<p><strong>ಚನ್ನಪಟ್ಟಣ</strong>: ಕೌಟಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಗೆ ಪತಿಯೇ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ನಗರದ ಎಲೇಕೇರಿ ರೈಲ್ವೆಗೇಟ್ ಬಳಿ ಬುಧವಾರ ನಡೆದಿದೆ.</p>.<p>ಪತ್ನಿ ಶ್ವೇತಾ (37) ಗಂಭೀರವಾಗಿ ಗಾಯಗೊಂಡಿದ್ದಾರೆ. ತಾಲ್ಲೂಕಿನ ಅರಳಾಳುಸಂದ್ರ ಗ್ರಾಮದ ಅರವಿಂದ ಚಾಕುವಿನಿಂದ ಇರಿದ ಆರೋಪಿ. ಈತ ಸಂಜೆ ಮೂರು ಗಂಟೆಯ ಸಮಯದಲ್ಲಿ ತನ್ನ ಬೈಕ್ನಲ್ಲಿ ಬಂದು ಟೈಲರಿಂಗ್ ಹಾಲ್ನಲ್ಲಿ ಕೆಲಸ ಮಾಡುತ್ತಿದ್ದ ಪತ್ನಿಗೆ ಚಾಕುವಿನಿಂದ ಇರಿದು ಪರಾರಿಯಾಗಲು ಯತ್ನಿಸಿದಾಗ ಸ್ಥಳೀಯರು ಆತನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.</p>.<p>ತಾಲ್ಲೂಕಿನ ದ್ಯಾವಪಟ್ಟಣ ಗ್ರಾಮದವರಾದ ಶ್ವೇತಾ ಹಾಗೂ ಅರವಿಂದ ಮದುವೆಯಾಗಿ ಕೆಲವು ವರ್ಷಗಳಾಗಿದ್ದು, ಒಬ್ಬ ಮಗ ಹಾಗೂ ಒಬ್ಬ ಮಗಳು ಇದ್ದಾರೆ. ಕಳೆದ ಮೂರು ವರ್ಷಗಳ ಹಿಂದೆ ಗಂಡಹೆಂಡತಿಯ ಸಂಬಂಧದಲ್ಲಿ ಕಲಹ ಏರ್ಪಟ್ಟು ಶ್ವೇತಾ ತನ್ನ ಮಕ್ಕಳನ್ನು ಕರೆದುಕೊಂಡು ಬಂದು ನಗರದ ಎಲೇಕೇರಿಯ ತನ್ನ ಅಕ್ಕನ ಮನೆಯಲ್ಲಿ ವಾಸವಿದ್ದರು. ಜೀವನ ನಿರ್ವಹಣೆಗಾಗಿ ಎಲೇಕೇರಿ ರೈಲ್ವೆಗೇಟ್ ಬಳಿಯಲ್ಲಿ ಲೇಡಿಸ್ ಟೈಲರಿಂಗ್ ಹಾಲ್ ಇಟ್ಟುಕೊಂಡಿದ್ದರು ಎಂದು ತಿಳಿದುಬಂದಿದೆ.</p>.<p>ಮದ್ಯಪಾನ ಮಾಡಿ ಬಂದಿದ್ದ ಅರವಿಂದ ಏಕಾಏಕಿ ಶ್ವೇತಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದು, ತೀವ್ರ ರಕ್ತಸ್ರಾವವಾಗಿ ಗಂಭೀರವಾಗಿ ಗಾಯಗೊಂಡ ಅವರನ್ನು ಅಕ್ಕಪಕ್ಕದವರು ತಕ್ಷಣ ನಗರದ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ನಗರದ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ಕೌಟಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಗೆ ಪತಿಯೇ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ನಗರದ ಎಲೇಕೇರಿ ರೈಲ್ವೆಗೇಟ್ ಬಳಿ ಬುಧವಾರ ನಡೆದಿದೆ.</p>.<p>ಪತ್ನಿ ಶ್ವೇತಾ (37) ಗಂಭೀರವಾಗಿ ಗಾಯಗೊಂಡಿದ್ದಾರೆ. ತಾಲ್ಲೂಕಿನ ಅರಳಾಳುಸಂದ್ರ ಗ್ರಾಮದ ಅರವಿಂದ ಚಾಕುವಿನಿಂದ ಇರಿದ ಆರೋಪಿ. ಈತ ಸಂಜೆ ಮೂರು ಗಂಟೆಯ ಸಮಯದಲ್ಲಿ ತನ್ನ ಬೈಕ್ನಲ್ಲಿ ಬಂದು ಟೈಲರಿಂಗ್ ಹಾಲ್ನಲ್ಲಿ ಕೆಲಸ ಮಾಡುತ್ತಿದ್ದ ಪತ್ನಿಗೆ ಚಾಕುವಿನಿಂದ ಇರಿದು ಪರಾರಿಯಾಗಲು ಯತ್ನಿಸಿದಾಗ ಸ್ಥಳೀಯರು ಆತನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.</p>.<p>ತಾಲ್ಲೂಕಿನ ದ್ಯಾವಪಟ್ಟಣ ಗ್ರಾಮದವರಾದ ಶ್ವೇತಾ ಹಾಗೂ ಅರವಿಂದ ಮದುವೆಯಾಗಿ ಕೆಲವು ವರ್ಷಗಳಾಗಿದ್ದು, ಒಬ್ಬ ಮಗ ಹಾಗೂ ಒಬ್ಬ ಮಗಳು ಇದ್ದಾರೆ. ಕಳೆದ ಮೂರು ವರ್ಷಗಳ ಹಿಂದೆ ಗಂಡಹೆಂಡತಿಯ ಸಂಬಂಧದಲ್ಲಿ ಕಲಹ ಏರ್ಪಟ್ಟು ಶ್ವೇತಾ ತನ್ನ ಮಕ್ಕಳನ್ನು ಕರೆದುಕೊಂಡು ಬಂದು ನಗರದ ಎಲೇಕೇರಿಯ ತನ್ನ ಅಕ್ಕನ ಮನೆಯಲ್ಲಿ ವಾಸವಿದ್ದರು. ಜೀವನ ನಿರ್ವಹಣೆಗಾಗಿ ಎಲೇಕೇರಿ ರೈಲ್ವೆಗೇಟ್ ಬಳಿಯಲ್ಲಿ ಲೇಡಿಸ್ ಟೈಲರಿಂಗ್ ಹಾಲ್ ಇಟ್ಟುಕೊಂಡಿದ್ದರು ಎಂದು ತಿಳಿದುಬಂದಿದೆ.</p>.<p>ಮದ್ಯಪಾನ ಮಾಡಿ ಬಂದಿದ್ದ ಅರವಿಂದ ಏಕಾಏಕಿ ಶ್ವೇತಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದು, ತೀವ್ರ ರಕ್ತಸ್ರಾವವಾಗಿ ಗಂಭೀರವಾಗಿ ಗಾಯಗೊಂಡ ಅವರನ್ನು ಅಕ್ಕಪಕ್ಕದವರು ತಕ್ಷಣ ನಗರದ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ನಗರದ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>