<p><strong>ಕನಕಪುರ</strong>: ಮಳಗಾಳು ಗ್ರಾಮದಲ್ಲಿ ದಲಿತರ ಮೇಲೆ ನಡೆದಿರುವ ಘಟನೆಯು ಅಮಾನೀಯ ಮತ್ತು ಹೇಯ ಕೃತ್ಯವಾಗಿದೆ, ಇಂತಹ ಘಟನೆ ನಡೆಯಬಾರದಿತ್ತು ಎಂದು ಚಿತ್ರದುರ್ಗದ ಛಲವಾದಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಬಸವ ನಾಗಿದೇವ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದರು.</p>.<p>ಮಳಗಾಳು ಗ್ರಾಮದ ಎಕೆ ಕಾಲೋನಿಯಲ್ಲಿ ರೌಡಿಗಳ ದಾಳಿಯಲ್ಲಿ ಕೈ ಕಳೆದುಕೊಂಡಿದ್ದ ಅನೀಶ್ ಅವರ ಮನೆಗೆ ಬುಧವಾರ ಭೇಟಿ ನೀಡಿ ಸಂತ್ರಸ್ತರಿಗೆ ಆತ್ಮಸ್ಥೈರ್ಯ ತುಂಬಿ ಮಾತನಾಡಿದರು.</p>.<p>ದಲಿತ ಕುಟುಂಬಗಳ ಮೇಲೆ ನಡೆದಿರುವ ಅಮಾನವೀಯ ಕೃತ್ಯವನ್ನು ನೋಡಿದರೆ, ಇಲ್ಲಿನ ಕಾನೂನು ಸುವ್ಯವಸ್ಥೆ ಎಷ್ಟರಮಟ್ಟಿಗೆ ಇದೆ ಎಂಬುದು ಅರ್ಥವಾಗುತ್ತದೆ. ತಾಲ್ಲೂಕು ಆಡಳಿತವು ಮತ್ತು ಪೊಲೀಸ್ ಇಲಾಖೆಯು ದಲಿತರ ಮೇಲಿನ ದೌರ್ಜನ್ಯ ತಡೆಯುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.</p>.<p>20 ವರ್ಷಗಳಿಂದ ಇಲ್ಲಿ ದಲಿತರ ಮೇಲೆ ನಿರಂತರ ದೌರ್ಜನ್ಯ ದಬ್ಬಾಳಿಕೆ ನಡೆಯುತ್ತಿದೆ, ಇದು ಕೊನೆಯಾಗಬೇಕೆಂದು. ಅಪರಾಧ ಪ್ರಕರಣದಲ್ಲಿ ದೂರುದಾರರ ಮೇಲೆ ಸಂತ್ರಸ್ತರ ಮೇಲೆ ಒತ್ತಡ ತಂದು ಬೆದರಿಸುವ ಕೆಲಸ ಮಾಡಿ ಪ್ರಕರಣ ಹಿಂಪಡೆಯುವಂತೆ ಮಾಡಿದರೆ ಗುರುಪೀಠವು ಮಧ್ಯಪ್ರವೇಶಿಸಲಿದೆ ಎಂದು ಎಚ್ಚರಿಸಿದರು.</p>.<p>ಗುರು ಪೀಠವು ಸಂವಿಧಾನ ಪಾಠವನ್ನು ಸಮುದಾಯಗಳಿಗೆ ತಿಳಿಸಿಕೊಡುತ್ತದೆ. ಸಮುದಾಯವನ್ನು ಕೆಣಕಿದರೆ ಬಿಡುವ ಮಾತೇ ಇಲ್ಲ, ಎಂತಹ ಹೋರಾಟಕ್ಕಾದರೂ ಸಿದ್ಧ. ಕಾನೂನು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಮುದಾಯದ ಹಿತ ಕಾಯುವ ಕೆಲಸವನ್ನು ಮಾಡುತ್ತದೆ ಎಂದು ತಿಳಿಸಿದರು.</p>.