<p><strong>ಚನ್ನಪಟ್ಟಣ (ರಾಮನಗರ):</strong> ಉಪ ಚುನಾವಣೆಯ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜೆಡಿಎಸ್ನಿಂದ ನಿಖಿಲ್ ಕುಮಾರಸ್ವಾಮಿ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ನಡೆದ ರೋಡ್ ಷೋ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ, ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಚುನಾವಣಾ ಅಧಿಕಾರಿಗಳು ಆಯೋಜಕರಿಗೆ ನೋಟಿಸ್ ನೀಡಿದ್ದಾರೆ.</p><p>ರೋಡ್ ಷೋ ಕಾರ್ಯಕ್ರಮಕ್ಕೆ ವಿವಿಧ ಭಾಗಗಳಿಂದ ಸುಮಾರು ಖಾಸಗಿ 96 ಬಸ್ಗಳಲ್ಲಿ ಜನರನ್ನು ಕರೆತರಲಾಗಿತ್ತು. ಈ ಕುರಿತು ಪರಿಶೀಲನೆ ನಡೆಸಿದಾಗ ಬಸ್ಗಳಿಗೆ ಅನುಮತಿ ಪಡೆಯದಿರುವುದು ಕಂಡುಬಂತು. ಹಾಗಾಗಿ, ಆಯೋಜಕರು ಹಾಗೂ ಬಸ್ಗಳ ಮಾಲೀಕರಿಗೆ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p><p>ನೀತಿ ಸಂಹಿತೆ ಉಲ್ಲಂಘನೆ ಕುರಿತು ಚನ್ನಪಟ್ಟಣ ಪೂರ್ವ ಪೊಲೀಸ್ ಠಾಣೆಯಲ್ಲಿ ಎನ್ಸಿಆರ್ ಕೂಡ ಮಾಡಿಕೊಳ್ಳಲಾಗಿದೆ. ಇಂದು ನ್ಯಾಯಾಲಯದ ಅನುಮತಿ ಪಡೆದು, ಸಂಬಂಧಪಟ್ಟವರ ಮೇಲೆ ಪ್ರಕರಣ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ಚನ್ನಪಟ್ಟಣ ಉಪಚುಣಾವಣೆ | ಮೈತ್ರಿ ಶಕ್ತಿ ಪ್ರದರ್ಶನ; ‘ಕೈ’ ವಿರುದ್ಧ ವಾಗ್ಭಾಣ.ಚನ್ನಪಟ್ಟಣ ಉಪಚುನಾವಣೆ: ಕೊನೆಯ ದಿನ 28 ನಾಮಪತ್ರ ಸಲ್ಲಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ (ರಾಮನಗರ):</strong> ಉಪ ಚುನಾವಣೆಯ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜೆಡಿಎಸ್ನಿಂದ ನಿಖಿಲ್ ಕುಮಾರಸ್ವಾಮಿ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ನಡೆದ ರೋಡ್ ಷೋ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ, ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಚುನಾವಣಾ ಅಧಿಕಾರಿಗಳು ಆಯೋಜಕರಿಗೆ ನೋಟಿಸ್ ನೀಡಿದ್ದಾರೆ.</p><p>ರೋಡ್ ಷೋ ಕಾರ್ಯಕ್ರಮಕ್ಕೆ ವಿವಿಧ ಭಾಗಗಳಿಂದ ಸುಮಾರು ಖಾಸಗಿ 96 ಬಸ್ಗಳಲ್ಲಿ ಜನರನ್ನು ಕರೆತರಲಾಗಿತ್ತು. ಈ ಕುರಿತು ಪರಿಶೀಲನೆ ನಡೆಸಿದಾಗ ಬಸ್ಗಳಿಗೆ ಅನುಮತಿ ಪಡೆಯದಿರುವುದು ಕಂಡುಬಂತು. ಹಾಗಾಗಿ, ಆಯೋಜಕರು ಹಾಗೂ ಬಸ್ಗಳ ಮಾಲೀಕರಿಗೆ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p><p>ನೀತಿ ಸಂಹಿತೆ ಉಲ್ಲಂಘನೆ ಕುರಿತು ಚನ್ನಪಟ್ಟಣ ಪೂರ್ವ ಪೊಲೀಸ್ ಠಾಣೆಯಲ್ಲಿ ಎನ್ಸಿಆರ್ ಕೂಡ ಮಾಡಿಕೊಳ್ಳಲಾಗಿದೆ. ಇಂದು ನ್ಯಾಯಾಲಯದ ಅನುಮತಿ ಪಡೆದು, ಸಂಬಂಧಪಟ್ಟವರ ಮೇಲೆ ಪ್ರಕರಣ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ಚನ್ನಪಟ್ಟಣ ಉಪಚುಣಾವಣೆ | ಮೈತ್ರಿ ಶಕ್ತಿ ಪ್ರದರ್ಶನ; ‘ಕೈ’ ವಿರುದ್ಧ ವಾಗ್ಭಾಣ.ಚನ್ನಪಟ್ಟಣ ಉಪಚುನಾವಣೆ: ಕೊನೆಯ ದಿನ 28 ನಾಮಪತ್ರ ಸಲ್ಲಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>