<p><strong>ಕನಕಪುರ:</strong> ಕೋಡಿಹಳ್ಳಿ ಹೋಬಳಿ ಹೊಸದುರ್ಗ ಗ್ರಾಮ ಪಂಚಾಯಿತಿಯಲ್ಲಿ ಕೇಂದ್ರ ಸರ್ಕಾರದ ಸವಲತ್ತು ಮತ್ತು ಯೋಜನೆಗಳನ್ನು ಸಾರ್ವಜನಿಕವಾಗಿ ತಿಳಿಸಿ ಜಾಗೃತಿ ಮೂಡಿಸಲು ವಿಕಸಿತ ಭಾರತ ಸಂಕಲ್ಪ ಯಾತ್ರೆ ಗುರುವಾರ ನಡೆಯಿತು.</p>.<p>ಕೇಂದ್ರದ ಬೃಹತ್ ಕೈಗಾರಿಕಾ ರಾಜ್ಯ ಸಚಿವ ಕೃಷ್ಣಲಾಲ್ ಗುರ್ಜಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಗ್ರಾಮೀಣರು, ಬುಡಕಟ್ಟು ಸಮುದಾಯ, ಮಹಿಳೆಯರು, ಹಿಂದುಳಿದವರು, ರೈತರ ಕಲ್ಯಾಣಕ್ಕಾಗಿ ಆನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.</p>.<p>ನರೇಗಾ ಯೋಜನೆ, ಜಲಜೀವನ್ ಮಿಷನ್, ಉಜ್ವಲ್ ಯೋಜನೆಗಳಿಂದ ಗ್ರಾಮೀಣ ಅಭಿವೃದ್ಧಿ ಆಗುತ್ತಿದೆ ಎಂದರು.</p>.<p>ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ ಮಾತನಾಡಿ, ನರೇಗಾ ಯೋಜನೆ ಈ ಭಾಗದಲ್ಲಿ ಹೆಚ್ಚು ಅನುಷ್ಠಾನಗೊಂಡಿದೆ. ಇದರಿಂದ ರೈತರು ಹೆಚ್ಚು ಪ್ರಗತಿ ಕಂಡಿದ್ದಾರೆ ಎಂದರು.</p>.<p>ಕಾರ್ಯಕ್ರಮದಲ್ಲಿ ಪಿಡಿಒ ಎನ್.ಎಸ್.ರಘು, ಪಂಚಾಯಿತಿ ಸದಸ್ಯರಾದ ರಾಜೇಂದ್ರ, ನಾಗರಾಜು, ರಾಮಚಂದ್ರ, ಮಧುಸೂಧನ್ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ಕೋಡಿಹಳ್ಳಿ ಹೋಬಳಿ ಹೊಸದುರ್ಗ ಗ್ರಾಮ ಪಂಚಾಯಿತಿಯಲ್ಲಿ ಕೇಂದ್ರ ಸರ್ಕಾರದ ಸವಲತ್ತು ಮತ್ತು ಯೋಜನೆಗಳನ್ನು ಸಾರ್ವಜನಿಕವಾಗಿ ತಿಳಿಸಿ ಜಾಗೃತಿ ಮೂಡಿಸಲು ವಿಕಸಿತ ಭಾರತ ಸಂಕಲ್ಪ ಯಾತ್ರೆ ಗುರುವಾರ ನಡೆಯಿತು.</p>.<p>ಕೇಂದ್ರದ ಬೃಹತ್ ಕೈಗಾರಿಕಾ ರಾಜ್ಯ ಸಚಿವ ಕೃಷ್ಣಲಾಲ್ ಗುರ್ಜಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಗ್ರಾಮೀಣರು, ಬುಡಕಟ್ಟು ಸಮುದಾಯ, ಮಹಿಳೆಯರು, ಹಿಂದುಳಿದವರು, ರೈತರ ಕಲ್ಯಾಣಕ್ಕಾಗಿ ಆನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.</p>.<p>ನರೇಗಾ ಯೋಜನೆ, ಜಲಜೀವನ್ ಮಿಷನ್, ಉಜ್ವಲ್ ಯೋಜನೆಗಳಿಂದ ಗ್ರಾಮೀಣ ಅಭಿವೃದ್ಧಿ ಆಗುತ್ತಿದೆ ಎಂದರು.</p>.<p>ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ ಮಾತನಾಡಿ, ನರೇಗಾ ಯೋಜನೆ ಈ ಭಾಗದಲ್ಲಿ ಹೆಚ್ಚು ಅನುಷ್ಠಾನಗೊಂಡಿದೆ. ಇದರಿಂದ ರೈತರು ಹೆಚ್ಚು ಪ್ರಗತಿ ಕಂಡಿದ್ದಾರೆ ಎಂದರು.</p>.<p>ಕಾರ್ಯಕ್ರಮದಲ್ಲಿ ಪಿಡಿಒ ಎನ್.ಎಸ್.ರಘು, ಪಂಚಾಯಿತಿ ಸದಸ್ಯರಾದ ರಾಜೇಂದ್ರ, ನಾಗರಾಜು, ರಾಮಚಂದ್ರ, ಮಧುಸೂಧನ್ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>