<p><strong>ಬಿಡದಿ/ರಾಮನಗರ:</strong> ಬಿಜೆಪಿ, ಜೆಡಿಎಸ್ ಪಾದಯಾತ್ರೆ ಕುರಿತು ಎದಿದ್ದ ಅಪಸ್ವರ ಶಮನವಾಗಿ ನಿಗದಿಯಂತೆ ಪಾದಯಾತ್ರೆಗೆ ಮೈತ್ರಿ ನಾಯಕರ ನಡುವೆ ಒಮ್ಮತ ವ್ಯಕ್ತವಾದ ಬೆನ್ನಲ್ಲೇ ಕಾಂಗ್ರೆಸ್ ದಿಢೀರ್ ಆಗಿ ಜನಾಂದೋಲನ ಕಾರ್ಯಕ್ರಮ ರೂಪಿಸಿದೆ. </p>.<p>ಬಿಜೆಪಿ ವಿರುದ್ಧ ಬಜೆಟ್ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯ ಹಾಗೂ ಹಿಂದಿನ ಬಿಜೆಪಿ ಸರ್ಕಾರದ 21 ಹಗರಣಳನ್ನು ಮುಂದಿಟ್ಟುಕೊಂಡು ಜನಾಂದೋಲನ ನಡೆಸುತ್ತಿರುವುದಾಗಿ ಕಾಂಗ್ರೆಸ್ ಹೇಳಿಕೊಂಡಿದೆ.</p>.<p>ಬೆಂಗಳೂರು–ಮೈಸೂರು ಮಾರ್ಗದಲ್ಲಿ 7 ದಿನ ಒಂದೊಂದು ಕಡೆ ನಡೆಯಲಿರುವ ಕಾರ್ಯಕ್ರಮದಲ್ಲಿ ಸರ್ಕಾರದ ಸಚಿವರು ಭಾಗಿಯಾಗಲಿದ್ದಾರೆ. 8ರಂದು ಮೈಸೂರಿನಲ್ಲಿ ನಡೆಯಲಿರುವ ಸಮಾರೋಪ ಸಮಾರಂಭ ನಡೆಯಲಿದೆ. </p>.<p>ಸಮಾರೋಪ ಕಾರ್ಯಕ್ರಮದಲ್ಲಿ ಪಕ್ಷದ ಹೆಚ್ಚಿನ ಕಾರ್ಯಕರ್ತರು ಸೇರಲಿದ್ದಾರೆ. ಅಂದು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಸಹ ಪಾಲ್ಗೊಂಡು ಸರ್ಕಾರ ಅಸ್ಥಿರಗೊಳಿಸಲು ಯತ್ನಿಸುತ್ತಿರುವ ಬಿಜೆಪಿ–ಜೆಡಿಎಸ್ ವಿರುದ್ಧ ಗುಡುಗಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.</p>.<p><strong>ಮುಖಂಡರೊಂದಿಗೆ ಸಭೆ:</strong> </p><p>ಜನಾಂದೋಲನ ಕಾರ್ಯಕ್ರಮ ದಿಢೀರ್ ಆಗಿ ನಿಗದಿಯಾಗುತ್ತಿದ್ದಂತೆ, ಶಾಸಕ ಬಾಲಕೃಷ್ಣ ಅವರು ಬಿಡದಿಯಲ್ಲಿ ಗುರುವಾರ ಮಧ್ಯಾಹ್ನ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಭೆ ನಡೆಸಿದರು. ಕಾರ್ಯಕ್ರಮಕ್ಕೆ ಕಾರ್ಯಕರ್ತರನ್ನು ಸೇರಿಸುವುದು, ವೇದಿಕೆ ನಿರ್ಮಾಣ ಸೇರಿದಂತೆ ಚಾಲನೆ ಕಾರ್ಯಕ್ರಮವು ಯಶಸ್ವಿಗೊಳಿಸುವ ಸಲುವಾಗಿ ಮುಖಂಡರಿಗೆ ಜವಾಬ್ದಾರಿ ವಹಿಸಿದರು.</p>.