<p><strong>ಹಾರೋಹಳ್ಳಿ</strong>: ತಾಲ್ಲೂಕಿನ ಮರಳವಾಡಿ ಹೋಬಳಿಯ ದೇವರಹಳ್ಳಿ ಗ್ರಾಮದಲ್ಲಿ ಸರ್ಕಾರ ಮಂಜೂರು ಮಾಡಿದ್ದ ಭೂಮಿ ಕಳೆದುಕೊಂಡಿರುವ ಗ್ರಾಮಸ್ಥರನ್ನು ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಎಂ. ನಾಗೇಶ್ ಅವರು ಮಂಗಳವಾರ ಭೇಟಿ ಮಾಡಿದರು.</p>.<p>ಭೂ ರಹಿತ ದಲಿತರಾದ ನಮಗೆ ಸರ್ಕಾರವೇ ನಾಲ್ಕು ದಶಕಗಳ ಹಿಂದೆ 92ಕ್ಕೂ ಹೆಚ್ಚು ಕುಟುಂಬಗಳಿಗೆ ಭೂಮಿ ಮಂಜೂರು ಮಾಡಿತ್ತು. ಅಂದಿನಿಂದ ಅದೇ ಭೂಮಿಯಲ್ಲಿ ಕೃಷಿ ಚಟುವಟಿಕೆ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದೇವೆ. ಇತ್ತೀಚೆಗೆ ಅರಣ್ಯ ಇಲಾಖೆಯವರು, ಈ ಜಾಗ ನಮಗೆ ಸೇರಿದ್ದು ಎಂದು ಹೇಳಿ ವಶಪಡಿಸಿಕೊಂಡಿದ್ದಾರೆ. ಇದರಿಂದಾಗಿ ನಾವು ಬೀದಿಗೆ ಬಂದಿದ್ದೇವೆ. ನಮಗೆ ನ್ಯಾಯ ಕೊಡಿಸಿ ಎಂದು ಮನವಿ ಮಾಡಿದರು.</p>.<p>ಗ್ರಾಮದ ಸರ್ವೇ ನಂಬರ್ 104ರಲ್ಲಿ ಜಮೀನು ಮಂಜೂರು ಮಾಡಿದ್ದ ಸರ್ಕಾರ ಫಲಾನುಭವಿಗಳಿಗೆ ಸಾಗುವಳಿ ಪತ್ರ ವಿತರಿಸಿತ್ತು. ಈಗಲೂ ನಮ್ಮೆಲ್ಲರ ಬಳಿ ಇದೆ. ಒ.ಎಂ ಕಾಪಿ, ನಕಾಶೆ ಪತ್ರ, ಪಹಣಿ, ಮ್ಯುಟೇಷನ್, ಇ.ಸಿ ಇತರ ಕಂದಾಯ ದಾಖಲೆಗಳನ್ನು ಸಹ ಪಡೆದು ಭೂಮಿಯಲ್ಲಿ ಉಳುಮೆ ಮಾಡಿಕೊಂಡು ಬಂದಿದ್ದೆವು. ಇತ್ತೀಚೆಗೆ ಕಾಡಾನೆ ಹಾವಳಿಯಿಂದಾಗಿ ಕೃಷಿ ಚಟುವಟಿಕೆ ನಡೆಸಲು ಸಾಧ್ಯವಾಗಿಲ್ಲ. ಇದರ ಬೆನ್ನಲ್ಲೇ, ಅರಣ್ಯ ಇಲಾಖೆಯವರು ನಮಗೆ ಯಾವುದೇ ಮಾಹಿತಿ ನೀಡದೆ ಒಕ್ಕಲೆಬ್ಬಿಸಿದ್ದಾರೆ ಎಂದು ಅಳಲು ತೋಡಿಕೊಂಡರು.</p>.