<p><strong>ಹಟ್ಟಿ ಚಿನ್ನದ ಗಣಿ:</strong> ಕೃಷ್ಣಾ ನದಿ ಪ್ರವಾಹಕ್ಕೆ ಟಣಮಕಲ್ಲು ಸೇತುವೆ ಸಂಪೂರ್ಣ ಮುಳುಗಿ ಹೋಗಿದೆ.</p>.<p>ನದಿ ದಡದ ಹೊಲ ಗದ್ದೆಗಳಿಗೆ ನೀರು ನುಗ್ಗಿದ ಪರಿಣಾಮ ಬೆಳೆಗಳು ಹಾನಿಯಾಗಿವೆ, ರೈತರಿಗೆ ಬೆಳೆ ಪರಿಹಾರ ನೀಡಬೇಕು ಎಂದು ರೈತರ ಆಗ್ರಹವಾಗಿದೆ.</p>.<p>ನಾರಾಯಣಪೂರ ಅಣೆಕಟ್ಟೆಯಿಂದ ಕೃಷ್ಣಾನದಿಗೆ 3 ಲಕ್ಷ ಕ್ಯುಸೆಕ್ ನೀರು ಹರಿ ಬಿಟ್ಟ ಪರಿಣಾಮ ನದಿ ದಡದ ಟಣಮಕಲ್ಲು ಸೇತುವೆ ಮುಳುಗಿ ರಸ್ತೆ ಸಂಪರ್ಕ ಬಂದ್ ಆಗಿದೆ. ಇದರಿಂದ ಟಣಮಕಲ್ಲು ಗದ್ದಿಗಿ ಗ್ರಾಮಕ್ಕೆ ತೆರಳುವ ಜನರು ಗುರುಗುಂಟಾ ಗ್ರಾಮದ ಮೂಲಕ ಬರುತ್ತಿದ್ದಾರೆ.</p>.<p>‘ಪ್ರವಾಹ ಬಂದಾಗಲೆಲ್ಲ ಟಣಮಕಲ್ಲು ಸೇತುವೆ ಮುಳುಗಿ ಹೋಗುತ್ತದೆ. ಸೇತುವೆ ಎತ್ತರಕ್ಕೆ ಮಾಡಿ ಈ ಭಾಗದ ಜನರಿಗೆ ಅನುವು ಮಾಡಿಕೊಡಿ ಎಂದು ಅಧಿಕಾರಿಗಳಿಗೆ ಮನವಿ ಮಾಡಿದರೂ ನಿರ್ಲಕ್ಷ್ಯ ತೋರುತ್ತಿದ್ದಾರೆ. ನಮ್ಮ ಗೋಳು ಕೇಳುವವರೇ ಇಲ್ಲದಂತಾಗಿದೆ ಎನ್ನುತ್ತಾರೆ’ ರೈತ ಸೋಮಣ್ಣ ನಾಯಕ.</p>.<p>ಕೃಷ್ಣಾ ನದಿಗೆ ಅಪಾರ ಪ್ರಮಾಣ ನೀರು ಹರಿಯುತ್ತಿದ್ದು, ಹಟ್ಟಿ ಪಟ್ಟಣಕ್ಕೆ ಸರಬರಾಜು ಮಾಡುವ ಜಾಕ್ವೆಲ್ ಹಾಗೂ ಹಟ್ಟಿ ಪ.ಪಂ ಜಾಕ್ವೆಲ್ ಸಂಪೂರ್ಣ ಮುಳುಗಿ ಹೋಗಿವೆ. ನದಿ ದಡದ ಗ್ರಾಮದ ಜನರು ನದಿಗೆ ಇಳಿಯದಂತೆ ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಟ್ಟಿ ಚಿನ್ನದ ಗಣಿ:</strong> ಕೃಷ್ಣಾ ನದಿ ಪ್ರವಾಹಕ್ಕೆ ಟಣಮಕಲ್ಲು ಸೇತುವೆ ಸಂಪೂರ್ಣ ಮುಳುಗಿ ಹೋಗಿದೆ.</p>.<p>ನದಿ ದಡದ ಹೊಲ ಗದ್ದೆಗಳಿಗೆ ನೀರು ನುಗ್ಗಿದ ಪರಿಣಾಮ ಬೆಳೆಗಳು ಹಾನಿಯಾಗಿವೆ, ರೈತರಿಗೆ ಬೆಳೆ ಪರಿಹಾರ ನೀಡಬೇಕು ಎಂದು ರೈತರ ಆಗ್ರಹವಾಗಿದೆ.</p>.<p>ನಾರಾಯಣಪೂರ ಅಣೆಕಟ್ಟೆಯಿಂದ ಕೃಷ್ಣಾನದಿಗೆ 3 ಲಕ್ಷ ಕ್ಯುಸೆಕ್ ನೀರು ಹರಿ ಬಿಟ್ಟ ಪರಿಣಾಮ ನದಿ ದಡದ ಟಣಮಕಲ್ಲು ಸೇತುವೆ ಮುಳುಗಿ ರಸ್ತೆ ಸಂಪರ್ಕ ಬಂದ್ ಆಗಿದೆ. ಇದರಿಂದ ಟಣಮಕಲ್ಲು ಗದ್ದಿಗಿ ಗ್ರಾಮಕ್ಕೆ ತೆರಳುವ ಜನರು ಗುರುಗುಂಟಾ ಗ್ರಾಮದ ಮೂಲಕ ಬರುತ್ತಿದ್ದಾರೆ.</p>.<p>‘ಪ್ರವಾಹ ಬಂದಾಗಲೆಲ್ಲ ಟಣಮಕಲ್ಲು ಸೇತುವೆ ಮುಳುಗಿ ಹೋಗುತ್ತದೆ. ಸೇತುವೆ ಎತ್ತರಕ್ಕೆ ಮಾಡಿ ಈ ಭಾಗದ ಜನರಿಗೆ ಅನುವು ಮಾಡಿಕೊಡಿ ಎಂದು ಅಧಿಕಾರಿಗಳಿಗೆ ಮನವಿ ಮಾಡಿದರೂ ನಿರ್ಲಕ್ಷ್ಯ ತೋರುತ್ತಿದ್ದಾರೆ. ನಮ್ಮ ಗೋಳು ಕೇಳುವವರೇ ಇಲ್ಲದಂತಾಗಿದೆ ಎನ್ನುತ್ತಾರೆ’ ರೈತ ಸೋಮಣ್ಣ ನಾಯಕ.</p>.<p>ಕೃಷ್ಣಾ ನದಿಗೆ ಅಪಾರ ಪ್ರಮಾಣ ನೀರು ಹರಿಯುತ್ತಿದ್ದು, ಹಟ್ಟಿ ಪಟ್ಟಣಕ್ಕೆ ಸರಬರಾಜು ಮಾಡುವ ಜಾಕ್ವೆಲ್ ಹಾಗೂ ಹಟ್ಟಿ ಪ.ಪಂ ಜಾಕ್ವೆಲ್ ಸಂಪೂರ್ಣ ಮುಳುಗಿ ಹೋಗಿವೆ. ನದಿ ದಡದ ಗ್ರಾಮದ ಜನರು ನದಿಗೆ ಇಳಿಯದಂತೆ ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>