<p>‘ಜನಾಂದೋಲನ ಕಾರ್ಯಕ್ರಮಕ್ಕಾಗಿ ಪಟ್ಟಣದ ಬಿಜಿಎಸ್ ವೃತ್ತದಲ್ಲಿರುವ ಪೊಲೀಸ್ ಠಾಣೆ ಎದುರಿನ ಸರ್ವೀಸ್ ರಸ್ತೆಯಲ್ಲಿ ವೇದಿಕೆ ನಿರ್ಮಾಣ ಮಾಡಲಾಗಿದೆ. ಮಾಗಡಿ ವಿಧಾನಸಭಾ ಕ್ಷೇತ್ರದ ಸುಮಾರು ಐದು ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರಿಗೆ ಮಧ್ಯಾಹ್ನ ಉಪಾಹಾರದ ವ್ಯವಸ್ಥೆ ಕೂಡ ಮಾಡಲಾಗಿದೆ’ ಎಂದು ಬಿಡದಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ದಿ ಗ್ರೇಟ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಾಣಕಲ್ ನಟರಾಜ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p><strong>‘ನಿತ್ಯ ಒಂದೊಂದು ತಾಲ್ಲೂಕಿನಲ್ಲಿ ಕಾರ್ಯಕ್ರಮ’ </strong></p><p>‘ಆ. 2ರಂದು ಶುಕ್ರವಾರ ಬಿಡದಿಯಲ್ಲಿ ಜನಾಂದೋಲನಕ್ಕೆ ಚಾಲನೆ ಸಿಗಲಿದೆ. ನಂತರ ಬೆಂಗಳೂರು–ಮೈಸೂರು ಮಾರ್ಗದಲ್ಲಿರುವ ತಾಲ್ಲೂಕು ಕೇಂದ್ರದಲ್ಲಿ ನಿತ್ಯ ಒಂದೊಂದು ದಿನ ಕಾರ್ಯಕ್ರಮ ಆಯೋಜಿಸಲಾಗುವುದು. 3ರಂದು ರಾಮನಗರದಲ್ಲಿ 4ಕ್ಕೆ ಚನ್ನಪಟ್ಟಣ 5ರಂದು ಮದ್ದೂರು 6ಕ್ಕೆ ಮಂಡ್ಯ 7ರಂದು ಶ್ರೀರಂಗಪಟ್ಟಣ ಹಾಗೂ 8ರಂದು ಮೈಸೂರಿನಲ್ಲಿ ಸಮಾರೋಪ ಕಾರ್ಯಕ್ರಮ ನಡೆಯಲಿದೆ’ ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ‘ಪ್ರಜಾವಾಣಿ’ಗೆ ತಿಳಿಸಿದರು. ‘ಅನ್ಯಾಯದ ವಿರುದ್ಧ ಜನಾಂದೋಲನ’ ‘ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಹಿಂದಿನಿಂದಲೂ ಅನ್ಯಾಯ ಮಾಡುತ್ತಲೇ ಬಂದಿದೆ. ಈ ಸಲದ ಬಜೆಟ್ನಲ್ಲೂ ಅದು ಮುಂದುವರಿದಿದೆ. ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದರು ಕೇಂದ್ರದಿಂದ ಅನುದಾನ ತರುವ ಬದಲು ರಾಜ್ಯ ಸರ್ಕಾರದ ವಿರುದ್ಧ ಬೂಟಾಟಿಕೆಯ ಪಾದಯಾತ್ರೆ ಮಾಡಲು ಮುಂದಾಗಿದ್ದಾರೆ. ನಮ್ಮ ಜನಾಂದೋಲನದಲ್ಲಿ ಕೇಂದ್ರದ ಅನ್ಯಾಯ ಹಾಗೂ ಮಲತಾಯಿ ಧೋರಣೆ ಬಗ್ಗೆ ಜನರಿಗೆ ತಿಳಿಸಿ ಛೀಮಾರಿ ಹಾಕಿಸುವ ಕೆಲಸ ಮಾಡುತ್ತೇವೆ’ ಎಂದು ಬಾಲಕೃಷ್ಣ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಿಡದಿ/ರಾಮನಗರ:</strong> ಬಿಜೆಪಿ, ಜೆಡಿಎಸ್ ಪಾದಯಾತ್ರೆ ಕುರಿತು ಎದಿದ್ದ ಅಪಸ್ವರ ಶಮನವಾಗಿ ನಿಗದಿಯಂತೆ ಪಾದಯಾತ್ರೆಗೆ ಮೈತ್ರಿ ನಾಯಕರ ನಡುವೆ ಒಮ್ಮತ ವ್ಯಕ್ತವಾದ ಬೆನ್ನಲ್ಲೇ ಕಾಂಗ್ರೆಸ್ ದಿಢೀರ್ ಆಗಿ ಜನಾಂದೋಲನ ಕಾರ್ಯಕ್ರಮ ರೂಪಿಸಿದೆ. </p>.<p>ಬಿಜೆಪಿ ವಿರುದ್ಧ ಬಜೆಟ್ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯ ಹಾಗೂ ಹಿಂದಿನ ಬಿಜೆಪಿ ಸರ್ಕಾರದ 21 ಹಗರಣಳನ್ನು ಮುಂದಿಟ್ಟುಕೊಂಡು ಜನಾಂದೋಲನ ನಡೆಸುತ್ತಿರುವುದಾಗಿ ಕಾಂಗ್ರೆಸ್ ಹೇಳಿಕೊಂಡಿದೆ.</p>.<p>ಬೆಂಗಳೂರು–ಮೈಸೂರು ಮಾರ್ಗದಲ್ಲಿ 7 ದಿನ ಒಂದೊಂದು ಕಡೆ ನಡೆಯಲಿರುವ ಕಾರ್ಯಕ್ರಮದಲ್ಲಿ ಸರ್ಕಾರದ ಸಚಿವರು ಭಾಗಿಯಾಗಲಿದ್ದಾರೆ. 8ರಂದು ಮೈಸೂರಿನಲ್ಲಿ ನಡೆಯಲಿರುವ ಸಮಾರೋಪ ಸಮಾರಂಭ ನಡೆಯಲಿದೆ. </p>.<p>ಸಮಾರೋಪ ಕಾರ್ಯಕ್ರಮದಲ್ಲಿ ಪಕ್ಷದ ಹೆಚ್ಚಿನ ಕಾರ್ಯಕರ್ತರು ಸೇರಲಿದ್ದಾರೆ. ಅಂದು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಸಹ ಪಾಲ್ಗೊಂಡು ಸರ್ಕಾರ ಅಸ್ಥಿರಗೊಳಿಸಲು ಯತ್ನಿಸುತ್ತಿರುವ ಬಿಜೆಪಿ–ಜೆಡಿಎಸ್ ವಿರುದ್ಧ ಗುಡುಗಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.</p>.<p><strong>ಮುಖಂಡರೊಂದಿಗೆ ಸಭೆ:</strong> </p><p>ಜನಾಂದೋಲನ ಕಾರ್ಯಕ್ರಮ ದಿಢೀರ್ ಆಗಿ ನಿಗದಿಯಾಗುತ್ತಿದ್ದಂತೆ, ಶಾಸಕ ಬಾಲಕೃಷ್ಣ ಅವರು ಬಿಡದಿಯಲ್ಲಿ ಗುರುವಾರ ಮಧ್ಯಾಹ್ನ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಭೆ ನಡೆಸಿದರು. ಕಾರ್ಯಕ್ರಮಕ್ಕೆ ಕಾರ್ಯಕರ್ತರನ್ನು ಸೇರಿಸುವುದು, ವೇದಿಕೆ ನಿರ್ಮಾಣ ಸೇರಿದಂತೆ ಚಾಲನೆ ಕಾರ್ಯಕ್ರಮವು ಯಶಸ್ವಿಗೊಳಿಸುವ ಸಲುವಾಗಿ ಮುಖಂಡರಿಗೆ ಜವಾಬ್ದಾರಿ ವಹಿಸಿದರು.</p>.