<p><strong>ಮಾನ್ವಿ:</strong> ಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಲವು ವರ್ಷಗಳಿಂದ ಬೋಧಕ–ಬೋಧಕೇತರ ಹುದ್ದೆಗಳು ಖಾಲಿ ಇರುವ ಕಾರಣ ಮಕ್ಕಳನ್ನು ಸೇರಿಸಲು ಪಾಲಕರು ಹಿಂದೇಟು ಹಾಕುವಂತಾಗಿದೆ.</p>.<p>ಬಡ ವಿದ್ಯಾರ್ಥಿಗಳ ಪಿಯು ವ್ಯಾಸಂಗಕ್ಕೆ ನೆರವಾಗಬೇಕಿದ್ದ ಈ ಕಾಲೇಜಿನಲ್ಲಿ ಪ್ರತಿವರ್ಷ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸುತ್ತಿದೆ.</p>.<p>ಬೋಧಕರ ಕೊರತೆಯಿಂದಾಗಿ ಪರೀಕ್ಷಾ ಫಲಿತಾಂಶದ ಮೇಲೆ ಪರಿಣಾಮ ಬೀರಿದ್ದು, ಪ್ರತಿವರ್ಷ ಅತಿ ಕಡಿಮೆ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಸಾಗುತ್ತಿದ್ದಾರೆ.</p>.<p>ಖಾಲಿ ಹುದ್ದೆಗಳ ಭರ್ತಿಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಉದಾಸೀನ ಮಾಡುತ್ತಿದ್ದಾರೆ. ಸುಮಾರು ಐದು ದಶಕಗಳ ಇತಿಹಾಸ ಹೊಂದಿರುವ ಕಾಲೇಜು ಮುಚ್ಚುವ ಹಂತ ತಲುಪಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p><strong>ಬೋಧಕ ಹುದ್ದೆಗಳು:</strong> ಕಾಲೇಜಿನಲ್ಲಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗಕ್ಕೆ ಮಂಜೂರಾದ ಒಟ್ಟು 12 ಉಪನ್ಯಾಸಕ ಹುದ್ದೆಗಳ ಪೈಕಿ 7 ಹುದ್ದೆಗಳು ಖಾಲಿ ಇವೆ. ಕನ್ನಡ, ಇಂಗ್ಲಿಷ್, ಹಿಂದಿ, ಸಮಾಜಶಾಸ್ತ್ರ, ಭೌತಶಾಸ್ತ್ರ, ರಸಾಯನಶಾಸ್ತ್ರ ಹಾಗೂ ಜೀವಶಾಸ್ತ್ರ ವಿಷಯಗಳ ಕಾಯಂ ಉಪನ್ಯಾಸಕರಿಲ್ಲ. ಗಣಿತ ವಿಷಯದ ಕಾಯಂ ಉಪನ್ಯಾಸಕರನ್ನು ರಾಯಚೂರಿನ ಕಾಲೇಜಿಗೆ ವಾರದಲ್ಲಿ ಮೂರು ದಿನ ಎರವಲು ಸೇವೆಗೆ ನಿಯೋಜಿಸಲಾಗಿದೆ.</p>.<p>ಪ್ರತಿ ವರ್ಷ ವಿದ್ಯಾರ್ಥಿಗಳ ಪ್ರವೇಶ ಸಂಖ್ಯೆ ಆಧಾರದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅವಕಾಶವಿದ್ದರೂ, ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬವಾಗುತ್ತಿದೆ ಎಂಬುದು ವಿದ್ಯಾರ್ಥಿ ಮುಖಂಡರ ದೂರು.</p>.<p>2023-24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ ಒಟ್ಟು 54 ವಿದ್ಯಾರ್ಥಿಗಳ ಪೈಕಿ 19, ವಾಣಿಜ್ಯ ವಿಭಾಗದ ಒಟ್ಟು 11 ವಿದ್ಯಾರ್ಥಿಗಳ ಪೈಕಿ ಕೇವಲ ಇಬ್ಬರು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾಗಿದ್ದ 6 ವಿದ್ಯಾರ್ಥಿಗಳಲ್ಲಿ ಎಲ್ಲರೂ ಅನುತ್ತೀರ್ಣರಾಗಿ ಶೂನ್ಯ ಫಲಿತಾಂಶ ಪಡೆದಿದೆ.</p>.<p>ಬೋಧಕೇತರ ಹುದ್ದೆಗಳು ಖಾಲಿ: ಕಾಲೇಜಿಗೆ ಮಂಜೂರಾದ ಒಟ್ಟು 8 ಬೋಧಕೇತರ ಹುದ್ದೆಗಳ ಪೈಕಿ 6 ಹುದ್ದೆಗಳು ಖಾಲಿ ಇವೆ. ಕಚೇರಿ ನಿರ್ವಹಣೆಗೆ ಸಂಬಂಧಿಸಿದಂತೆ ಬೋಧಕೇತರ ನೌಕರರ ಕೆಲಸವನ್ನು ಕಾಯಂ ಉಪನ್ಯಾಸಕರು ನಿರ್ವಹಿಸಬೇಕಾದ ಅನಿವಾರ್ಯ ಪರಿಸ್ಥಿತಿ ಇದೆ.