ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಾಗಡಿ ಬಳಿ ಅಪಘಾತ: ಗಾಯಾಳು ಯುವತಿ ಸಾವು

Published : 20 ಸೆಪ್ಟೆಂಬರ್ 2024, 8:57 IST
Last Updated : 20 ಸೆಪ್ಟೆಂಬರ್ 2024, 8:57 IST
ಫಾಲೋ ಮಾಡಿ
Comments

ಕುದೂರು: ಇಲ್ಲಿನ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ–75ರ ಭದ್ರಾಪುರ ಗೇಟ್ ಬಳಿ ಸೆ. 17ರಂದು ಮರಕ್ಕೆ ಕಾರು ಡಿಕ್ಕಿ ಹೊಡೆದಿದ್ದ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು, ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಇದರೊಂದಿಗೆ ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಮೃತರ ಸಂಖ್ಯೆ ಐದಕ್ಕೇರಿದೆ.

ಬೆಂಗಳೂರಿನ ಬಾಗಲಗುಂಟೆಯಲ್ಲಿ ವಾಸವಾಗಿದ್ದ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಹುಲಿವಾನ ಗ್ರಾಮದ ಕುಸುಮ (21) ಮೃತ ಯುವತಿ. ಘಟನೆಯಲ್ಲಿ ಗಂಭೀರವಾಗಿದ್ದ ಅವರನ್ನು ಸ್ಪರ್ಶ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತುರ್ತು ಶಸ್ತ್ರಚಿಕಿತ್ಸೆ ಕೂಡ ಮಾಡಲಾಗಿತ್ತು. ಎರಡು ದಿನಗಳಿಂದ ಸಾವು–ಬದುಕಿನ ನಡುವೆ ಹೋರಾಡುತ್ತಿದ್ದ ಕುಸುಮ ಸಾವು ಗೆಲ್ಲಲಾಗದೆ ಕೊನೆಯುಸಿರೆಳೆದರು.

ಮರಕ್ಕೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕುಸುಮ ಅವರ ತಂದೆ ನಂಜುಂಡಪ್ಪ (56), ಶಾರದಮ್ಮ (50), ತಾಯಿ ಭದ್ರಮ್ಮ (80) ಹಾಗೂ ನಂಜುಂಡಪ್ಪ ಸ್ನೇಹಿತ ನಾಗರಾಜು (54) ಸ್ಥಳದಲ್ಲೇ ಮೃತಪಟ್ಟಿದ್ದರು. ದಂಪತಿಯ ಏಕೈಕ ಪುತ್ರಿಯಾಗಿದ್ದ ಕುಸುಮ ಅವರು, ಬೆಂಗಳೂರಿನ ಕಾಲೇಜೊಂದರಲ್ಲಿ ಎಂ.ಬಿಎ ಓದುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT