ಗುರುವಾರ, 3 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹೆದ್ದಾರಿಯಲ್ಲಿ ನಿಂತಿದ್ದ ಕಾರಿನಲ್ಲಿ ಶವ ಪತ್ತೆ

Published : 3 ಅಕ್ಟೋಬರ್ 2024, 14:44 IST
Last Updated : 3 ಅಕ್ಟೋಬರ್ 2024, 14:44 IST
ಫಾಲೋ ಮಾಡಿ
Comments

ಬಿಡದಿ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಗುರುವಾರ ಮುಂಜಾನೆ ಅನುಮಾನಾಸ್ಪದವಾಗಿ ನಿಂತಿದ್ದ ಕಾರಿನಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.

ರೈಲ್ವೆ ನಿಲ್ದಾಣ ಬಳಿಯ ಸುಭಾಷ್ ನರ್ಸಿಂಗ್ ಕಾಲೇಜ್ ಸಮೀಪ ಹೆದ್ದಾರಿಯ ಪಕ್ಕದಲ್ಲಿ ಅನುಮಾನಾಸ್ಪದವಾಗಿ ಕಾರನ್ನು ನಿಲ್ಲಿಸಲಾಗಿತ್ತು. ಈ ಬಗ್ಗೆ ದಾರಿಹೋಕರು ಬಿಡದಿ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದರು.

ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲಿಸಿದಾಗ ಕಾರಿನ ಹಿಂಬದಿ ಸೀಟಿನಲ್ಲಿ ಶವ ಪತ್ತೆಯಾಗಿದೆ. ಕಾರಿನ ಗಾಜನ್ನು ಒಡೆದು ಕಾರಿನಲ್ಲಿದ್ದ ದಾಖಲೆಗಳನ್ನು ಪರಿಶೀಲಿಸಿದಾಗ ಮೃತ ವ್ಯಕ್ತಿಯನ್ನು ಬೆಂಗಳೂರಿನ ಡಿ.ಜೆ ಹಳ್ಳಿ ನಿವಾಸಿ ಮುಜಾಹಿದ್ (29) ಎಂದು ಗುರುತಿಸಲಾಗಿದೆ.

ವೃತ್ತಿಯಲ್ಲಿ ಕಾರು ಚಾಲಕನಾಗಿದ್ದ ಮುಜಾಹಿದ್‌ ವಿಷ ಸೇವಿಸಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಮೃತನ ಸಂಬಂಧಿಕರಿಗೆ ವಿಷಯ ತಿಳಿಸಲಾಗಿದೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಮನಗರ ಜಿಲ್ಲಾ ಎಸ್‌ಪಿ ಕಾರ್ತಿಕ್ ರೆಡ್ಡಿ, ಹೆಚ್ಚುವರಿ ಎಸ್‌ಪಿ ಸುರೇಶ್, ಡಿವೈಎಸ್‌ಪಿ ದಿನಕರ್, ಬಿಡದಿ ಠಾಣೆ ವೃತ್ತ ನಿರೀಕ್ಷಕ ಶಂಕರ್ ನಾಯಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬೆರಳಚ್ಚು ತಜ್ಞರು, ಶ್ವಾನದಳ ಹಾಗೂ ಎಫ್‌ಎಸ್‌ಎಲ್ ತಂಡ ಭೇಟಿ ನೀಡಿತ್ತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT