<p><strong>ಚನ್ನಪಟ್ಟಣ:</strong> ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಅಂತಿಮಗೊಳಿಸಲು ಮೈತ್ರಿ ಪಕ್ಷದ ನಾಯಕರಲ್ಲಿ ಹಗ್ಗ ಜಗ್ಗಾಟ ನಡೆಯುತ್ತಿರುವಂತೆಯೇ ಜೆಡಿಎಸ್ ಮುಖಂಡರು ಸಭೆ ಸೇರಿ ಯಾವುದೇ ಕಾರಣಕ್ಕೂ ಜೆಡಿಎಸ್ ಚಿಹ್ನೆ ಬಿಡಬಾರದು. ಪಕ್ಷದ ಚಿಹ್ನೆಯಡಿಯೇ ಚುನಾವಣೆ ನಡೆಯಬೇಕು ಎಂದು ನಿರ್ಧರಿಸಿದರು.</p>.<p>ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಎಚ್.ಸಿ.ಜಯಮುತ್ತು ನೇತೃತ್ವದಲ್ಲಿ ಭಾನುವಾರ ಸಭೆ ನಡೆಸಿದ ಪಕ್ಷದ ಪ್ರಮುಖ ಮುಖಂಡರು ಈ ನಿರ್ಧಾರ ಕೈಗೊಂಡರು. ಪಕ್ಷದ ವರಿಷ್ಠರಿಗೆ ಮನವರಿಕೆ ಮಾಡಲು ತೀರ್ಮಾನಿಸಲಾಯಿತು.</p>.<p>ಜೆಡಿಎಸ್ ಚಿಹ್ನೆಗೆ ಟಿಕೆಟ್ ಉಳಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಚಿಹ್ನೆ ಬಿಡಬಾರದು. ಯಾರೇ ಅಭ್ಯರ್ಥಿ ಆಗಲಿ ಪಕ್ಷದ ಚಿಹ್ನೆಯಿಂದ ಸ್ಪರ್ಧಿಸಲಿ. ಪಕ್ಷದ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ಕೊಟ್ಟರೂ ಸರಿಯೇ. ಚುನಾವಣೆ ಜೆಡಿಎಸ್ ಚಿಹ್ನೆಯಡಿ ನಡೆಯಬೇಕು. ಈ ವಿಚಾರ ಪಕ್ಷದ ವರಿಷ್ಠರಿಗೆ ಮನವರಿಕೆ ಮಾಡಿಕೊಡುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಕಳೆದ ಲೋಕಸಭೆ ಚುನಾವಣೆಯಲ್ಲಿ ಸಂಸದ ಡಾ.ಮಂಜುನಾಥ್, ಬಿಜೆಪಿ ಚಿಹ್ನೆಯಿಂದ ಸ್ಪರ್ಧೆ ಮಾಡಿದ್ದರು. ಆಗ ಜೆಡಿಎಸ್ ಪಕ್ಷದವರು ಬೆಂಬಲ ನೀಡಿದ್ದೇವೆ. 2018 ಹಾಗೂ 2023ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಜಯಗಳಿಸಿದೆ. ಹಾಗಾಗಿ ಈ ಉಪ ಚುನಾವಣೆಯಲ್ಲಿಯೂ ಪಕ್ಷಕ್ಕೆ ಟಿಕೆಟ್ ಕೊಡಬೇಕು. ಬಿಜೆಪಿಯವರು ಜೆಡಿಎಸ್ ಚಿಹ್ನೆಯಡಿ ಸ್ಪರ್ಧಿಸುವ ಅಭ್ಯರ್ಥಿಗೆ ಬೆಂಬಲ ಕೊಡಬೇಕು ಎಂದು ಸಭೆಯಲ್ಲಿದ್ದ ಮುಖಂಡರು ಒತ್ತಾಯಿಸಿದರು.</p>.<p>ಪಕ್ಷದ ಮುಖಂಡರಾದ ಗೋವಿಂದಹಳ್ಳಿ ನಾಗರಾಜ್, ಪಂಚಮಿ ಪ್ರಸನ್ನ, ಹಾಪ್ ಕಾಮ್ಸ್ ದೇವರಾಜು, ಕುಕ್ಕೂರುದೊಡ್ಡಿ ಜಯರಾಮ್, ಪೀಹಳ್ಳಿದೊಡ್ಡಿ ಭಾನುಪ್ರಸಾದ್, ನಾಗವಾರ ರಂಗಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ:</strong> ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಅಂತಿಮಗೊಳಿಸಲು ಮೈತ್ರಿ ಪಕ್ಷದ ನಾಯಕರಲ್ಲಿ ಹಗ್ಗ ಜಗ್ಗಾಟ ನಡೆಯುತ್ತಿರುವಂತೆಯೇ ಜೆಡಿಎಸ್ ಮುಖಂಡರು ಸಭೆ ಸೇರಿ ಯಾವುದೇ ಕಾರಣಕ್ಕೂ ಜೆಡಿಎಸ್ ಚಿಹ್ನೆ ಬಿಡಬಾರದು. ಪಕ್ಷದ ಚಿಹ್ನೆಯಡಿಯೇ ಚುನಾವಣೆ ನಡೆಯಬೇಕು ಎಂದು ನಿರ್ಧರಿಸಿದರು.</p>.<p>ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಎಚ್.ಸಿ.ಜಯಮುತ್ತು ನೇತೃತ್ವದಲ್ಲಿ ಭಾನುವಾರ ಸಭೆ ನಡೆಸಿದ ಪಕ್ಷದ ಪ್ರಮುಖ ಮುಖಂಡರು ಈ ನಿರ್ಧಾರ ಕೈಗೊಂಡರು. ಪಕ್ಷದ ವರಿಷ್ಠರಿಗೆ ಮನವರಿಕೆ ಮಾಡಲು ತೀರ್ಮಾನಿಸಲಾಯಿತು.</p>.<p>ಜೆಡಿಎಸ್ ಚಿಹ್ನೆಗೆ ಟಿಕೆಟ್ ಉಳಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಚಿಹ್ನೆ ಬಿಡಬಾರದು. ಯಾರೇ ಅಭ್ಯರ್ಥಿ ಆಗಲಿ ಪಕ್ಷದ ಚಿಹ್ನೆಯಿಂದ ಸ್ಪರ್ಧಿಸಲಿ. ಪಕ್ಷದ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ಕೊಟ್ಟರೂ ಸರಿಯೇ. ಚುನಾವಣೆ ಜೆಡಿಎಸ್ ಚಿಹ್ನೆಯಡಿ ನಡೆಯಬೇಕು. ಈ ವಿಚಾರ ಪಕ್ಷದ ವರಿಷ್ಠರಿಗೆ ಮನವರಿಕೆ ಮಾಡಿಕೊಡುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಕಳೆದ ಲೋಕಸಭೆ ಚುನಾವಣೆಯಲ್ಲಿ ಸಂಸದ ಡಾ.ಮಂಜುನಾಥ್, ಬಿಜೆಪಿ ಚಿಹ್ನೆಯಿಂದ ಸ್ಪರ್ಧೆ ಮಾಡಿದ್ದರು. ಆಗ ಜೆಡಿಎಸ್ ಪಕ್ಷದವರು ಬೆಂಬಲ ನೀಡಿದ್ದೇವೆ. 2018 ಹಾಗೂ 2023ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಜಯಗಳಿಸಿದೆ. ಹಾಗಾಗಿ ಈ ಉಪ ಚುನಾವಣೆಯಲ್ಲಿಯೂ ಪಕ್ಷಕ್ಕೆ ಟಿಕೆಟ್ ಕೊಡಬೇಕು. ಬಿಜೆಪಿಯವರು ಜೆಡಿಎಸ್ ಚಿಹ್ನೆಯಡಿ ಸ್ಪರ್ಧಿಸುವ ಅಭ್ಯರ್ಥಿಗೆ ಬೆಂಬಲ ಕೊಡಬೇಕು ಎಂದು ಸಭೆಯಲ್ಲಿದ್ದ ಮುಖಂಡರು ಒತ್ತಾಯಿಸಿದರು.</p>.<p>ಪಕ್ಷದ ಮುಖಂಡರಾದ ಗೋವಿಂದಹಳ್ಳಿ ನಾಗರಾಜ್, ಪಂಚಮಿ ಪ್ರಸನ್ನ, ಹಾಪ್ ಕಾಮ್ಸ್ ದೇವರಾಜು, ಕುಕ್ಕೂರುದೊಡ್ಡಿ ಜಯರಾಮ್, ಪೀಹಳ್ಳಿದೊಡ್ಡಿ ಭಾನುಪ್ರಸಾದ್, ನಾಗವಾರ ರಂಗಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>