<p><strong>ರಾಯಚೂರು:</strong> ರಾಜ್ಯದಲ್ಲಿ ಆಡಳಿತ ನಡೆಸುತ್ತಾ ಬಂದಿರುವ ರಾಜಕೀಯ ಪಕ್ಷಗಳು ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೊಳಿಸುತ್ತೇನೆ ಎಂದು ಆಶ್ವಾಸನೆ ನೀಡುತ್ತಾ ಬಂದರೂ, ಕೊಟ್ಟ ಮಾತನ್ನು ಉಳಿಸಿಕೊಳ್ಳದೆ ಮಾದಿಗರಿಗೆ ಮೋಸ ಮಾಡಿವೆ ಎಂದು ಮಾದಿಗರ ಚೈತನ್ಯ ರಥಯಾತ್ರೆಯ ಮಹಾಸಂಚಾಲಕ ಹೆಣ್ಣೂರು ಲಕ್ಷ್ಮೀನಾರಾಯಣ ಆಕ್ರೋಶ ಹೊರಹಾಕಿದರು.</p>.<p>ನ್ಯಾ. ಸದಾಶಿವ ಆಯೋಗದ ವರದಿ ಜಾರಿಗಾಗಿ ಮತ್ತು ಮಾದಿಗ ವಿರಾಟ್ ಶಕ್ತಿಪ್ರದರ್ಶನಕ್ಕಾಗಿ ಆರಂಭವಾಗಿರುವ ‘ಮಾದಿಗರ ಚೈತನ್ಯ ರಥಯಾತ್ರೆ’ಯು ರಾಯಚೂರಿಗೆ ಆಗಮಿಸಿದ ನಿಮಿತ್ತ ಶುಕ್ರವಾರ ನೃಪತುಂಗ ಹೋಟೆಲ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಮಾತನಾಡಿದರು.</p>.<p>ದಶಕಗಳಿಂದ ಮಾದಿಗರು ಒಳಮೀಸಲಾತಿಗಾಗಿ ಹೋರಾಟ ಮಾಡಿಕೊಂಡು ಬರುತ್ತಿದ್ದಾರೆ. ಹೋರಾಟದ ತೀವ್ರತೆಯನ್ನು ಗಮನಿಸಿ 2004 ರಲ್ಲಿ ಮುಖ್ಯಮಂತ್ರಿಯಾಗಿದ್ದ ಎಸ್.ಎಂ.ಕೃಷ್ಣ ಅವರು ನ್ಯಾ.ಸದಾಶಿವ ಆಯೋಗವನ್ನು ನೇಮಿಸಿದ್ದರು. 2012 ರಲ್ಲಿ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಮತ್ತೆ ನಿರಂತರ ಹೋರಾಟ ನಡೆಸಿದರೂ ಸ್ಪಂದನೆ ಸಿಗುತ್ತಿಲ್ಲ. ವರದಿ ಜಾರಿಯಾಗುವವರೆಗೂ ಈ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದರು.</p>.<p>ಮಾದಿಗರನ್ನು ನಿರ್ಲಕ್ಷಿಸುವ ಯಾವುದೇ ಸರ್ಕಾರ ಪರಿತಪಿಸುವ ಪರಿಸ್ಥಿತಿ ಬರುತ್ತದೆ. ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರು ಮಾತಿಗೆ ತಪ್ಪಿದ್ದರಿಂದಲೇ ಅತಂತ್ರ ಸ್ಥಿತಿಗೆ ಸಿಲುಕಿದರು. ಒಳಮೀಸಲಾತಿ ಜಾರಿಗೊಳಿಸುವ ಅಧಿಕಾರವು ರಾಜ್ಯ ಸರ್ಕಾರಗಳಿಗೆ ಇದೆ ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ಈ ಆದೇಶ ಅನುಸರಿಸಿ ಈಗಾಗಲೇ ಕೆಲವು ರಾಜ್ಯಗಳಲ್ಲಿ ಒಳಮೀಸಲಾತಿ ಜಾರಿಯಾಗಿದೆ ಎಂದು ಹೇಳಿದರು.</p>.<p>ಮೀಸಲಾತಿ ಹೋರಾಟ ಸಮಿತಿ ಜಿಲ್ಲಾ ಘಟಕದ ಸಂಚಾಲಕ ಅಂಬಣ್ಣ ಆರೋಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ವಿರೂಪಾಕ್ಷಿ, ಮುಖಂಡರಾದ ಕೆ.ಪಿ.ಅನಿಲಕುಮಾರ್, ಮಧುಚಕ್ರವರ್ತಿ, ಬಾಲಸ್ವಾಮಿ ಕೊಡ್ಲಿ, ರಾಮಣ್ಣ, ಕೆ.