<p>ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ನಾಗೇಶ್, ‘ಅಧಿಕಾರಿಗಳು ಮಾಡಿದ ಯಡವಟ್ಟಿನಿಂದ ನೀವು ಭೂಮಿ ಕಳೆದುಕೊಳ್ಳಬೇಕಾಗಿದೆ. ಜಿಲ್ಲಾಡಳಿತ ಈ ತಪ್ಪನ್ನು ಸರಿಪಡಿಸಿಕೊಂಡು ನಿಮಗೆ ಭೂಮಿಯನ್ನು ಮರಳಿ ಕೊಡಬೇಕಿದೆ. ಅಥವಾ ಪರ್ಯಾಯ ವ್ಯವಸ್ಥೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತುಕತೆ ನಡೆಸಲಾಗುವುದು. ಕಾನೂನು ಹೋರಾಟದ ಜೊತೆಗೆ ನೀವು ಮಾಡುವ ಯಾವುದೇ ಹೋರಾಟಕ್ಕೆ ಬೆಂಬಲ ನೀಡುವೆ’ ಎಂದು ಧೈರ್ಯ ತುಂಬಿದರು.</p>.<p>ಗ್ರಾಮಸ್ಥರ ಜಮೀನು ಕಳೆದುಕೊಂಡಿರುವ ಕುರಿತು ‘ಪ್ರಜಾವಾಣಿ’ಯು ಜ. 22ರಂದು ‘ಪರಿಶಿಷ್ಟರ ಜಮೀನಿಗೆ ಕುತ್ತು’ ಎಂಬ ವಿಶೇಷ ವರದಿ ಪ್ರಕಟಿಸಿತ್ತು. </p>.<p>ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅನ್ನದಾನಪ್ಪ, ಜಿಲ್ಲಾ ಉಪಾಧ್ಯಕ್ಷ ಮಹದೇವ, ರಾಮನಗರ ಅಧ್ಯಕ್ಷ ಭೈರಾಜು, ಪ್ರಧಾನ ಕಾರ್ಯದರ್ಶಿ ಸ್ವಾಮಿ, ಮುಖಂಡರಾದ ತಮ್ಮಯ್ಯ, ಸುನೀಲ್, ಪ್ರದೀಪ್, ಶ್ರೀನಿವಾಸ್ ಹಾಗೂ ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾರೋಹಳ್ಳಿ</strong>: ತಾಲ್ಲೂಕಿನ ಮರಳವಾಡಿ ಹೋಬಳಿಯ ದೇವರಹಳ್ಳಿ ಗ್ರಾಮದಲ್ಲಿ ಸರ್ಕಾರ ಮಂಜೂರು ಮಾಡಿದ್ದ ಭೂಮಿ ಕಳೆದುಕೊಂಡಿರುವ ಗ್ರಾಮಸ್ಥರನ್ನು ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಎಂ. ನಾಗೇಶ್ ಅವರು ಮಂಗಳವಾರ ಭೇಟಿ ಮಾಡಿದರು.</p>.<p>ಭೂ ರಹಿತ ದಲಿತರಾದ ನಮಗೆ ಸರ್ಕಾರವೇ ನಾಲ್ಕು ದಶಕಗಳ ಹಿಂದೆ 92ಕ್ಕೂ ಹೆಚ್ಚು ಕುಟುಂಬಗಳಿಗೆ ಭೂಮಿ ಮಂಜೂರು ಮಾಡಿತ್ತು. ಅಂದಿನಿಂದ ಅದೇ ಭೂಮಿಯಲ್ಲಿ ಕೃಷಿ ಚಟುವಟಿಕೆ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದೇವೆ. ಇತ್ತೀಚೆಗೆ ಅರಣ್ಯ ಇಲಾಖೆಯವರು, ಈ ಜಾಗ ನಮಗೆ ಸೇರಿದ್ದು ಎಂದು ಹೇಳಿ ವಶಪಡಿಸಿಕೊಂಡಿದ್ದಾರೆ. ಇದರಿಂದಾಗಿ ನಾವು ಬೀದಿಗೆ ಬಂದಿದ್ದೇವೆ. ನಮಗೆ ನ್ಯಾಯ ಕೊಡಿಸಿ ಎಂದು ಮನವಿ ಮಾಡಿದರು.</p>.