<p><strong>ರಾಯಚೂರು:</strong> ‘ಈಶಾನ್ಯ ಪದವೀಧರ ಕ್ಷೇತ್ರದ ಸರ್ವಾಂಗೀಣ ಪ್ರಗತಿಗಾಗಿ ನನಗೆ ಮೊದಲ ಪ್ರಾಶಸ್ತ್ಯದ ಮತ ನೀಡಬೇಕು’ ಎಂದು ಈಶಾನ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎನ್.ಪ್ರತಾಪ ರೆಡ್ಡಿ ಮನವಿ ಮಾಡಿದರು.</p>.<p>‘ನಾನು 2018ರಲ್ಲಿ ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಸ್ಪರ್ಧಿಸಿದ್ದೆ. ಆದರೆ ಕೆಲವು ಮತದಾರರು ಚುನಾವಣಾ ಆಯೋಗದ ಸೂಚನೆಯ ನಿಯಮಾನುಸಾರ ಮತದಾನ ಮಾಡದೇ ಇದ್ದುದರಿಂದ ಅಲ್ಪ ಮತಗಳಿಂದ ಪರಾಭವಗೊಂಡಿದ್ದೆ’ ಎಂದು ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.</p>.<p>‘ನಾನು ಧೃತಿಗೆಡದೆ ಇಂದಿಗೂ ಈ ಕ್ಷೇತ್ರ ವ್ಯಾಪ್ತಿಯ ಪದವೀಧರರ, ಶೈಕ್ಷಣಿಕ ಮತ್ತು ಸಾಮಾಜಿಕ ಸಂಘಟನೆಗಳೊಂದಿಗೆ ನಿರಂತರ ಸಂಪರ್ಕ ಹೊಂದಿದ್ದು ಸಕ್ರಿಯವಾಗಿದ್ದೇನೆ. ಕಲ್ಯಾಣ ಕರ್ನಾಟಕ ವ್ಯಾಪ್ತಿಗೆ ಒಳಪಟ್ಟಿರುವ ಎಲ್ಲ ಏಳು ಜಿಲ್ಲೆಗಳನ್ನು ಒಳಗೊಂಡ ಸರ್ಕಾರಿ ನೌಕರರ ವೃಂದ ಮತ್ತು ನೇಮಕಾತಿ ಅಡಿಯಲ್ಲಿ (ಸಿ ಮತ್ತು ಆರ್, ರೂಲ್) 7 ಜಿಲ್ಲೆಗಳ ಮಟ್ಟಿಗೆ ಪ್ರತ್ಯೇಕ ನಿಯಮಾವಳಿ ರೂಪಿಸುತ್ತೇನೆ. 371 ಜೆ ಕಲಂ ಅನುಷ್ಠಾನ ಸಮಿತಿಯನ್ನು ಕಲ್ಯಾಣ ಕರ್ನಾಟಕ ಭಾಗದ ಹಿರಿಯ ಮಂತ್ರಿಗಳ ಅಧ್ಯಕ್ಷತೆಯಲ್ಲಿ ರಚಿಸುತ್ತೇನೆ. ಸಮಿತಿಯಲ್ಲಿ 7 ಜಿಲ್ಲೆಗಳ ಆಯ್ದ ಚುನಾವಣಾ ಪ್ರತಿನಿಧಿಯ ಈ ಭಾಗದ ಸಂಪನ್ಮೂಲ ವ್ಯಕ್ತಿಗಳನ್ನು ಆಸಕ್ತ ತಜ್ಞರನ್ನು ಒಳಪಟ್ಟ ಸಮಿತಿಯನ್ನು ರಚಿಸಲಾಗುವುದು’ ಎಂದು ತಿಳಿಸಿದರು.</p>.<p>ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಪ್ರತಿವರ್ಷ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಪದವಿ ಕಾಲೇಜುಗಳನ್ನು ಹಂತ ಹಂತವಾಗಿ ಅನುದಾನಕ್ಕೆ ಒಳಪಡಿಸಲಾಗುವುದು ಎಂದರು.</p>.<p>ಅನುದಾನಕ್ಕೆ ಒಳಪಡುವ ಶಿಕ್ಷಣ ಸಂಸ್ಥೆಗಳು (ಟ್ಯೂಶನ್) ಶುಲ್ಕದಲ್ಲಿ ಪ್ರತಿಶತ ಶೇ 50ರಷ್ಟು ಹಣವನ್ನು ಆಡಳಿತ ಮಂಡಳಿಗೆ ನಿರ್ವಹಣೆಗಾಗಿ ನೀಡಬೇಕು. ಇದರಿಂದ ಸಾವಿರಾರು ಖಾಸಗಿ ಶಾಲಾ ಶಿಕ್ಷಕರು, ಉಪನ್ಯಾಸಕರ ಸೇವಾ ಭದ್ರತೆಗೆ ಹಾಗೂ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗುತ್ತದೆ ಎಂದರು.</p>.<p>ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಿದರೆ ಈ ಭಾಗದ ನಿರುದ್ಯೋಗ ಸಮಸ್ಯೆ ನಿವಾರಣೆಯಾಗಲಿದೆ. ಖಾಸಗಿ ಶಾಲಾ–ಕಾಲೇಜುಗಳ ನೋಂದಣಿ ಮತ್ತು ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದಂತೆ ಸರಳೀಕೃತ ಕಾನೂನುಗಳನ್ನು ರಚಿಸುವ ದಿಸೆಯಲ್ಲಿ ಪ್ರಯತ್ನ ಮಾಡುವೆ ಎಂದು ಹೇಳಿದರು.</p>.