</p>.<p>ಕಾಲೇಜು ನೂತನವಾಗಿ ಸುಸಜ್ಜಿತ ಕಟ್ಟಡ ಹೊಂದಿದ್ದರೂ ಕಾಂಪೌಂಡ್ ಗೋಡೆ ಇಲ್ಲದ ಕಾರಣ ಅನೈತಿಕ ಚಟುವಟಿಕೆಗಳ ತಾಣವಾಗಿದೆ. ಕಿಡಿಗೇಡಿಗಳು ಕಾಲೇಜಿನ ಕಿಟಕಿಯ ಗಾಜುಗಳನ್ನು ಒಡೆದಿದ್ದಾರೆ.</p>.<p>ಕಾಲೇಜಿನ ಅಭಿವೃದ್ಧಿಗೆ ಸ್ಥಳೀಯ ಜನಪ್ರತಿನಿಧಿಗಳು ಕಾಳಜಿವಹಿಸಬೇಕು ಎಂಬುದು ಸಾರ್ವಜನಿಕರು ಒತ್ತಾಯ.</p>.<div><blockquote>ಖಾಲಿ ಇರುವ ಬೋಧಕ ಬೋಧಕೇತರ ಹುದ್ದೆಗಳ ಕುರಿತು ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ.</blockquote><span class="attribution">ಡಾ.ಕುಂಟೆಪ್ಪ ಗೌರಿಪುರ ಪ್ರಾಂಶುಪಾಲ ಬಾಲಕರ ಸರ್ಕಾರಿ ಪಿಯು ಕಾಲೇಜು ಮಾನ್ವಿ</span></div>.<div><blockquote>ಕಾಲೇಜಿನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹಾಗೂ ಮೂಲ ಸೌಕರ್ಯ ಕಲ್ಪಿಸಲು ಜನಪ್ರತಿನಿಧಿಗಳು ಅಧಿಕಾರಿಗಳು ಗಮನಹರಿಸಬೇಕು </blockquote><span class="attribution">ಬಿ.ಸಂತೋಷ ಹೂಗಾರ ಸಾಮಾಜಿಕ ಕಾರ್ಯಕರ್ತ ಮಾನ್ವಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾನ್ವಿ:</strong> ಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಲವು ವರ್ಷಗಳಿಂದ ಬೋಧಕ–ಬೋಧಕೇತರ ಹುದ್ದೆಗಳು ಖಾಲಿ ಇರುವ ಕಾರಣ ಮಕ್ಕಳನ್ನು ಸೇರಿಸಲು ಪಾಲಕರು ಹಿಂದೇಟು ಹಾಕುವಂತಾಗಿದೆ.</p>.<p>ಬಡ ವಿದ್ಯಾರ್ಥಿಗಳ ಪಿಯು ವ್ಯಾಸಂಗಕ್ಕೆ ನೆರವಾಗಬೇಕಿದ್ದ ಈ ಕಾಲೇಜಿನಲ್ಲಿ ಪ್ರತಿವರ್ಷ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸುತ್ತಿದೆ.</p>.<p>ಬೋಧಕರ ಕೊರತೆಯಿಂದಾಗಿ ಪರೀಕ್ಷಾ ಫಲಿತಾಂಶದ ಮೇಲೆ ಪರಿಣಾಮ ಬೀರಿದ್ದು, ಪ್ರತಿವರ್ಷ ಅತಿ ಕಡಿಮೆ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಸಾಗುತ್ತಿದ್ದಾರೆ.</p>.<p>ಖಾಲಿ ಹುದ್ದೆಗಳ ಭರ್ತಿಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಉದಾಸೀನ ಮಾಡುತ್ತಿದ್ದಾರೆ. ಸುಮಾರು ಐದು ದಶಕಗಳ ಇತಿಹಾಸ ಹೊಂದಿರುವ ಕಾಲೇಜು ಮುಚ್ಚುವ ಹಂತ ತಲುಪಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p><strong>ಬೋಧಕ ಹುದ್ದೆಗಳು:</strong> ಕಾಲೇಜಿನಲ್ಲಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗಕ್ಕೆ ಮಂಜೂರಾದ ಒಟ್ಟು 12 ಉಪನ್ಯಾಸಕ ಹುದ್ದೆಗಳ ಪೈಕಿ 7 ಹುದ್ದೆಗಳು ಖಾಲಿ ಇವೆ. ಕನ್ನಡ, ಇಂಗ್ಲಿಷ್, ಹಿಂದಿ, ಸಮಾಜಶಾಸ್ತ್ರ, ಭೌತಶಾಸ್ತ್ರ, ರಸಾಯನಶಾಸ್ತ್ರ ಹಾಗೂ ಜೀವಶಾಸ್ತ್ರ ವಿಷಯಗಳ ಕಾಯಂ ಉಪನ್ಯಾಸಕರಿಲ್ಲ. ಗಣಿತ ವಿಷಯದ ಕಾಯಂ ಉಪನ್ಯಾಸಕರನ್ನು ರಾಯಚೂರಿನ ಕಾಲೇಜಿಗೆ ವಾರದಲ್ಲಿ ಮೂರು ದಿನ ಎರವಲು ಸೇವೆಗೆ ನಿಯೋಜಿಸಲಾಗಿದೆ.