‘ಮಾನ್ವಿಯ ವಸತಿನಿಯಲದಲ್ಲಿ 6ರಿಂದ 10ನೇ ತರಗತಿಯ 80 ಮಕ್ಕಳು ಪ್ರವೇಶ ಪಡೆದಿದ್ದಾರೆ. ಹೊಸ ಕಟ್ಟಡಕ್ಕೆ ಕಾಂಪೌಂಡ್ ಇಲ್ಲದ ಕಾರಣ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಸ್ಥಳಾಂತರ ಮಾಡಿಲ್ಲ. ಈಚೆಗೆ ನಡೆದ ಕೆಡಿಪಿ ಸಭೆಯಲ್ಲಿ ಮಸ್ಕಿ ಶಾಸಕರು ಸ್ಥಳಾಂತರಕ್ಕೆ ಸೂಚಿಸಿದ್ದಾರೆ ಮತ್ತು ಮಕ್ಕಳ ಸುರಕ್ಷತೆಗೆ ತಾತ್ಕಾಲಿಕ ವ್ಯವಸ್ಥೆ ಮಾಡುವಂತೆ ತಾಲ್ಲೂಕು ಪಂಚಾಯಿತಿ ಇಒ ಅವರಿಗೆ ಸೂಚಿಸಿದ್ದು, ದಸರಾ ರಜೆ ಕಳೆದ ನಂತರ ವಸತಿ ನಿಲಯವನ್ನು ಹೊಸ ಕಟ್ಟಡದಲ್ಲಿ ಆರಂಭಿಸಲಾಗುವುದು. ಮಾನ್ವಿಯಲ್ಲಿರುವ ಸಿಬ್ಬಂದಿ ಅಲ್ಲಿಗೆ ಬರುತ್ತಾರೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ದೊಡ್ಮನಿ ಹೇಳಿದರು.