<p>ವೀರೇಶ ಕುಮಾರ, ಮಹೇಶ ಪಾಟೀಲ, ಮರಿಸ್ವಾಮಿ ರೆಡ್ಡಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ‘ಈಶಾನ್ಯ ಪದವೀಧರ ಕ್ಷೇತ್ರದ ಸರ್ವಾಂಗೀಣ ಪ್ರಗತಿಗಾಗಿ ನನಗೆ ಮೊದಲ ಪ್ರಾಶಸ್ತ್ಯದ ಮತ ನೀಡಬೇಕು’ ಎಂದು ಈಶಾನ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎನ್.ಪ್ರತಾಪ ರೆಡ್ಡಿ ಮನವಿ ಮಾಡಿದರು.</p>.<p>‘ನಾನು 2018ರಲ್ಲಿ ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಸ್ಪರ್ಧಿಸಿದ್ದೆ. ಆದರೆ ಕೆಲವು ಮತದಾರರು ಚುನಾವಣಾ ಆಯೋಗದ ಸೂಚನೆಯ ನಿಯಮಾನುಸಾರ ಮತದಾನ ಮಾಡದೇ ಇದ್ದುದರಿಂದ ಅಲ್ಪ ಮತಗಳಿಂದ ಪರಾಭವಗೊಂಡಿದ್ದೆ’ ಎಂದು ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.</p>.<p>‘ನಾನು ಧೃತಿಗೆಡದೆ ಇಂದಿಗೂ ಈ ಕ್ಷೇತ್ರ ವ್ಯಾಪ್ತಿಯ ಪದವೀಧರರ, ಶೈಕ್ಷಣಿಕ ಮತ್ತು ಸಾಮಾಜಿಕ ಸಂಘಟನೆಗಳೊಂದಿಗೆ ನಿರಂತರ ಸಂಪರ್ಕ ಹೊಂದಿದ್ದು ಸಕ್ರಿಯವಾಗಿದ್ದೇನೆ. ಕಲ್ಯಾಣ ಕರ್ನಾಟಕ ವ್ಯಾಪ್ತಿಗೆ ಒಳಪಟ್ಟಿರುವ ಎಲ್ಲ ಏಳು ಜಿಲ್ಲೆಗಳನ್ನು ಒಳಗೊಂಡ ಸರ್ಕಾರಿ ನೌಕರರ ವೃಂದ ಮತ್ತು ನೇಮಕಾತಿ ಅಡಿಯಲ್ಲಿ (ಸಿ ಮತ್ತು ಆರ್, ರೂಲ್) 7 ಜಿಲ್ಲೆಗಳ ಮಟ್ಟಿಗೆ ಪ್ರತ್ಯೇಕ ನಿಯಮಾವಳಿ ರೂಪಿಸುತ್ತೇನೆ. 371 ಜೆ ಕಲಂ ಅನುಷ್ಠಾನ ಸಮಿತಿಯನ್ನು ಕಲ್ಯಾಣ ಕರ್ನಾಟಕ ಭಾಗದ ಹಿರಿಯ ಮಂತ್ರಿಗಳ ಅಧ್ಯಕ್ಷತೆಯಲ್ಲಿ ರಚಿಸುತ್ತೇನೆ. ಸಮಿತಿಯಲ್ಲಿ 7 ಜಿಲ್ಲೆಗಳ ಆಯ್ದ ಚುನಾವಣಾ ಪ್ರತಿನಿಧಿಯ ಈ ಭಾಗದ ಸಂಪನ್ಮೂಲ ವ್ಯಕ್ತಿಗಳನ್ನು ಆಸಕ್ತ ತಜ್ಞರನ್ನು ಒಳಪಟ್ಟ ಸಮಿತಿಯನ್ನು ರಚಿಸಲಾಗುವುದು’ ಎಂದು ತಿಳಿಸಿದರು.</p>.<p>ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಪ್ರತಿವರ್ಷ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಪದವಿ ಕಾಲೇಜುಗಳನ್ನು ಹಂತ ಹಂತವಾಗಿ ಅನುದಾನಕ್ಕೆ ಒಳಪಡಿಸಲಾಗುವುದು ಎಂದರು.</p>.<p>ಅನುದಾನಕ್ಕೆ ಒಳಪಡುವ ಶಿಕ್ಷಣ ಸಂಸ್ಥೆಗಳು (ಟ್ಯೂಶನ್) ಶುಲ್ಕದಲ್ಲಿ ಪ್ರತಿಶತ ಶೇ 50ರಷ್ಟು ಹಣವನ್ನು ಆಡಳಿತ ಮಂಡಳಿಗೆ ನಿರ್ವಹಣೆಗಾಗಿ ನೀಡಬೇಕು. ಇದರಿಂದ ಸಾವಿರಾರು ಖಾಸಗಿ ಶಾಲಾ ಶಿಕ್ಷಕರು, ಉಪನ್ಯಾಸಕರ ಸೇವಾ ಭದ್ರತೆಗೆ ಹಾಗೂ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗುತ್ತದೆ ಎಂದರು.</p>.<p>ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಿದರೆ ಈ ಭಾಗದ ನಿರುದ್ಯೋಗ ಸಮಸ್ಯೆ ನಿವಾರಣೆಯಾಗಲಿದೆ. ಖಾಸಗಿ ಶಾಲಾ–ಕಾಲೇಜುಗಳ ನೋಂದಣಿ ಮತ್ತು ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದಂತೆ ಸರಳೀಕೃತ ಕಾನೂನುಗಳನ್ನು ರಚಿಸುವ ದಿಸೆಯಲ್ಲಿ ಪ್ರಯತ್ನ ಮಾಡುವೆ ಎಂದು ಹೇಳಿದರು.</p>.<p>ವೀರೇಶ ಕುಮಾರ, ಮಹೇಶ ಪಾಟೀಲ, ಮರಿಸ್ವಾಮಿ ರೆಡ್ಡಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>