</p>.<p>ಪ್ರತಿ ವರ್ಷ ವಿದ್ಯಾರ್ಥಿಗಳ ಪ್ರವೇಶ ಸಂಖ್ಯೆ ಆಧಾರದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅವಕಾಶವಿದ್ದರೂ, ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬವಾಗುತ್ತಿದೆ ಎಂಬುದು ವಿದ್ಯಾರ್ಥಿ ಮುಖಂಡರ ದೂರು.</p>.<p>2023-24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ ಒಟ್ಟು 54 ವಿದ್ಯಾರ್ಥಿಗಳ ಪೈಕಿ 19, ವಾಣಿಜ್ಯ ವಿಭಾಗದ ಒಟ್ಟು 11 ವಿದ್ಯಾರ್ಥಿಗಳ ಪೈಕಿ ಕೇವಲ ಇಬ್ಬರು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾಗಿದ್ದ 6 ವಿದ್ಯಾರ್ಥಿಗಳಲ್ಲಿ ಎಲ್ಲರೂ ಅನುತ್ತೀರ್ಣರಾಗಿ ಶೂನ್ಯ ಫಲಿತಾಂಶ ಪಡೆದಿದೆ.</p>.<p>ಬೋಧಕೇತರ ಹುದ್ದೆಗಳು ಖಾಲಿ: ಕಾಲೇಜಿಗೆ ಮಂಜೂರಾದ ಒಟ್ಟು 8 ಬೋಧಕೇತರ ಹುದ್ದೆಗಳ ಪೈಕಿ 6 ಹುದ್ದೆಗಳು ಖಾಲಿ ಇವೆ. ಕಚೇರಿ ನಿರ್ವಹಣೆಗೆ ಸಂಬಂಧಿಸಿದಂತೆ ಬೋಧಕೇತರ ನೌಕರರ ಕೆಲಸವನ್ನು ಕಾಯಂ ಉಪನ್ಯಾಸಕರು ನಿರ್ವಹಿಸಬೇಕಾದ ಅನಿವಾರ್ಯ ಪರಿಸ್ಥಿತಿ ಇದೆ.</p>.<p>ಕಾಲೇಜು ನೂತನವಾಗಿ ಸುಸಜ್ಜಿತ ಕಟ್ಟಡ ಹೊಂದಿದ್ದರೂ ಕಾಂಪೌಂಡ್ ಗೋಡೆ ಇಲ್ಲದ ಕಾರಣ ಅನೈತಿಕ ಚಟುವಟಿಕೆಗಳ ತಾಣವಾಗಿದೆ. ಕಿಡಿಗೇಡಿಗಳು ಕಾಲೇಜಿನ ಕಿಟಕಿಯ ಗಾಜುಗಳನ್ನು ಒಡೆದಿದ್ದಾರೆ.</p>.<p>ಕಾಲೇಜಿನ ಅಭಿವೃದ್ಧಿಗೆ ಸ್ಥಳೀಯ ಜನಪ್ರತಿನಿಧಿಗಳು ಕಾಳಜಿವಹಿಸಬೇಕು ಎಂಬುದು ಸಾರ್ವಜನಿಕರು ಒತ್ತಾಯ.</p>.<div><blockquote>ಖಾಲಿ ಇರುವ ಬೋಧಕ ಬೋಧಕೇತರ ಹುದ್ದೆಗಳ ಕುರಿತು ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ.</blockquote><span class="attribution">ಡಾ.ಕುಂಟೆಪ್ಪ ಗೌರಿಪುರ ಪ್ರಾಂಶುಪಾಲ ಬಾಲಕರ ಸರ್ಕಾರಿ ಪಿಯು ಕಾಲೇಜು ಮಾನ್ವಿ</span></div>.<div><blockquote>ಕಾಲೇಜಿನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹಾಗೂ ಮೂಲ ಸೌಕರ್ಯ ಕಲ್ಪಿಸಲು ಜನಪ್ರತಿನಿಧಿಗಳು ಅಧಿಕಾರಿಗಳು ಗಮನಹರಿಸಬೇಕು </blockquote><span class="attribution">ಬಿ.ಸಂತೋಷ ಹೂಗಾರ ಸಾಮಾಜಿಕ ಕಾರ್ಯಕರ್ತ ಮಾನ್ವಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>