<p>ಕವಿತಾಳ:<strong> </strong>ಮಸ್ಕಿ ತಾಲ್ಲೂಕಿನ ವಟಗಲ್ ಗ್ರಾಮದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿ ನಾಲ್ಕು ವರ್ಷಗಳಿಂದ ನನೆಗುದಿಗೆ ಬಿದ್ದಿದೆ.</p>.<p>ಗ್ರಾಮದ ಪರಿಶಿಷ್ಟರ ಓಣಿಯಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆಯಡಿ 2019-20 ನೇ ಸಾಲಿನಲ್ಲಿ ಅಂದಿನ ಶಾಸಕ ಪ್ರತಾಪಗೌಡ ಪಾಟೀಲ ಅವರು ₹12 ಲಕ್ಷ ಅನುದಾನ ನೀಡಿದ್ದರು.</p>.<p>ಕಾಮಗಾರಿಯ ಹೊಣೆ ಹೊತ್ತುಕೊಂಡ ನಿರ್ಮಿತಿ ಕೇಂದ್ರದ ಅಧಿಕಾರಿಗಳು ಸ್ಥಳೀಯರಿಗೆ ಉಪ ಗುತ್ತಿಗೆ ನೀಡಿದ್ದಾರೆ. ಮೇಲ್ಚಾವಣಿ ಹಂತದವರೆಗೂ ಕಟ್ಟಡ ನಿರ್ಮಾಣ ಮಾಡಲಾಗಿದೆ. ಹಣ ಬಿಡುಗಡೆ ಮಾಡದ ಕಾರಣ ಉಪ ಗುತ್ತಿಗೆದಾರ ಕಾಮಗಾರಿ ಸ್ಥಗಿತಗೊಳಿಸಿದ್ದಾರೆ.</p>.<p>‘ಮೂರು ವರ್ಷಗಳಿಂದ ಕಾಮಗಾರಿ ನನೆಗುದಿಗೆ ಬಿದ್ದಿದೆ. ಪರಿಶಿಷ್ಟರ ಅಭಿವೃದ್ದಿಗಾಗಿ ಮೀಸಲಿಟ್ಟ ಹಣವನ್ನು ಸಮರ್ಪಕವಾಗಿ ಬಳಕೆ ಮಾಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ಅಪೂರ್ಣ ಕಾಮಗಾರಿಯಿಂದ ಪ್ರಯೋಜನ ಇಲ್ಲದಂತಾಗಿದೆ’ ಎಂದು ಸ್ಥಳೀಯರಾದ ಮಹಾಂತೇಶ ಮತ್ತು ಯಲ್ಲಪ್ಪ ಆರೋಪಿಸಿದರು.</p>.<p>‘ಕಾಮಗಾರಿ ತಡವಾಗಿ ಆರಂಭಿಸಲಾಗಿದೆ. ಸಮುದಾಯ ಭವನ ನಿರ್ಮಾಣ ಜವಾಬ್ದಾರಿಯನ್ನು ಸ್ಥಳೀಯರಿಗೆ ವಹಿಸಿಕೊಟ್ಟು ಇದುವರೆಗೂ ಸಾಮಗ್ರಿಗಳನ್ನು ನೀಡಲಾಗಿದೆ. ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಪೂರ್ಣಗೊಳಿಸಲು ಉಪ ಗುತ್ತಿಗೆದಾರರಿಗೆ ಸೂಚಿಸಲಾಗುವುದು’ ಎಂದು ನಿರ್ಮಿತಿ ಕೇಂದ್ರದ ಎಂಜಿನಿಯರ್ ವಿನಾಯಕ ತಿಳಿಸಿದರು.</p>.<p>‘ಸಾಮಗ್ರಿ ವಿತರಣೆ ಮಾಡಿದ್ದಾರೆ. ವಿವಿಧ ಹಂತದಲ್ಲಿ ಬಿಡುಗಡೆ ಮಾಡಬೇಕಿದ್ದ ಹಣವನ್ನು ಸಕಾಲದಲ್ಲಿ ನೀಡದ ಕಾರಣ ಕಾಮಗಾರಿ ಸ್ಥಗಿತಗೊಳಿಸಿದ್ದೇವೆ. ಹಣ ಬಿಡುಗಡೆ ಮಾಡಿದರೆ ಕಾಮಗಾರಿಯನ್ನು ಮುಂದುವರಿಸುತ್ತೇವೆ’ ಎಂದು ಉಪ ಗುತ್ತಿಗೆದಾರ ಬಲವಂತರಾಯ ವಟಗಲ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕವಿತಾಳ:<strong> </strong>ಮಸ್ಕಿ ತಾಲ್ಲೂಕಿನ ವಟಗಲ್ ಗ್ರಾಮದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿ ನಾಲ್ಕು ವರ್ಷಗಳಿಂದ ನನೆಗುದಿಗೆ ಬಿದ್ದಿದೆ.