<p><strong>ಮಾನ್ವಿ:</strong> ‘ರೈತರ ಎಫ್ಐಡಿ ಸಮಸ್ಯೆ ನಿವಾರಿಸಿ ಎಲ್ಲಾ ರೈತರಿಗೆ ಸಮರ್ಪಕವಾಗಿ ಬರ ಪರಿಹಾರ ಹಣ ಪಾವತಸಬೇಕು’ ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಶುಕ್ರವಾರ ಪಟ್ಟಣದಲ್ಲಿ ತಹಶೀಲ್ದಾರ್ ಜಗದೀಶ್ ಚೌರ ಅವರಿಗೆ ಮನವಿ ಸಲ್ಲಿಸಿದರು.</p>.<p>‘ಸರ್ಕಾರದಿಂದ ಬಿಡುಗಡೆಯಾದ ಬೆಳೆ ಹಾನಿ ಹಾಗೂ ಬರ ಪರಿಹಾರ ಹಣ ಎಲ್ಲಾ ರೈತರ ಖಾತೆಗಳಿಗೆ ಪಾವತಿಯಾಗಿಲ್ಲ. ಎಫ್ಐಡಿ ಸಮಸ್ಯೆ ನೆಪದಲ್ಲಿ ಹೆಚ್ಚಿನ ರೈತರು ಪರಿಹಾರದ ಹಣದಿಂದ ವಂಚಿತರಾಗಿದ್ದಾರೆ. ಈ ವಿಷಯವನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಬೇಕು. ಎಲ್ಲಾ ರೈತರಿಗೆ ಸಮರ್ಪಕವಾಗಿ ಬರ ಪರಿಹಾರ ಹಣ ಪಾವತಿಸಬೇಕು’ ಎಂದು ಮುಖ್ಯಮಂತ್ರಿಗೆ ಬರೆದ ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ.</p>.<p>ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ರಾಜಾ ವಿಜಯಕುಮಾರ ನಾಯಕ, ಪದಾಧಿಕಾರಿಗಳಾದ ವೆಂಕೋಬ ಯಾದವ, ಆನಂದ ಗೌಡ, ಜಲಾಲ್ ಶಾಸ್ತ್ರಿ ಕ್ಯಾಂಪ್ , ವೀರೇಶ ಮಳ್ಳಿ , ಗುರುರಾಜ ಕುಲಕರ್ಣಿ ಹಿರೇಕೊಟ್ನೆಕಲ್, ರಮೇಶ, ಕುಮಾರ ಕಾತರಕಿ, ಹನುಮಂತ, ವೀರೇಶ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾನ್ವಿ:</strong> ‘ರೈತರ ಎಫ್ಐಡಿ ಸಮಸ್ಯೆ ನಿವಾರಿಸಿ ಎಲ್ಲಾ ರೈತರಿಗೆ ಸಮರ್ಪಕವಾಗಿ ಬರ ಪರಿಹಾರ ಹಣ ಪಾವತಸಬೇಕು’ ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಶುಕ್ರವಾರ ಪಟ್ಟಣದಲ್ಲಿ ತಹಶೀಲ್ದಾರ್ ಜಗದೀಶ್ ಚೌರ ಅವರಿಗೆ ಮನವಿ ಸಲ್ಲಿಸಿದರು.</p>.<p>‘ಸರ್ಕಾರದಿಂದ ಬಿಡುಗಡೆಯಾದ ಬೆಳೆ ಹಾನಿ ಹಾಗೂ ಬರ ಪರಿಹಾರ ಹಣ ಎಲ್ಲಾ ರೈತರ ಖಾತೆಗಳಿಗೆ ಪಾವತಿಯಾಗಿಲ್ಲ. ಎಫ್ಐಡಿ ಸಮಸ್ಯೆ ನೆಪದಲ್ಲಿ ಹೆಚ್ಚಿನ ರೈತರು ಪರಿಹಾರದ ಹಣದಿಂದ ವಂಚಿತರಾಗಿದ್ದಾರೆ. ಈ ವಿಷಯವನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಬೇಕು. ಎಲ್ಲಾ ರೈತರಿಗೆ ಸಮರ್ಪಕವಾಗಿ ಬರ ಪರಿಹಾರ ಹಣ ಪಾವತಿಸಬೇಕು’ ಎಂದು ಮುಖ್ಯಮಂತ್ರಿಗೆ ಬರೆದ ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ.</p>.<p>ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ರಾಜಾ ವಿಜಯಕುಮಾರ ನಾಯಕ, ಪದಾಧಿಕಾರಿಗಳಾದ ವೆಂಕೋಬ ಯಾದವ, ಆನಂದ ಗೌಡ, ಜಲಾಲ್ ಶಾಸ್ತ್ರಿ ಕ್ಯಾಂಪ್ , ವೀರೇಶ ಮಳ್ಳಿ , ಗುರುರಾಜ ಕುಲಕರ್ಣಿ ಹಿರೇಕೊಟ್ನೆಕಲ್, ರಮೇಶ, ಕುಮಾರ ಕಾತರಕಿ, ಹನುಮಂತ, ವೀರೇಶ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>