ನಾಗರಾಜ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ರಾಜ್ಯದಲ್ಲಿ ಆಡಳಿತ ನಡೆಸುತ್ತಾ ಬಂದಿರುವ ರಾಜಕೀಯ ಪಕ್ಷಗಳು ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೊಳಿಸುತ್ತೇನೆ ಎಂದು ಆಶ್ವಾಸನೆ ನೀಡುತ್ತಾ ಬಂದರೂ, ಕೊಟ್ಟ ಮಾತನ್ನು ಉಳಿಸಿಕೊಳ್ಳದೆ ಮಾದಿಗರಿಗೆ ಮೋಸ ಮಾಡಿವೆ ಎಂದು ಮಾದಿಗರ ಚೈತನ್ಯ ರಥಯಾತ್ರೆಯ ಮಹಾಸಂಚಾಲಕ ಹೆಣ್ಣೂರು ಲಕ್ಷ್ಮೀನಾರಾಯಣ ಆಕ್ರೋಶ ಹೊರಹಾಕಿದರು.</p>.<p>ನ್ಯಾ. ಸದಾಶಿವ ಆಯೋಗದ ವರದಿ ಜಾರಿಗಾಗಿ ಮತ್ತು ಮಾದಿಗ ವಿರಾಟ್ ಶಕ್ತಿಪ್ರದರ್ಶನಕ್ಕಾಗಿ ಆರಂಭವಾಗಿರುವ ‘ಮಾದಿಗರ ಚೈತನ್ಯ ರಥಯಾತ್ರೆ’ಯು ರಾಯಚೂರಿಗೆ ಆಗಮಿಸಿದ ನಿಮಿತ್ತ ಶುಕ್ರವಾರ ನೃಪತುಂಗ ಹೋಟೆಲ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಮಾತನಾಡಿದರು.</p>.<p>ದಶಕಗಳಿಂದ ಮಾದಿಗರು ಒಳಮೀಸಲಾತಿಗಾಗಿ ಹೋರಾಟ ಮಾಡಿಕೊಂಡು ಬರುತ್ತಿದ್ದಾರೆ. ಹೋರಾಟದ ತೀವ್ರತೆಯನ್ನು ಗಮನಿಸಿ 2004 ರಲ್ಲಿ ಮುಖ್ಯಮಂತ್ರಿಯಾಗಿದ್ದ ಎಸ್.ಎಂ.ಕೃಷ್ಣ ಅವರು ನ್ಯಾ.ಸದಾಶಿವ ಆಯೋಗವನ್ನು ನೇಮಿಸಿದ್ದರು. 2012 ರಲ್ಲಿ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಮತ್ತೆ ನಿರಂತರ ಹೋರಾಟ ನಡೆಸಿದರೂ ಸ್ಪಂದನೆ ಸಿಗುತ್ತಿಲ್ಲ. ವರದಿ ಜಾರಿಯಾಗುವವರೆಗೂ ಈ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದರು.</p>.<p>ಮಾದಿಗರನ್ನು ನಿರ್ಲಕ್ಷಿಸುವ ಯಾವುದೇ ಸರ್ಕಾರ ಪರಿತಪಿಸುವ ಪರಿಸ್ಥಿತಿ ಬರುತ್ತದೆ. ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರು ಮಾತಿಗೆ ತಪ್ಪಿದ್ದರಿಂದಲೇ ಅತಂತ್ರ ಸ್ಥಿತಿಗೆ ಸಿಲುಕಿದರು. ಒಳಮೀಸಲಾತಿ ಜಾರಿಗೊಳಿಸುವ ಅಧಿಕಾರವು ರಾಜ್ಯ ಸರ್ಕಾರಗಳಿಗೆ ಇದೆ ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ಈ ಆದೇಶ ಅನುಸರಿಸಿ ಈಗಾಗಲೇ ಕೆಲವು ರಾಜ್ಯಗಳಲ್ಲಿ ಒಳಮೀಸಲಾತಿ ಜಾರಿಯಾಗಿದೆ ಎಂದು ಹೇಳಿದರು.</p>.<p>ಮೀಸಲಾತಿ ಹೋರಾಟ ಸಮಿತಿ ಜಿಲ್ಲಾ ಘಟಕದ ಸಂಚಾಲಕ ಅಂಬಣ್ಣ ಆರೋಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ವಿರೂಪಾಕ್ಷಿ, ಮುಖಂಡರಾದ ಕೆ.ಪಿ.ಅನಿಲಕುಮಾರ್, ಮಧುಚಕ್ರವರ್ತಿ, ಬಾಲಸ್ವಾಮಿ ಕೊಡ್ಲಿ, ರಾಮಣ್ಣ, ಕೆ.ನಾಗರಾಜ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>