<p>ಗ್ರಾಮದ ಸರ್ವೇ ನಂಬರ್ 104ರಲ್ಲಿ ಜಮೀನು ಮಂಜೂರು ಮಾಡಿದ್ದ ಸರ್ಕಾರ ಫಲಾನುಭವಿಗಳಿಗೆ ಸಾಗುವಳಿ ಪತ್ರ ವಿತರಿಸಿತ್ತು. ಈಗಲೂ ನಮ್ಮೆಲ್ಲರ ಬಳಿ ಇದೆ. ಒ.ಎಂ ಕಾಪಿ, ನಕಾಶೆ ಪತ್ರ, ಪಹಣಿ, ಮ್ಯುಟೇಷನ್, ಇ.ಸಿ ಇತರ ಕಂದಾಯ ದಾಖಲೆಗಳನ್ನು ಸಹ ಪಡೆದು ಭೂಮಿಯಲ್ಲಿ ಉಳುಮೆ ಮಾಡಿಕೊಂಡು ಬಂದಿದ್ದೆವು. ಇತ್ತೀಚೆಗೆ ಕಾಡಾನೆ ಹಾವಳಿಯಿಂದಾಗಿ ಕೃಷಿ ಚಟುವಟಿಕೆ ನಡೆಸಲು ಸಾಧ್ಯವಾಗಿಲ್ಲ. ಇದರ ಬೆನ್ನಲ್ಲೇ, ಅರಣ್ಯ ಇಲಾಖೆಯವರು ನಮಗೆ ಯಾವುದೇ ಮಾಹಿತಿ ನೀಡದೆ ಒಕ್ಕಲೆಬ್ಬಿಸಿದ್ದಾರೆ ಎಂದು ಅಳಲು ತೋಡಿಕೊಂಡರು.</p>.<p>ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ನಾಗೇಶ್, ‘ಅಧಿಕಾರಿಗಳು ಮಾಡಿದ ಯಡವಟ್ಟಿನಿಂದ ನೀವು ಭೂಮಿ ಕಳೆದುಕೊಳ್ಳಬೇಕಾಗಿದೆ. ಜಿಲ್ಲಾಡಳಿತ ಈ ತಪ್ಪನ್ನು ಸರಿಪಡಿಸಿಕೊಂಡು ನಿಮಗೆ ಭೂಮಿಯನ್ನು ಮರಳಿ ಕೊಡಬೇಕಿದೆ. ಅಥವಾ ಪರ್ಯಾಯ ವ್ಯವಸ್ಥೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತುಕತೆ ನಡೆಸಲಾಗುವುದು. ಕಾನೂನು ಹೋರಾಟದ ಜೊತೆಗೆ ನೀವು ಮಾಡುವ ಯಾವುದೇ ಹೋರಾಟಕ್ಕೆ ಬೆಂಬಲ ನೀಡುವೆ’ ಎಂದು ಧೈರ್ಯ ತುಂಬಿದರು.</p>.<p>ಗ್ರಾಮಸ್ಥರ ಜಮೀನು ಕಳೆದುಕೊಂಡಿರುವ ಕುರಿತು ‘ಪ್ರಜಾವಾಣಿ’ಯು ಜ. 22ರಂದು ‘ಪರಿಶಿಷ್ಟರ ಜಮೀನಿಗೆ ಕುತ್ತು’ ಎಂಬ ವಿಶೇಷ ವರದಿ ಪ್ರಕಟಿಸಿತ್ತು. </p>.<p>ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅನ್ನದಾನಪ್ಪ, ಜಿಲ್ಲಾ ಉಪಾಧ್ಯಕ್ಷ ಮಹದೇವ, ರಾಮನಗರ ಅಧ್ಯಕ್ಷ ಭೈರಾಜು, ಪ್ರಧಾನ ಕಾರ್ಯದರ್ಶಿ ಸ್ವಾಮಿ, ಮುಖಂಡರಾದ ತಮ್ಮಯ್ಯ, ಸುನೀಲ್, ಪ್ರದೀಪ್, ಶ್ರೀನಿವಾಸ್ ಹಾಗೂ ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>