<p><strong>ಕನಕಪುರ:</strong> ಕುಟುಂಬದ ಜೊತೆ ಪ್ರವಾಸಕ್ಕೆ ಬಂದಿದ್ದ ಯುವಕ ಗುರುವಾರ ತಾಲ್ಲೂಕಿನ ಸಂಗಮದ ಕಾವೇರಿ ನದಿಯಲ್ಲಿ ಕಾಲುಜಾರಿ ಮುಳುಗಿ ಮೃತಪಟ್ಟಿದ್ದಾನೆ.</p>.<p>ಬೆಂಗಳೂರಿನ ಹೆಣ್ಣೂರು ಮುಖ್ಯ ರಸ್ತೆಯ ಬೈರತಿಯ ಗೋಪಾಲ್ ಅವರ ಪುತ್ರ ಸಾಯಿತೇಜ(19) ಮೃತ ಯುವಕ.</p>.<p>ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಸಾಯಿತೇಜ ಗುರುವಾರ ಕಂಪನಿಗೆ ರಜೆ ಇದ್ದುದರಿಂದ ತಮ್ಮ ಕುಟುಂಬದ ಹತ್ತು ಮಂದಿ ಸದಸ್ಯರೊಂದಿಗೆ ತಾಲ್ಲೂಕಿನ ಸಂಗಮಕ್ಕೆ ಬಂದಿದ್ದರು. ಕುಟುಂಬದ ಸದಸ್ಯರೊಂದಿಗೆ ನೀರಿನಲ್ಲಿ ಇಳಿದು ಆಟವಾಡುವ ವೆಳೆ ಕಾಲು ಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಈ ವಿಚಾರವನ್ನು ಕುಟುಂಬದ ಸದಸ್ಯರು ಸಾತನೂರು ಪೊಲೀಸ್ ಠಾಣೆಗೆ ತಿಳಿಸಿದ್ದಾರೆ. ಮಾಹಿತಿ ಮೇರೆಗೆ ಸಾತನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಹುಡುಕಾಟ ನಡೆಸಿ ಸಂಜೆ ವೇಳೆಗೆ ಮೃತ ದೇಹವನ್ನು ಹೊರಕ್ಕೆ ತೆಗೆದು ಮೃತ ದೇಹವನ್ನು ಕನಕಪುರ ಸಾರ್ವಜನಿಕ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.</p>.<p>ಮರಣೋತ್ತರ ಪರೀಕ್ಷೆ ನಡೆಸಿ ಮೃತ ದೇಹವನ್ನು ಶುಕ್ರವಾರ ಮಧ್ಯಾಹ್ನ ಕುಟುಂಬದವರಿಗೆ ಹಸ್ತಾಂತರಿಸಳಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ಕುಟುಂಬದ ಜೊತೆ ಪ್ರವಾಸಕ್ಕೆ ಬಂದಿದ್ದ ಯುವಕ ಗುರುವಾರ ತಾಲ್ಲೂಕಿನ ಸಂಗಮದ ಕಾವೇರಿ ನದಿಯಲ್ಲಿ ಕಾಲುಜಾರಿ ಮುಳುಗಿ ಮೃತಪಟ್ಟಿದ್ದಾನೆ.</p>.<p>ಬೆಂಗಳೂರಿನ ಹೆಣ್ಣೂರು ಮುಖ್ಯ ರಸ್ತೆಯ ಬೈರತಿಯ ಗೋಪಾಲ್ ಅವರ ಪುತ್ರ ಸಾಯಿತೇಜ(19) ಮೃತ ಯುವಕ.</p>.<p>ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಸಾಯಿತೇಜ ಗುರುವಾರ ಕಂಪನಿಗೆ ರಜೆ ಇದ್ದುದರಿಂದ ತಮ್ಮ ಕುಟುಂಬದ ಹತ್ತು ಮಂದಿ ಸದಸ್ಯರೊಂದಿಗೆ ತಾಲ್ಲೂಕಿನ ಸಂಗಮಕ್ಕೆ ಬಂದಿದ್ದರು. ಕುಟುಂಬದ ಸದಸ್ಯರೊಂದಿಗೆ ನೀರಿನಲ್ಲಿ ಇಳಿದು ಆಟವಾಡುವ ವೆಳೆ ಕಾಲು ಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಈ ವಿಚಾರವನ್ನು ಕುಟುಂಬದ ಸದಸ್ಯರು ಸಾತನೂರು ಪೊಲೀಸ್ ಠಾಣೆಗೆ ತಿಳಿಸಿದ್ದಾರೆ. ಮಾಹಿತಿ ಮೇರೆಗೆ ಸಾತನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಹುಡುಕಾಟ ನಡೆಸಿ ಸಂಜೆ ವೇಳೆಗೆ ಮೃತ ದೇಹವನ್ನು ಹೊರಕ್ಕೆ ತೆಗೆದು ಮೃತ ದೇಹವನ್ನು ಕನಕಪುರ ಸಾರ್ವಜನಿಕ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.</p>.<p>ಮರಣೋತ್ತರ ಪರೀಕ್ಷೆ ನಡೆಸಿ ಮೃತ ದೇಹವನ್ನು ಶುಕ್ರವಾರ ಮಧ್ಯಾಹ್ನ ಕುಟುಂಬದವರಿಗೆ ಹಸ್ತಾಂತರಿಸಳಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>