<p><strong>ಬಿಡದಿ:</strong> ಪಟ್ಟಣ ವ್ಯಾಪ್ತಿಯಲ್ಲಿ ಭಾನುವಾರ ಬೆಳಿಗ್ಗೆ ಶಾಸಕ ಎಚ್.ಸಿ.ಬಾಲಕೃಷ್ಣ ‘ಶುಭೋದಯ’ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.</p>.<p>ಬೆಳಿಗ್ಗೆ 7ಕ್ಕೆ ಪುರಸಭೆ ಅಧಿಕಾರಿಗಳ ಜೊತೆಗೆ ರಸ್ತೆಗಿಳಿದು, ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚಾರ ಮಾಡಿ ಮೂಲಭೂತ ಸೌಕರ್ಯಗಳ ಕೊರತೆ ಬಗ್ಗೆ ಪರಿಶೀಲನೆ ಮಾಡಿದರು. ಪಟ್ಟಣದ ಪ್ರಮುಖ ರಸ್ತೆಗಳಾದ ರೈಲ್ವೆ ನಿಲ್ದಾಣಸ ರಸ್ತೆ, ಕೇತುಗಾನಹಳ್ಳಿ ರಸ್ತೆ ಸೇರಿದಂತೆ ಹಲವು ಭಾಗಗಳಲ್ಲಿ ಸಂಚಾರ ಮಾಡಿ ಅಲ್ಲಿನ ಸಮಸ್ಯೆಗಳನ್ನು ವಿಚಾರಿಸಿದರು.</p>.<p>ಈ ವೇಳೆ ಶಾಸಕರ ಮುಂದೆ ತಮ್ಮ ಸಮಸ್ಯೆಗಳನ್ನು ಬಿಚ್ಚಿಟ್ಟ ಸಾರ್ವಜನಿಕರು, ‘ಪುರಸಭೆ ಕಚೇರಿಯಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳು ಸಕಾಲದಲ್ಲಿ ಆಗುತ್ತಿಲ್ಲ, ಅಲೆದಾಡಿ ಸಾಕಾಗುತ್ತದೆ’ ಎಂದು ಅಳಲು ತೋಡಿಕೊಂಡರು. ಇ-ಖಾತೆ, ಖಾತೆಗಳ ಬದಲಾವಣೆ, ಕಸದ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಇನ್ನಿತರ ಕೆಲಸಗಳಿಗಾಗಿ ಕಚೇರಿಗೆ ಹೋದರೆ ಯಾರೂ ಸ್ಪಂದಿಸುವುದೇ ಇಲ್ಲ. ಈ ಬಗ್ಗೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿ ಎಂದು ಮನವಿ ಮಾಡಿದರು.</p>.<p>ಸಾರ್ವಜನಿಕರಿಂದ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಶಾಸಕರು ಪುರಸಭೆ ಮುಖ್ಯಾಧಿಕಾರಿ ರಮೇಶ್ ಅವರನ್ನ ತೀವ್ರ ತರಾಟೆಗೆ ತೆಗೆದುಕೊಂಡರು. ‘ಮೊದಲು ನೀವು ಹಾಗೂ ನಿಮ್ಮ ಸಿಬ್ಬಂದಿ ವರ್ತನೆ ಬದಲಿಸಿಕೊಂಡು ಸಾರ್ವಜನಿಕರ ಕೆಲಸ ಕಾರ್ಯಗಳನ್ನ ಮಾಡಿ. ನಿಗದಿತ ಸಮಯದಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಿ’ ಎಂದು ತಾಕೀತು ಮಾಡಿದರು.</p>.<p>ಬಿಡದಿ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದಾಗ, ಪಟ್ಟಣದ ಗ್ರಾಮೀಣ ಪ್ರದೇಶದ ಕೆಲವು ಭಾಗಗಳಿಗೆ ಬಿಎಂಟಿಸಿ ಬಸ್ಗಳು ಬರುತ್ತಿಲ್ಲ ಎಂದು ದೂರುಗಳು ಕೇಳಿ ಬಂದವು. ಶಾಸಕರು ಡಿಪೋ ಮ್ಯಾನೇಜರ್ಗೆ ಕರೆ ಮಾಡಿ ಹೆಚ್ಚುವರಿ ಬಸ್ ಸೌಲಭ್ಯ ಮಾಡುವಂತೆ ಹೇಳಿದರು.</p>.<p>ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷ ಗಾಣಕಲ್ ನಟರಾಜ್, ಪುರಸಭೆ ಮುಖ್ಯಾಧಿಕಾರಿ ರಮೇಶ್, ಬಿಡದಿ ಠಾಣೆ ಸಿಪಿಐ ಶಂಕರ ನಾಯಕ್, ಪುರಸಭೆ ಸದಸ್ಯರಾದ ಉಮೇಶ್, ಕುಮಾರ್, ನವೀನ್ ಸೇರಿದಂತೆ ಪುರಸಭೆ ಸಿಬ್ಬಂದಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಿಡದಿ:</strong> ಪಟ್ಟಣ ವ್ಯಾಪ್ತಿಯಲ್ಲಿ ಭಾನುವಾರ ಬೆಳಿಗ್ಗೆ ಶಾಸಕ ಎಚ್.