<p><strong>ಕನಕಪುರ</strong>: ಮಳಗಾಳು ಗ್ರಾಮದಲ್ಲಿ ನಡೆದಿರುವ ದಲಿತರ ಮೇಲಿನ ದೌರ್ಜನ್ಯ ಘಟನೆಗಳನ್ನು ನೋಡಿದರೆ ಇಲ್ಲಿ ಕಾನೂನು ಸುವ್ಯವಸ್ಥೆ ಇದೆಯಾ? ಸರ್ಕಾರ ಬದುಕಿದೆಯಾ ಎನ್ನುವ ಅನುಮಾನ ಬರುತ್ತಿದೆ ಎಂದು ಜೆಡಿಎಸ್ ಎಸ್ಸಿ-ಎಸ್ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಅನ್ನದಾನಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಇಲ್ಲಿನ ಮಳಗಾಳು ಗ್ರಾಮದ ಎಕೆ ಕಾಲೋನಿಯ ಚೆಲುವಯ್ಯ ಅವರ ಮನೆಗೆ ಮಂಗಳವಾರ ಭೇಟಿ ನೀಡಿ, ರೌಡಿಗಳ ದಾಳಿಯಲ್ಲಿ ಕೈ ಕಳೆದುಕೊಂಡ ಅನೀಶ್ ಮತ್ತು ತೀವ್ರ ಹಲ್ಲೆಗೆ ಒಳಗಾಗಿದ್ದ ಲಕ್ಷ್ಮಣ್ ಅವರ ಆರೋಗ್ಯ ವಿಚಾರಿಸಿ ಮಾತನಾಡಿದರು.</p>.<p>ಇಲ್ಲಿ ನಡೆಯುತ್ತಿರುವ ದಲಿತರ ಮೇಲಿನ ದೌರ್ಜನ್ಯಗಳನ್ನು ನೋಡಿದರೆ ಕಳವಳವಾಗುತ್ತದೆ. ಹಲವು ಬಾರಿ ದಲಿತರ ಮೇಲೆ ದೌರ್ಜನ್ಯ ನಡೆದಿದೆ. ಯುವಕರ ಕೈ ಕಾಲು ಕಡಿದು ಶಾಶ್ವತ ಅಂಗವಿಕಲರನ್ನಾಗಿ ಮಾಡಿದ್ದಾರೆ ಎಂದರು.</p>.<p>ಮಳಗಾಳು ಗ್ರಾಮ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಜ್ಜಿ ಮನೆ, ವಿಧಾನ ಪರಿಷತ್ ಸದಸ್ಯ ಎಸ್.ರವಿ ಅವರ ಗ್ರಾಮವಾಗಿದೆ, ಈ ಗ್ರಾಮದಲ್ಲಿ ದಲಿತರ ಕೇರಿಗೆ ನುಗ್ಗಿ ಪೈಶಾಚಿಕ ಕೃತ್ಯ ನಡೆಸಿ ಮಾರಣಾಂತಿಕ ಹಲ್ಲೇ ನಡೆಸಿದ್ದಾರೆ. ಇದನ್ನೆಲ್ಲಾ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಿತ್ತು ಎಂದು ಕಿಡಿಕಾರಿದರು.</p>.<p>ಗ್ರಾಮದಲ್ಲಿ ಎಲ್ಲಾ ಸಮುದಾಯಗಳು ಪರಸ್ಪರ ಪ್ರೀತಿ ವಿಶ್ವಾಸದಿಂದ ಬದುಕಬೇಕು, ಆದರೆ ಮಳೆಗಾಳು ಗ್ರಾಮದಲ್ಲಿ ದಲಿತರು ಭಯದಿಂದ ಬದುಕುವಂತಾಗಿದೆ ಎಂದರು.</p>.<p>ಈ ಘಟನೆಯಲ್ಲಿ ಕೈ ಕಳೆದುಕೊಂಡಿರುವ ಅನೀಶ್ ಶಾಶ್ವತ ಅಂಗವಿಕಲನಾಗಿದ್ದು ಅವನಿಗೆ ಚಿಕಿತ್ಸೆ ಕೊಡಿಸುವುದು, ಆರೋಪಿಗಳನ್ನು ಬಂಧಿಸುವುದಷ್ಟೇ ಅಲ್ಲ. ಅನೀಶ್ಗೆ ಸರ್ಕಾರಿ ಉದ್ಯೋಗ ಕೊಡಬೇಕು, ಮುಂದೆ ಇಂತಹ ಪ್ರಕರಣಗಳು ನಡೆಯದಂತೆ ಆರೋಪಿಗಳಿಗೆ ಉಗ್ರ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.</p>.<p>ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಬಿ.ನಾಗರಾಜು, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಪಿ.