<p><strong>ಕುದೂರು</strong>: ಪಟ್ಟಣದ ತುಮಕೂರು ರಸ್ತೆಯ ರಾಮಲಿಂಗ ಚೌಡೇಶ್ವರಿ 18ನೇ ವಾರ್ಷಿಕೋತ್ಸವ ಮತ್ತು ಮಹಾ ರಥೋತ್ಸವದ ಪೂಜಾ <del>ಕಾರ್ಯಕ್ರಮ</del> ಶನಿವಾರ ವಿಜೃಂಭಣೆಯಿಂದ ನಡೆಯಿತು.</p>.<p>ರಥೋತ್ಸವದ ಅಂಗವಾಗಿ ದೇವಾಲಯದಲ್ಲಿ ಫೆ. 23 ಮತ್ತು 24ರಂದು ಗಂಗೆ ಪೂಜೆ, ಅಲಗು ಸೇವೆ, ಪಂಚಾಮೃತ ಅಭಿಷೇಕ, ನವಗ್ರಹ ಹೋಮ ಗಣ ಹೋಮ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಲಲಿತಾಂಬಿಕಾ ಭಕ್ತ ವೃಂದವರಿಂದ ಸಾಮೂಹಿಕ ಭಜನಾ ಕಾರ್ಯಕ್ರಮ ನಡೆದವು.</p>.<p>ಶನಿವಾರ ಸಂಜೆ ಮಂಗಳ ವಾದ್ಯಗಳೊಂದಿಗೆ ರಥವನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ನಂತರ ಸಂಜೆ ದೇವಸ್ಥಾನದಲ್ಲಿ ಉಯ್ಯಾಲೆ ಸೇವೆ ನಡೆಯಿತು.</p>.<p>ದೇವಾಂಗ ಸಂಘದಿಂದ ಭಕ್ತರಿಗೆ ಮಜ್ಜಿಗೆ, ಕೋಸಂಬರಿ, ಪಾನಕ ವಿತರಿಸಲಾಯಿತು. ಅನ್ನಸಂತರ್ಪಣೆ ನಡೆಯಿತು. ಕುದೂರು, ಮಾಗಡಿ, ಕುಣಿಗಲ್, ತುಮಕೂರು, ನೆಲಮಂಗಲ, ಬೆಂಗಳೂರು ಕಡೆಗಳಿಂದ ನೂರಾರು ಭಕ್ತರು ದೇವರ ದರ್ಶನ ಪಡೆದರು.</p>.<p>ಅರ್ಚಕ ಶಿವರಾಮ್, ದೇವಾಲಯ ಸಮಿತಿ ಅಧ್ಯಕ್ಷ ಕೆ.ಬಿ. ಬಾಲರಾಜು, ಉಪಾಧ್ಯಕ್ಷ ಕೃಷ್ಣಪ್ಪ, ಜಯಚಂದ್ರ ಬಾಬು, ಪುಟ್ಟರಂಗಪ್ಪ, ಲಕ್ಷ್ಮೀನಾರಾಯಣ, ಮುನಿರಂಗಪ್ಪ, ಗೋವಿಂದರಾಜು, ಶೇಖರ್, ವಿನಯ್, ನಾಗೇಶ್, ಮುರುಳೀಧರ್, ಮಂಜುನಾಥ್, ಕೃಷ್ಣಮೂರ್ತಿ, ರಂಗನಾಥ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುದೂರು</strong>: ಪಟ್ಟಣದ ತುಮಕೂರು ರಸ್ತೆಯ ರಾಮಲಿಂಗ ಚೌಡೇಶ್ವರಿ 18ನೇ ವಾರ್ಷಿಕೋತ್ಸವ ಮತ್ತು ಮಹಾ ರಥೋತ್ಸವದ ಪೂಜಾ <del>ಕಾರ್ಯಕ್ರಮ</del> ಶನಿವಾರ ವಿಜೃಂಭಣೆಯಿಂದ ನಡೆಯಿತು.</p>.<p>ರಥೋತ್ಸವದ ಅಂಗವಾಗಿ ದೇವಾಲಯದಲ್ಲಿ ಫೆ. 23 ಮತ್ತು 24ರಂದು ಗಂಗೆ ಪೂಜೆ, ಅಲಗು ಸೇವೆ, ಪಂಚಾಮೃತ ಅಭಿಷೇಕ, ನವಗ್ರಹ ಹೋಮ ಗಣ ಹೋಮ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಲಲಿತಾಂಬಿಕಾ ಭಕ್ತ ವೃಂದವರಿಂದ ಸಾಮೂಹಿಕ ಭಜನಾ ಕಾರ್ಯಕ್ರಮ ನಡೆದವು.</p>.<p>ಶನಿವಾರ ಸಂಜೆ ಮಂಗಳ ವಾದ್ಯಗಳೊಂದಿಗೆ ರಥವನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ನಂತರ ಸಂಜೆ ದೇವಸ್ಥಾನದಲ್ಲಿ ಉಯ್ಯಾಲೆ ಸೇವೆ ನಡೆಯಿತು.</p>.<p>ದೇವಾಂಗ ಸಂಘದಿಂದ ಭಕ್ತರಿಗೆ ಮಜ್ಜಿಗೆ, ಕೋಸಂಬರಿ, ಪಾನಕ ವಿತರಿಸಲಾಯಿತು. ಅನ್ನಸಂತರ್ಪಣೆ ನಡೆಯಿತು. ಕುದೂರು, ಮಾಗಡಿ, ಕುಣಿಗಲ್, ತುಮಕೂರು, ನೆಲಮಂಗಲ, ಬೆಂಗಳೂರು ಕಡೆಗಳಿಂದ ನೂರಾರು ಭಕ್ತರು ದೇವರ ದರ್ಶನ ಪಡೆದರು.</p>.<p>ಅರ್ಚಕ ಶಿವರಾಮ್, ದೇವಾಲಯ ಸಮಿತಿ ಅಧ್ಯಕ್ಷ ಕೆ.ಬಿ. ಬಾಲರಾಜು, ಉಪಾಧ್ಯಕ್ಷ ಕೃಷ್ಣಪ್ಪ, ಜಯಚಂದ್ರ ಬಾಬು, ಪುಟ್ಟರಂಗಪ್ಪ, ಲಕ್ಷ್ಮೀನಾರಾಯಣ, ಮುನಿರಂಗಪ್ಪ, ಗೋವಿಂದರಾಜು, ಶೇಖರ್, ವಿನಯ್, ನಾಗೇಶ್, ಮುರುಳೀಧರ್, ಮಂಜುನಾಥ್, ಕೃಷ್ಣಮೂರ್ತಿ, ರಂಗನಾಥ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>