<p><strong>ಕನಕಪುರ</strong>:ಅಳ್ಳಿಮರದೊಡ್ಡಿ ಗ್ರಾಮದಲ್ಲಿ ಭಾನುವಾರ ಎರಡು ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಸವಾರ ಸಾವನಪ್ಪಿದ್ದು, ಮತೊಬ್ಬ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.</p>.<p>ತಾಲ್ಲೂಕಿನ ಕೋಡಿಹಳ್ಳಿ ಹೋಬಳಿ ಹೇರಿಂದ್ಯಾಪನಹಳ್ಳಿ ಗ್ರಾಮದ ಮಾರಯ್ಯ (65) ಮೃತ ಸವಾರ. ಚಂಬಳಕೆದೊಡ್ಡಿ ಗ್ರಾಮದ ನಾಗರಾಜು ಗಂಭೀರವಾಗಿ ಗಾಯಗೊಂಡು ನಿಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಹೇರಿಂದ್ಯಾಪನಹಳ್ಳಿಯಲ್ಲಿರುವ ಮಗನನ್ನು ನೋಡಲು ಭಾನುವಾರ ಬೆಳಗ್ಗೆ ಅಳಿಯ ಚಂದ್ರು ಜೊತೆ ಬೈಕ್ನಲ್ಲಿ ಬಂದಿದ್ದ ಮಾರಯ್ಯ ಬೆಂಗಳೂರಿಗೆ ಮರಳುತ್ತಿದ್ದರು.ಅಳ್ಳಿಮರದೊಡ್ಡಿ ಗ್ರಾಮದಲ್ಲಿ ಎದುರುಗಡೆಯಿಂದ ಬಂದ ನಾಗರಾಜು ಅವರ ಬೈಕ್ ಡಿಕ್ಕಿ ಹೊಡೆದಿದೆ.</p>.<p>ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಮಾರಯ್ಯನವರನ್ನು ಕನಕಪುರ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನಪ್ಪಿದರು.</p>.<p>ಅವರ ಅಳಿಯ ಚಂದ್ರು ಗಾಯಗೊಂಡಿದ್ದು ದಯಾನಂದ ಸಾಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋಡಿಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>:ಅಳ್ಳಿಮರದೊಡ್ಡಿ ಗ್ರಾಮದಲ್ಲಿ ಭಾನುವಾರ ಎರಡು ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಸವಾರ ಸಾವನಪ್ಪಿದ್ದು, ಮತೊಬ್ಬ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.</p>.<p>ತಾಲ್ಲೂಕಿನ ಕೋಡಿಹಳ್ಳಿ ಹೋಬಳಿ ಹೇರಿಂದ್ಯಾಪನಹಳ್ಳಿ ಗ್ರಾಮದ ಮಾರಯ್ಯ (65) ಮೃತ ಸವಾರ. ಚಂಬಳಕೆದೊಡ್ಡಿ ಗ್ರಾಮದ ನಾಗರಾಜು ಗಂಭೀರವಾಗಿ ಗಾಯಗೊಂಡು ನಿಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಹೇರಿಂದ್ಯಾಪನಹಳ್ಳಿಯಲ್ಲಿರುವ ಮಗನನ್ನು ನೋಡಲು ಭಾನುವಾರ ಬೆಳಗ್ಗೆ ಅಳಿಯ ಚಂದ್ರು ಜೊತೆ ಬೈಕ್ನಲ್ಲಿ ಬಂದಿದ್ದ ಮಾರಯ್ಯ ಬೆಂಗಳೂರಿಗೆ ಮರಳುತ್ತಿದ್ದರು.ಅಳ್ಳಿಮರದೊಡ್ಡಿ ಗ್ರಾಮದಲ್ಲಿ ಎದುರುಗಡೆಯಿಂದ ಬಂದ ನಾಗರಾಜು ಅವರ ಬೈಕ್ ಡಿಕ್ಕಿ ಹೊಡೆದಿದೆ.</p>.<p>ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಮಾರಯ್ಯನವರನ್ನು ಕನಕಪುರ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನಪ್ಪಿದರು.</p>.<p>ಅವರ ಅಳಿಯ ಚಂದ್ರು ಗಾಯಗೊಂಡಿದ್ದು ದಯಾನಂದ ಸಾಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋಡಿಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>