ಕುಮಾರ್, ಜೆಡಿಎಸ್- ಬಿಜೆಪಿ ಮುಖಂಡರಾದ ಸಿದ್ದಮರಿಗೌಡ, ಚಿನ್ನಸ್ವಾಮಿ, ಪುಟ್ಟರಾಜು, ನಲ್ಲಳ್ಳಿ ಶಿವಕುಮಾರ್, ಮುನಿ ವೆಂಕಟಪ್ಪ ಮಾದೇವಪುರ, ರಾಜೇಂದ್ರ, ಸರ್ದಾರ್, ಗುಂಡಪ್ಪ, ಅಶ್ವತ್ ನಾರಾಯಣ ಸಂತ್ರಸ್ತರಾದ ಚೆಲುವಯ್ಯ, ಲಕ್ಷ್ಮಣ್ ಮೊದಲಾದವರು ಉಪಸ್ಥಿತರಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ಮಳಗಾಳು ಗ್ರಾಮದಲ್ಲಿ ನಡೆದಿರುವ ದಲಿತರ ಮೇಲಿನ ದೌರ್ಜನ್ಯ ಘಟನೆಗಳನ್ನು ನೋಡಿದರೆ ಇಲ್ಲಿ ಕಾನೂನು ಸುವ್ಯವಸ್ಥೆ ಇದೆಯಾ? ಸರ್ಕಾರ ಬದುಕಿದೆಯಾ ಎನ್ನುವ ಅನುಮಾನ ಬರುತ್ತಿದೆ ಎಂದು ಜೆಡಿಎಸ್ ಎಸ್ಸಿ-ಎಸ್ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಅನ್ನದಾನಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಇಲ್ಲಿನ ಮಳಗಾಳು ಗ್ರಾಮದ ಎಕೆ ಕಾಲೋನಿಯ ಚೆಲುವಯ್ಯ ಅವರ ಮನೆಗೆ ಮಂಗಳವಾರ ಭೇಟಿ ನೀಡಿ, ರೌಡಿಗಳ ದಾಳಿಯಲ್ಲಿ ಕೈ ಕಳೆದುಕೊಂಡ ಅನೀಶ್ ಮತ್ತು ತೀವ್ರ ಹಲ್ಲೆಗೆ ಒಳಗಾಗಿದ್ದ ಲಕ್ಷ್ಮಣ್ ಅವರ ಆರೋಗ್ಯ ವಿಚಾರಿಸಿ ಮಾತನಾಡಿದರು.</p>.<p>ಇಲ್ಲಿ ನಡೆಯುತ್ತಿರುವ ದಲಿತರ ಮೇಲಿನ ದೌರ್ಜನ್ಯಗಳನ್ನು ನೋಡಿದರೆ ಕಳವಳವಾಗುತ್ತದೆ. ಹಲವು ಬಾರಿ ದಲಿತರ ಮೇಲೆ ದೌರ್ಜನ್ಯ ನಡೆದಿದೆ. ಯುವಕರ ಕೈ ಕಾಲು ಕಡಿದು ಶಾಶ್ವತ ಅಂಗವಿಕಲರನ್ನಾಗಿ ಮಾಡಿದ್ದಾರೆ ಎಂದರು.</p>.<p>ಮಳಗಾಳು ಗ್ರಾಮ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಜ್ಜಿ ಮನೆ, ವಿಧಾನ ಪರಿಷತ್ ಸದಸ್ಯ ಎಸ್.ರವಿ ಅವರ ಗ್ರಾಮವಾಗಿದೆ, ಈ ಗ್ರಾಮದಲ್ಲಿ ದಲಿತರ ಕೇರಿಗೆ ನುಗ್ಗಿ ಪೈಶಾಚಿಕ ಕೃತ್ಯ ನಡೆಸಿ ಮಾರಣಾಂತಿಕ ಹಲ್ಲೇ ನಡೆಸಿದ್ದಾರೆ. ಇದನ್ನೆಲ್ಲಾ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಿತ್ತು ಎಂದು ಕಿಡಿಕಾರಿದರು.</p>.<p>ಗ್ರಾಮದಲ್ಲಿ ಎಲ್ಲಾ ಸಮುದಾಯಗಳು ಪರಸ್ಪರ ಪ್ರೀತಿ ವಿಶ್ವಾಸದಿಂದ ಬದುಕಬೇಕು, ಆದರೆ ಮಳೆಗಾಳು ಗ್ರಾಮದಲ್ಲಿ ದಲಿತರು ಭಯದಿಂದ ಬದುಕುವಂತಾಗಿದೆ ಎಂದರು.</p>.<p>ಈ ಘಟನೆಯಲ್ಲಿ ಕೈ ಕಳೆದುಕೊಂಡಿರುವ ಅನೀಶ್ ಶಾಶ್ವತ ಅಂಗವಿಕಲನಾಗಿದ್ದು ಅವನಿಗೆ ಚಿಕಿತ್ಸೆ ಕೊಡಿಸುವುದು, ಆರೋಪಿಗಳನ್ನು ಬಂಧಿಸುವುದಷ್ಟೇ ಅಲ್ಲ. ಅನೀಶ್ಗೆ ಸರ್ಕಾರಿ ಉದ್ಯೋಗ ಕೊಡಬೇಕು, ಮುಂದೆ ಇಂತಹ ಪ್ರಕರಣಗಳು ನಡೆಯದಂತೆ ಆರೋಪಿಗಳಿಗೆ ಉಗ್ರ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.</p>.<p>ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಬಿ.ನಾಗರಾಜು, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಪಿ.ಕುಮಾರ್, ಜೆಡಿಎಸ್- ಬಿಜೆಪಿ ಮುಖಂಡರಾದ ಸಿದ್ದಮರಿಗೌಡ, ಚಿನ್ನಸ್ವಾಮಿ, ಪುಟ್ಟರಾಜು, ನಲ್ಲಳ್ಳಿ ಶಿವಕುಮಾರ್, ಮುನಿ ವೆಂಕಟಪ್ಪ ಮಾದೇವಪುರ, ರಾಜೇಂದ್ರ, ಸರ್ದಾರ್, ಗುಂಡಪ್ಪ, ಅಶ್ವತ್ ನಾರಾಯಣ ಸಂತ್ರಸ್ತರಾದ ಚೆಲುವಯ್ಯ, ಲಕ್ಷ್ಮಣ್ ಮೊದಲಾದವರು ಉಪಸ್ಥಿತರಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>