<p><strong>ರಾಯಚೂರು</strong>: ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯು 2023-24ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢ ಶಾಲಾ ಶಿಕ್ಷಕರ ಹಂತದ ವರ್ಗಾವಣೆಗೆ ಆಗಸ್ಟ್ 2ರಿಂದ 8ರವರೆಗೆ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಕೌನ್ಸೆಲಿಂಗ್ ನಡೆಯಲಿದೆ.</p>.<p>ಆಗಸ್ಟ್ 2ರಿಂದ 5ರವರೆಗೆ ಪ್ರಾಥಮಿಕ ಶಾಲಾ ಶಿಕ್ಷಕರ ಹಾಗೂ ಆಗಸ್ಟ್ 6ರಿಂದ 8ರವರೆಗೆ ಪ್ರೌಢ ಶಾಲಾ ಶಿಕ್ಷಕರ ಸಾಮಾನ್ಯ ಕೋರಿಕೆ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ. ಆಗಸ್ಟ್ 12 ರಂದು ಪರಸ್ಪರ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ತಿಳಿಸಿದ್ದಾರೆ.</p>.<p>ಕೌನ್ಸೆಲಿಂಗ್ಗೆ ಸಂಬಂಧಿಸಿದ ವೇಳಾಪಟ್ಟಿಯನ್ವಯ ಆದ್ಯತಾ ಪಟ್ಟಿಯಲ್ಲಿರುವ ಶಿಕ್ಷಕರು ಸಂಬಂಧಿಸಿದ ದಾಖಲೆಗಳೊಂದಿಗೆ ಆಯಾಯಾ ದಿನಾಂಕದಂದು ಕೌನ್ಸೆಲಿಂಗ್ಗೆ ನಿಗದಿತ ಸಮಯಕ್ಕೆ ಹಾಜರಾಗಬೇಕು ಎಂದು ಹೇಳಿದ್ದಾರೆ.</p>.<p>ನವೋದಯ ವಿದ್ಯಾಲಯ; 6ನೇ ತರಗತಿ ಪ್ರವೇಶಕ್ಕೆ ಅರ್ಜಿ</p>.<p>ರಾಯಚೂರು: ಮುದಗಲ್ ಜವಾಹರ್ ನವೋದಯ ವಿದ್ಯಾಲಯದಲ್ಲಿ 6ನೇ ತರಗತಿಯ ಪ್ರವೇಶ ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.</p>.<p>ಆಸಕ್ತ ವಿದ್ಯಾರ್ಥಿಗಳು ಮುಖ್ಯಶಿಕ್ಷಕರಿಂದ 3,4 ಮತ್ತು 5ನೇ ತರಗತಿಯ ನಿಗದಿತ ವ್ಯಾಸಂಗ ಪ್ರಮಾಣ ಪತ್ರ, ಭಾವಚಿತ್ರ, ಪೋಷಕರ ಸಹಿ, ಅಭ್ಯರ್ಥಿಯ ಸಹಿ, ಆಧಾರ್ ವಿವರಗಳು ಹಾಗೂ ತಹಶೀಲ್ದಾರ್ರಿಂದ ಪಡೆದ ನಿವಾಸ ಪ್ರಮಾಣ ಪತ್ರಗಳೊಂದಿಗೆ ನವೋದಯ ವಿದ್ಯಾಲಯ ಸಮಿತಿ ವೆಬ್ಸೈಟ್ www.navodaya.gov.in ಗೆ ಭೇಟಿ ನೀಡಿ, ಸೆಪ್ಟೆಂಬರ್ 16 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.</p>.<p>ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ ಸಂಖ್ಯೆ. 94485 71580, 72041 09046 ಹಾಗೂ 97034 73495ಗೆ ಸಂಪರ್ಕಿಸಬೇಕು ಎಂದು ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯ ತಿಳಿಸಿದ್ದಾರೆ.