಡುತ್ತಿದ್ದಾರೆ. ಅನ್ಯ ತಾಂಡಾಗಳ ಜನ ಮದ್ಯ, ಮಾಂಸ ಮಾರಾಟ ನಿರ್ಭಯದಿಂದ ಮಾರಾಟ ಮಾಡುತ್ತಿದ್ದಾರೆ. ನಿಷೇಧಿತ ವಸ್ತು ಮಾರಾಟ ಮಾಡದಂತೆ ತಡೆಯುವುದು ಸವಾಲಾಗಿ ಪರಿಣಮಿಸಿದೆ.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಮರೇಶ ಪಾಟೀಲ ಮಾಕಾಪುರ, ತಾಲ್ಲೂಕು ಪಂಚಾಯಿತಿ ಇಒ ಅಮರೇಶ ನೇತೃತ್ವದ ತಂಡ ತಾಂಡಾದಲ್ಲಿ ಬಿಡಾರ ಹೂಡಿದೆ. ಮಾಂಸ, ಮದ್ಯ ಮಾರಾಟ ತಡೆಗೆ ಪೊಲೀಸ್ ಇಲಾಖೆಗೆ ಲಿಖಿತ ಮಾಹಿತಿ ಕೂಡ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>