</p>.<p>ಗ್ರಾಮದ ಪರಿಶಿಷ್ಟರ ಓಣಿಯಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆಯಡಿ 2019-20 ನೇ ಸಾಲಿನಲ್ಲಿ ಅಂದಿನ ಶಾಸಕ ಪ್ರತಾಪಗೌಡ ಪಾಟೀಲ ಅವರು ₹12 ಲಕ್ಷ ಅನುದಾನ ನೀಡಿದ್ದರು.</p>.<p>ಕಾಮಗಾರಿಯ ಹೊಣೆ ಹೊತ್ತುಕೊಂಡ ನಿರ್ಮಿತಿ ಕೇಂದ್ರದ ಅಧಿಕಾರಿಗಳು ಸ್ಥಳೀಯರಿಗೆ ಉಪ ಗುತ್ತಿಗೆ ನೀಡಿದ್ದಾರೆ. ಮೇಲ್ಚಾವಣಿ ಹಂತದವರೆಗೂ ಕಟ್ಟಡ ನಿರ್ಮಾಣ ಮಾಡಲಾಗಿದೆ. ಹಣ ಬಿಡುಗಡೆ ಮಾಡದ ಕಾರಣ ಉಪ ಗುತ್ತಿಗೆದಾರ ಕಾಮಗಾರಿ ಸ್ಥಗಿತಗೊಳಿಸಿದ್ದಾರೆ.</p>.<p>‘ಮೂರು ವರ್ಷಗಳಿಂದ ಕಾಮಗಾರಿ ನನೆಗುದಿಗೆ ಬಿದ್ದಿದೆ. ಪರಿಶಿಷ್ಟರ ಅಭಿವೃದ್ದಿಗಾಗಿ ಮೀಸಲಿಟ್ಟ ಹಣವನ್ನು ಸಮರ್ಪಕವಾಗಿ ಬಳಕೆ ಮಾಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ಅಪೂರ್ಣ ಕಾಮಗಾರಿಯಿಂದ ಪ್ರಯೋಜನ ಇಲ್ಲದಂತಾಗಿದೆ’ ಎಂದು ಸ್ಥಳೀಯರಾದ ಮಹಾಂತೇಶ ಮತ್ತು ಯಲ್ಲಪ್ಪ ಆರೋಪಿಸಿದರು.</p>.<p>‘ಕಾಮಗಾರಿ ತಡವಾಗಿ ಆರಂಭಿಸಲಾಗಿದೆ. ಸಮುದಾಯ ಭವನ ನಿರ್ಮಾಣ ಜವಾಬ್ದಾರಿಯನ್ನು ಸ್ಥಳೀಯರಿಗೆ ವಹಿಸಿಕೊಟ್ಟು ಇದುವರೆಗೂ ಸಾಮಗ್ರಿಗಳನ್ನು ನೀಡಲಾಗಿದೆ. ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಪೂರ್ಣಗೊಳಿಸಲು ಉಪ ಗುತ್ತಿಗೆದಾರರಿಗೆ ಸೂಚಿಸಲಾಗುವುದು’ ಎಂದು ನಿರ್ಮಿತಿ ಕೇಂದ್ರದ ಎಂಜಿನಿಯರ್ ವಿನಾಯಕ ತಿಳಿಸಿದರು.</p>.<p>‘ಸಾಮಗ್ರಿ ವಿತರಣೆ ಮಾಡಿದ್ದಾರೆ. ವಿವಿಧ ಹಂತದಲ್ಲಿ ಬಿಡುಗಡೆ ಮಾಡಬೇಕಿದ್ದ ಹಣವನ್ನು ಸಕಾಲದಲ್ಲಿ ನೀಡದ ಕಾರಣ ಕಾಮಗಾರಿ ಸ್ಥಗಿತಗೊಳಿಸಿದ್ದೇವೆ. ಹಣ ಬಿಡುಗಡೆ ಮಾಡಿದರೆ ಕಾಮಗಾರಿಯನ್ನು ಮುಂದುವರಿಸುತ್ತೇವೆ’ ಎಂದು ಉಪ ಗುತ್ತಿಗೆದಾರ ಬಲವಂತರಾಯ ವಟಗಲ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>