</p>.<p><strong>ಜಲ ಶುದ್ಧೀಕರಣ ಘಟಕಕ್ಕೆ ಜಿಲ್ಲಾಧಿಕಾರಿ ಭೇಟಿ</strong></p>.<p>ರಾಯಚೂರು: ತಾಲ್ಲೂಕಿನ ಚಿಕ್ಕಸೂಗೂರು ಜಲ ಶುದ್ಧೀಕರಣ ಘಟಕಕ್ಕೆ ಗುರುವಾರ ಜಿಲ್ಲಾಧಿಕಾರಿ ನಿತಿಶ್ ಕೆ. ಹಾಗೂ ರಾಯಚೂರು ನಗರಸಭೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ನಗರಕ್ಕೆ ಶುದ್ಧ ನೀರು ಪೂರೈಸಬೇಕು. ಪೂರೈಸುವ ಮೊದಲು ನೀರಿನ ಟ್ಯಾಂಕ್ಗಳನ್ನು ಪರಿಶೀಲಿಸಬೇಕು. ಸ್ವಚ್ಛತೆಗೆ ಆದ್ಯತೆ ನೀಡಬೇಕು. ನೀರಿನ ಶುದ್ದೀಕರಣ ಘಟಕಗಳ ನೀರನ್ನು ಪರೀಕ್ಷಿಸಿ ಕುಡಿಯಲು ಸೂಕ್ತವಾಗಿದೆ ಎನ್ನುವುದನ್ನು ಖಾತ್ರಿಪಡಿಸಿಕೊಂಡ ಬಳಿಕ ಪೂರೈಸಬೇಕು. ಯಾವುದೇ ಕಾರಣಕ್ಕೂ ಕಲುಷಿತ ನೀರು ಪೂರೈಕೆ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ನಗರಸಭೆಯ ಪೌರಾಯುಕ್ತ ಗುರುಸಿದ್ದಯ್ಯ ಸ್ವಾಮಿ ಹಿರೇಮಠ, ತಾಂತ್ರಿಕ ವಿಭಾಗದ ಸಿಬ್ಬಂದಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯು 2023-24ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢ ಶಾಲಾ ಶಿಕ್ಷಕರ ಹಂತದ ವರ್ಗಾವಣೆಗೆ ಆಗಸ್ಟ್ 2ರಿಂದ 8ರವರೆಗೆ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಕೌನ್ಸೆಲಿಂಗ್ ನಡೆಯಲಿದೆ.</p>.<p>ಆಗಸ್ಟ್ 2ರಿಂದ 5ರವರೆಗೆ ಪ್ರಾಥಮಿಕ ಶಾಲಾ ಶಿಕ್ಷಕರ ಹಾಗೂ ಆಗಸ್ಟ್ 6ರಿಂದ 8ರವರೆಗೆ ಪ್ರೌಢ ಶಾಲಾ ಶಿಕ್ಷಕರ ಸಾಮಾನ್ಯ ಕೋರಿಕೆ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ. ಆಗಸ್ಟ್ 12 ರಂದು ಪರಸ್ಪರ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ತಿಳಿಸಿದ್ದಾರೆ.</p>.<p>ಕೌನ್ಸೆಲಿಂಗ್ಗೆ ಸಂಬಂಧಿಸಿದ ವೇಳಾಪಟ್ಟಿಯನ್ವಯ ಆದ್ಯತಾ ಪಟ್ಟಿಯಲ್ಲಿರುವ ಶಿಕ್ಷಕರು ಸಂಬಂಧಿಸಿದ ದಾಖಲೆಗಳೊಂದಿಗೆ ಆಯಾಯಾ ದಿನಾಂಕದಂದು ಕೌನ್ಸೆಲಿಂಗ್ಗೆ ನಿಗದಿತ ಸಮಯಕ್ಕೆ ಹಾಜರಾಗಬೇಕು ಎಂದು ಹೇಳಿದ್ದಾರೆ.</p>.