ಸಿ.ಬಾಲಕೃಷ್ಣ ‘ಶುಭೋದಯ’ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.</p>.<p>ಬೆಳಿಗ್ಗೆ 7ಕ್ಕೆ ಪುರಸಭೆ ಅಧಿಕಾರಿಗಳ ಜೊತೆಗೆ ರಸ್ತೆಗಿಳಿದು, ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚಾರ ಮಾಡಿ ಮೂಲಭೂತ ಸೌಕರ್ಯಗಳ ಕೊರತೆ ಬಗ್ಗೆ ಪರಿಶೀಲನೆ ಮಾಡಿದರು. ಪಟ್ಟಣದ ಪ್ರಮುಖ ರಸ್ತೆಗಳಾದ ರೈಲ್ವೆ ನಿಲ್ದಾಣಸ ರಸ್ತೆ, ಕೇತುಗಾನಹಳ್ಳಿ ರಸ್ತೆ ಸೇರಿದಂತೆ ಹಲವು ಭಾಗಗಳಲ್ಲಿ ಸಂಚಾರ ಮಾಡಿ ಅಲ್ಲಿನ ಸಮಸ್ಯೆಗಳನ್ನು ವಿಚಾರಿಸಿದರು.</p>.<p>ಈ ವೇಳೆ ಶಾಸಕರ ಮುಂದೆ ತಮ್ಮ ಸಮಸ್ಯೆಗಳನ್ನು ಬಿಚ್ಚಿಟ್ಟ ಸಾರ್ವಜನಿಕರು, ‘ಪುರಸಭೆ ಕಚೇರಿಯಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳು ಸಕಾಲದಲ್ಲಿ ಆಗುತ್ತಿಲ್ಲ, ಅಲೆದಾಡಿ ಸಾಕಾಗುತ್ತದೆ’ ಎಂದು ಅಳಲು ತೋಡಿಕೊಂಡರು. ಇ-ಖಾತೆ, ಖಾತೆಗಳ ಬದಲಾವಣೆ, ಕಸದ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಇನ್ನಿತರ ಕೆಲಸಗಳಿಗಾಗಿ ಕಚೇರಿಗೆ ಹೋದರೆ ಯಾರೂ ಸ್ಪಂದಿಸುವುದೇ ಇಲ್ಲ. ಈ ಬಗ್ಗೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿ ಎಂದು ಮನವಿ ಮಾಡಿದರು.</p>.<p>ಸಾರ್ವಜನಿಕರಿಂದ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಶಾಸಕರು ಪುರಸಭೆ ಮುಖ್ಯಾಧಿಕಾರಿ ರಮೇಶ್ ಅವರನ್ನ ತೀವ್ರ ತರಾಟೆಗೆ ತೆಗೆದುಕೊಂಡರು. ‘ಮೊದಲು ನೀವು ಹಾಗೂ ನಿಮ್ಮ ಸಿಬ್ಬಂದಿ ವರ್ತನೆ ಬದಲಿಸಿಕೊಂಡು ಸಾರ್ವಜನಿಕರ ಕೆಲಸ ಕಾರ್ಯಗಳನ್ನ ಮಾಡಿ. ನಿಗದಿತ ಸಮಯದಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಿ’ ಎಂದು ತಾಕೀತು ಮಾಡಿದರು.</p>.<p>ಬಿಡದಿ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದಾಗ, ಪಟ್ಟಣದ ಗ್ರಾಮೀಣ ಪ್ರದೇಶದ ಕೆಲವು ಭಾಗಗಳಿಗೆ ಬಿಎಂಟಿಸಿ ಬಸ್ಗಳು ಬರುತ್ತಿಲ್ಲ ಎಂದು ದೂರುಗಳು ಕೇಳಿ ಬಂದವು. ಶಾಸಕರು ಡಿಪೋ ಮ್ಯಾನೇಜರ್ಗೆ ಕರೆ ಮಾಡಿ ಹೆಚ್ಚುವರಿ ಬಸ್ ಸೌಲಭ್ಯ ಮಾಡುವಂತೆ ಹೇಳಿದರು.</p>.<p>ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷ ಗಾಣಕಲ್ ನಟರಾಜ್, ಪುರಸಭೆ ಮುಖ್ಯಾಧಿಕಾರಿ ರಮೇಶ್, ಬಿಡದಿ ಠಾಣೆ ಸಿಪಿಐ ಶಂಕರ ನಾಯಕ್, ಪುರಸಭೆ ಸದಸ್ಯರಾದ ಉಮೇಶ್, ಕುಮಾರ್, ನವೀನ್ ಸೇರಿದಂತೆ ಪುರಸಭೆ ಸಿಬ್ಬಂದಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>