<p>ಛಲವಾದಿ ಸಂಘಟನೆಯ ರಾಜ್ಯಾಧ್ಯಕ್ಷ ವಾಣಿ ಶಿವರಾಮ, ಉಪಾಧ್ಯಕ್ಷ ಬಸವರಾಜು ಹಾಗೂ ಜಿಲ್ಲಾಧ್ಯಕ್ಷ, ತಾಲ್ಲೂಕು ಅಧ್ಯಕ್ಷ, ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ಮಳಗಾಳು ಗ್ರಾಮದಲ್ಲಿ ದಲಿತರ ಮೇಲೆ ನಡೆದಿರುವ ಘಟನೆಯು ಅಮಾನೀಯ ಮತ್ತು ಹೇಯ ಕೃತ್ಯವಾಗಿದೆ, ಇಂತಹ ಘಟನೆ ನಡೆಯಬಾರದಿತ್ತು ಎಂದು ಚಿತ್ರದುರ್ಗದ ಛಲವಾದಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಬಸವ ನಾಗಿದೇವ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದರು.</p>.<p>ಮಳಗಾಳು ಗ್ರಾಮದ ಎಕೆ ಕಾಲೋನಿಯಲ್ಲಿ ರೌಡಿಗಳ ದಾಳಿಯಲ್ಲಿ ಕೈ ಕಳೆದುಕೊಂಡಿದ್ದ ಅನೀಶ್ ಅವರ ಮನೆಗೆ ಬುಧವಾರ ಭೇಟಿ ನೀಡಿ ಸಂತ್ರಸ್ತರಿಗೆ ಆತ್ಮಸ್ಥೈರ್ಯ ತುಂಬಿ ಮಾತನಾಡಿದರು.</p>.<p>ದಲಿತ ಕುಟುಂಬಗಳ ಮೇಲೆ ನಡೆದಿರುವ ಅಮಾನವೀಯ ಕೃತ್ಯವನ್ನು ನೋಡಿದರೆ, ಇಲ್ಲಿನ ಕಾನೂನು ಸುವ್ಯವಸ್ಥೆ ಎಷ್ಟರಮಟ್ಟಿಗೆ ಇದೆ ಎಂಬುದು ಅರ್ಥವಾಗುತ್ತದೆ. ತಾಲ್ಲೂಕು ಆಡಳಿತವು ಮತ್ತು ಪೊಲೀಸ್ ಇಲಾಖೆಯು ದಲಿತರ ಮೇಲಿನ ದೌರ್ಜನ್ಯ ತಡೆಯುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.</p>.<p>20 ವರ್ಷಗಳಿಂದ ಇಲ್ಲಿ ದಲಿತರ ಮೇಲೆ ನಿರಂತರ ದೌರ್ಜನ್ಯ ದಬ್ಬಾಳಿಕೆ ನಡೆಯುತ್ತಿದೆ, ಇದು ಕೊನೆಯಾಗಬೇಕೆಂದು. ಅಪರಾಧ ಪ್ರಕರಣದಲ್ಲಿ ದೂರುದಾರರ ಮೇಲೆ ಸಂತ್ರಸ್ತರ ಮೇಲೆ ಒತ್ತಡ ತಂದು ಬೆದರಿಸುವ ಕೆಲಸ ಮಾಡಿ ಪ್ರಕರಣ ಹಿಂಪಡೆಯುವಂತೆ ಮಾಡಿದರೆ ಗುರುಪೀಠವು ಮಧ್ಯಪ್ರವೇಶಿಸಲಿದೆ ಎಂದು ಎಚ್ಚರಿಸಿದರು.</p>.<p>ಗುರು ಪೀಠವು ಸಂವಿಧಾನ ಪಾಠವನ್ನು ಸಮುದಾಯಗಳಿಗೆ ತಿಳಿಸಿಕೊಡುತ್ತದೆ. ಸಮುದಾಯವನ್ನು ಕೆಣಕಿದರೆ ಬಿಡುವ ಮಾತೇ ಇಲ್ಲ, ಎಂತಹ ಹೋರಾಟಕ್ಕಾದರೂ ಸಿದ್ಧ. ಕಾನೂನು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಮುದಾಯದ ಹಿತ ಕಾಯುವ ಕೆಲಸವನ್ನು ಮಾಡುತ್ತದೆ ಎಂದು ತಿಳಿಸಿದರು.</p>.<p>ಛಲವಾದಿ ಸಂಘಟನೆಯ ರಾಜ್ಯಾಧ್ಯಕ್ಷ ವಾಣಿ ಶಿವರಾಮ, ಉಪಾಧ್ಯಕ್ಷ ಬಸವರಾಜು ಹಾಗೂ ಜಿಲ್ಲಾಧ್ಯಕ್ಷ, ತಾಲ್ಲೂಕು ಅಧ್ಯಕ್ಷ, ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>