<p>ನವೋದಯ ವಿದ್ಯಾಲಯ; 6ನೇ ತರಗತಿ ಪ್ರವೇಶಕ್ಕೆ ಅರ್ಜಿ</p>.<p>ರಾಯಚೂರು: ಮುದಗಲ್ ಜವಾಹರ್ ನವೋದಯ ವಿದ್ಯಾಲಯದಲ್ಲಿ 6ನೇ ತರಗತಿಯ ಪ್ರವೇಶ ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.</p>.<p>ಆಸಕ್ತ ವಿದ್ಯಾರ್ಥಿಗಳು ಮುಖ್ಯಶಿಕ್ಷಕರಿಂದ 3,4 ಮತ್ತು 5ನೇ ತರಗತಿಯ ನಿಗದಿತ ವ್ಯಾಸಂಗ ಪ್ರಮಾಣ ಪತ್ರ, ಭಾವಚಿತ್ರ, ಪೋಷಕರ ಸಹಿ, ಅಭ್ಯರ್ಥಿಯ ಸಹಿ, ಆಧಾರ್ ವಿವರಗಳು ಹಾಗೂ ತಹಶೀಲ್ದಾರ್ರಿಂದ ಪಡೆದ ನಿವಾಸ ಪ್ರಮಾಣ ಪತ್ರಗಳೊಂದಿಗೆ ನವೋದಯ ವಿದ್ಯಾಲಯ ಸಮಿತಿ ವೆಬ್ಸೈಟ್ www.navodaya.gov.in ಗೆ ಭೇಟಿ ನೀಡಿ, ಸೆಪ್ಟೆಂಬರ್ 16 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.</p>.<p>ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ ಸಂಖ್ಯೆ. 94485 71580, 72041 09046 ಹಾಗೂ 97034 73495ಗೆ ಸಂಪರ್ಕಿಸಬೇಕು ಎಂದು ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯ ತಿಳಿಸಿದ್ದಾರೆ.</p>.<p><strong>ಜಲ ಶುದ್ಧೀಕರಣ ಘಟಕಕ್ಕೆ ಜಿಲ್ಲಾಧಿಕಾರಿ ಭೇಟಿ</strong></p>.<p>ರಾಯಚೂರು: ತಾಲ್ಲೂಕಿನ ಚಿಕ್ಕಸೂಗೂರು ಜಲ ಶುದ್ಧೀಕರಣ ಘಟಕಕ್ಕೆ ಗುರುವಾರ ಜಿಲ್ಲಾಧಿಕಾರಿ ನಿತಿಶ್ ಕೆ. ಹಾಗೂ ರಾಯಚೂರು ನಗರಸಭೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ನಗರಕ್ಕೆ ಶುದ್ಧ ನೀರು ಪೂರೈಸಬೇಕು. ಪೂರೈಸುವ ಮೊದಲು ನೀರಿನ ಟ್ಯಾಂಕ್ಗಳನ್ನು ಪರಿಶೀಲಿಸಬೇಕು. ಸ್ವಚ್ಛತೆಗೆ ಆದ್ಯತೆ ನೀಡಬೇಕು. ನೀರಿನ ಶುದ್ದೀಕರಣ ಘಟಕಗಳ ನೀರನ್ನು ಪರೀಕ್ಷಿಸಿ ಕುಡಿಯಲು ಸೂಕ್ತವಾಗಿದೆ ಎನ್ನುವುದನ್ನು ಖಾತ್ರಿಪಡಿಸಿಕೊಂಡ ಬಳಿಕ ಪೂರೈಸಬೇಕು. ಯಾವುದೇ ಕಾರಣಕ್ಕೂ ಕಲುಷಿತ ನೀರು ಪೂರೈಕೆ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ನಗರಸಭೆಯ ಪೌರಾಯುಕ್ತ ಗುರುಸಿದ್ದಯ್ಯ ಸ್ವಾಮಿ ಹಿರೇಮಠ, ತಾಂತ್ರಿಕ ವಿಭಾಗದ ಸಿಬ್ಬಂದಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>