<p>‘ಜನಾಂದೋಲನ ಕಾರ್ಯಕ್ರಮಕ್ಕಾಗಿ ಪಟ್ಟಣದ ಬಿಜಿಎಸ್ ವೃತ್ತದಲ್ಲಿರುವ ಪೊಲೀಸ್ ಠಾಣೆ ಎದುರಿನ ಸರ್ವೀಸ್ ರಸ್ತೆಯಲ್ಲಿ ವೇದಿಕೆ ನಿರ್ಮಾಣ ಮಾಡಲಾಗಿದೆ. ಮಾಗಡಿ ವಿಧಾನಸಭಾ ಕ್ಷೇತ್ರದ ಸುಮಾರು ಐದು ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರಿಗೆ ಮಧ್ಯಾಹ್ನ ಉಪಾಹಾರದ ವ್ಯವಸ್ಥೆ ಕೂಡ ಮಾಡಲಾಗಿದೆ’ ಎಂದು ಬಿಡದಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ದಿ ಗ್ರೇಟ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಾಣಕಲ್ ನಟರಾಜ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p><strong>‘ನಿತ್ಯ ಒಂದೊಂದು ತಾಲ್ಲೂಕಿನಲ್ಲಿ ಕಾರ್ಯಕ್ರಮ’ </strong></p><p>‘ಆ. 2ರಂದು ಶುಕ್ರವಾರ ಬಿಡದಿಯಲ್ಲಿ ಜನಾಂದೋಲನಕ್ಕೆ ಚಾಲನೆ ಸಿಗಲಿದೆ. ನಂತರ ಬೆಂಗಳೂರು–ಮೈಸೂರು ಮಾರ್ಗದಲ್ಲಿರುವ ತಾಲ್ಲೂಕು ಕೇಂದ್ರದಲ್ಲಿ ನಿತ್ಯ ಒಂದೊಂದು ದಿನ ಕಾರ್ಯಕ್ರಮ ಆಯೋಜಿಸಲಾಗುವುದು. 3ರಂದು ರಾಮನಗರದಲ್ಲಿ 4ಕ್ಕೆ ಚನ್ನಪಟ್ಟಣ 5ರಂದು ಮದ್ದೂರು 6ಕ್ಕೆ ಮಂಡ್ಯ 7ರಂದು ಶ್ರೀರಂಗಪಟ್ಟಣ ಹಾಗೂ 8ರಂದು ಮೈಸೂರಿನಲ್ಲಿ ಸಮಾರೋಪ ಕಾರ್ಯಕ್ರಮ ನಡೆಯಲಿದೆ’ ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ‘ಪ್ರಜಾವಾಣಿ’ಗೆ ತಿಳಿಸಿದರು. ‘ಅನ್ಯಾಯದ ವಿರುದ್ಧ ಜನಾಂದೋಲನ’ ‘ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಹಿಂದಿನಿಂದಲೂ ಅನ್ಯಾಯ ಮಾಡುತ್ತಲೇ ಬಂದಿದೆ. ಈ ಸಲದ ಬಜೆಟ್ನಲ್ಲೂ ಅದು ಮುಂದುವರಿದಿದೆ. ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದರು ಕೇಂದ್ರದಿಂದ ಅನುದಾನ ತರುವ ಬದಲು ರಾಜ್ಯ ಸರ್ಕಾರದ ವಿರುದ್ಧ ಬೂಟಾಟಿಕೆಯ ಪಾದಯಾತ್ರೆ ಮಾಡಲು ಮುಂದಾಗಿದ್ದಾರೆ. ನಮ್ಮ ಜನಾಂದೋಲನದಲ್ಲಿ ಕೇಂದ್ರದ ಅನ್ಯಾಯ ಹಾಗೂ ಮಲತಾಯಿ ಧೋರಣೆ ಬಗ್ಗೆ ಜನರಿಗೆ ತಿಳಿಸಿ ಛೀಮಾರಿ ಹಾಕಿಸುವ ಕೆಲಸ ಮಾಡುತ್ತೇವೆ’ ಎಂದು ಬಾಲಕೃಷ್ಣ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>